ವಿಜಯಪುರ | ಬಂಜಾರ ಸಂಸ್ಕೃತಿ ಅತ್ಯಂತ ಶ್ರೀಮಂತ ಸಂಸ್ಕೃತಿ: ಮಹಿಳಾ ವಿವಿ ಕುಲಪತಿ ಬಿ ಕೆ ತುಳಸಿಮಾಲ

Date:

Advertisements

ಬಂಜಾರ ಸಂಸ್ಕೃತಿಯು ಅತ್ಯಂತ ಶ್ರೀಮಂತ ಸಂಸ್ಕೃತಿಯಾಗಿದ್ದು, ಇದನ್ನು ಕಾಪಾಡಿಕೊಂಡು ಹೋಗುವುದು ಅತಿ ಅವಶ್ಯಕ ಎಂದು ‌ವಿಜಯಪುರದ ಮಹಿಳಾ ವಿವಿ ಕುಲಪತಿ ಬಿ ಕೆ ತುಳಸಿಮಾಲ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ “ಬಂಜಾರ ಭಾಷೆ, ಶಿಕ್ಷಣ ಮತ್ತು ಸಮಾಜ” ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಪಾರಂಪರಿಕ ಕಲೆಯಾದ ಕಸೂತಿಯನ್ನು ಅಧುನೀಕರಣಕ್ಕೆ ಒಳಪಡಿಸಿ ಅಂತಾರಾಷ್ಟ್ರೀಯ ಮಟ್ಟದ ಉದ್ಯಮವನ್ನಾಗಿ ಬೆಳೆಸುವುದು ಅವಶ್ಯಕವಾಗಿದೆ. ಹಾಗೆಯೇ ಬಂಜಾರ ಭಾಷೆ ಮತ್ತು ಸಾಹಿತ್ಯ ಅತ್ಯಂತ ಶ್ರೀಮಂತವಾಗಿರುವುದರಿಂದ ಅದನ್ನು ದಾಖಲಿಸುವುದು ಅವಶ್ಯಕವಾಗಿದೆ. ಈ ಸಮಾಜದ ಸುಸ್ಥಿರ ಅಭಿವೃದ್ಧಿಗೆ ಮಾರ್ಗೋಪಾಯಗಳನ್ನು ಕಂಡುಹಿಡಿಯುವುದು ಪ್ರಜ್ಞಾವಂತರ ಕರ್ತವ್ಯವಾಗಿದೆ” ಎಂದರು.

Advertisements

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಬಂಜಾರ ಸಮುದಾಯದವರು ಕಾಯಕ ಜೀವಿಗಳಾಗಿದ್ದಾರೆ” ಎಂದರು.

ಈ ಕಾರ್ಯಕ್ರಮದಲ್ಲಿ ಪ್ರೊ ನಾರಾಯಣ ಪವಾರ ಬಂಜಾರ ಭಾಷೆ ಆಳಿವು-ಉಳಿವು ಕುರಿತು ವಿಷಯ ಮಂಡಿಸಿದರು. ಡಾ ಸವಿತಾ ಲಮಾಣಿಯವರು ಬಂಜಾರ ಸಮುದಾಯದಲ್ಲಿ ಸಾಮಾಜಿಕ ಬದಲಾವಣೆ ವಿಷಯದ ಕುರಿತು ಉಪನ್ಯಾಸ ನೀಡಿದರು. ಸಂಗೀತಾ ನಾಯಕ ಬಂಜಾರ ಸಮುದಾಯ ಮತ್ತು ಶಿಕ್ಷಣ ಕುರಿತು ಮಾತನಾಡಿದರು. ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಸದಸ್ಯ ಡಾ. ಸುರೇಖಾ ಜಿ ರಾಠೋಡ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಂಜಾರ ಸಂಸ್ಕೃತಿ, ಕಲೆಗೆ ರಾಷ್ಟ್ರೀಯ ಮಹತ್ವವಿದೆ: ಡಾ. ಎ ಆರ್ ಗೋವಿಂದಸ್ವಾಮಿ

ಈ ಕಾರ್ಯಕ್ರಮದಲ್ಲಿ ಆರ್ ಬಿ ನಾಯಕ, ವಸಂತ ಚವ್ಹಾಣ ಮತ್ತು ಬಂಜಾರ ಸಮುದಾಯದ ಮುಖಂಡರು, ಹಿರಿಯರು, ನೃತ್ಯ ತಂಡದವರು, ಕವಿಗಳು ಸೇರಿಂತೆ ಇತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X