ಪ್ಯಾರಾಲಿಂಪಿಕ್ಸ್ | ಇತಿಹಾಸ ಬರೆದ ಬಿಲ್ಲುಗಾರ ಹರ್ವಿಂದರ್ ಸಿಂಗ್; ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನ

Date:

Advertisements

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಬಿಲ್ಲುಗಾರ ಹರ್ವಿಂದರ್ ಸಿಂಗ್ ಹೊಸ ಇತಿಹಾಸವನ್ನು ಬರೆದಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಮೊಟ್ಟಮೊದಲ ಭಾರತೀಯ ಬಿಲ್ಲುಗಾರ ಎಂಬ ಹೆಗ್ಗಳಿಕೆಗೆ ಹರ್ವೀಂದರ್ ಸಿಂಗ್ ಅವರು ಪಾತ್ರರಾಗಿದ್ದಾರೆ.

ಪುರುಷರ ವೈಯಕ್ತಿಕ ರಿಕರ್ವ್ ಓಪನ್‌ನ ಫೈನಲ್‌ನಲ್ಲಿ ಹರ್ವಿಂದರ್ 6-0 ಅಂತರದಲ್ಲಿ ಪೋಲೆಂಡ್‌ನ ಲುಕಾಸ್ಜ್ ಸಿಸ್ಜೆಕ್ ಅವರನ್ನು ಸೋಲಿಸಿ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕವನ್ನು ಗೆದ್ದುಕೊಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಗೌರಿ ಲಂಕೇಶ್‌ ಹತ್ಯೆಯಾಗಿ ಏಳು ವರ್ಷ: ಕುಂಟುತ್ತ ಸಾಗಿದೆ ಆರೋಪಿಗಳ ವಿಚಾರಣೆ

Advertisements

2021ರಲ್ಲಿ ಟೋಕಿಯೊದಲ್ಲಿ ಕಂಚು ಗೆದ್ದ ಹರ್ವಿಂದರ್ ಪ್ಯಾರಾಲಿಂಪಿಕ್ಸ್‌ನಲ್ಲಿ ಇದು ಗೆದ್ದ ಎರಡನೇ ಪದಕವಾಗಿದೆ. ಮಿಕ್ಸ್ ಟೀಮ್ ಕಾಂಪೌಂಡ್ ಓಪನ್‌ನಲ್ಲಿ ರಾಕೇಶ್ ಕುಮಾರ್ ಮತ್ತು ಶೀತಲ್ ದೇವಿ ಕಂಚಿನ ಪದಕ ಗೆದ್ದಿದ್ದು ಬಿಲ್ಲುಗಾರಿಕೆಯಲ್ಲಿ ಭಾರತಕ್ಕೆ ಲಭಿಸಿದ ಮೂರನೇ ಪದಕ ಇದಾಗಿದೆ.

ಇನ್ನು ನಿನ್ನೆ ನಡೆದ ಪ್ಯಾರಾಲಿಂಪಿಕ್ಸ್‌ ಪಂದ್ಯದಲ್ಲಿ ಭಾರತದ ಅಥ್ಲೀಟ್‌ಗಳು ಎರಡು ಚಿನ್ನ ಸೇರಿ ಒಟ್ಟು ನಾಲ್ಕು ಪದಕಗಳನ್ನು ಗೆದ್ದಿದ್ದಾರೆ. ಇದರಿಂದಾಗಿ ಭಾರತಕ್ಕೆ ಲಭಿಸಿದ ಒಟ್ಟು ಪದಕಗಳ ಸಂಖ್ಯೆಯು 24ಕ್ಕೆ ಏರಿಕೆಯಾಗಿದೆ.

ಇದನ್ನು ಓದಿದ್ದೀರಾ? ಪ್ಯಾರಾಲಿಂಪಿಕ್ಸ್ | ಶಾಟ್‌ ಪುಟ್‌: ಬೆಳ್ಳಿ ಗೆದ್ದ ಸಚಿನ್ ಖಿಲಾರಿ; ಭಾರತಕ್ಕೆ 21ನೇ ಪದಕ

ಬಿಲ್ಲುಗಾರ ಹರ್ವಿಂದರ್ ಸಿಂಗ್ ಚಿನ್ನ ಗೆದ್ದರೆ, ಪುರುಷರ ಕ್ಲಬ್ ಥ್ರೋ ಎಫ್51 ಸ್ಪರ್ಧೆಯ ಫೈನಲ್‌ನಲ್ಲಿ ಧರಮ್ ಬೀರ್ ಸಿಂಗ್ ಕೂಡಾ ಚಿನ್ನ ತನ್ನದಾಗಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಭಾರತದವರೇ ಆದ ಪ್ರಣವ್ ಸೂರ್ಮಾ ಬೆಳ್ಳಿ ಪದಕ ಗೆದ್ದಿದ್ದಾರೆ. ಇದಕ್ಕೂ ಮುನ್ನ ವಿಶ್ವಚಾಂಪಿಯನ್ ಸಚಿನ್ ಸರ್ಜೆರಾವ್ ಖಿಲಾರಿ ಪುರುಷರ ಎಫ್46 ಶಾಟ್ ಪುಟ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X