ಚಿಕ್ಕಮಗಳೂರು | ಅಕ್ರಮವಾಗಿ 27 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ: ಬಿ ಆರ್ ಭಾಸ್ಕರ್ ಪ್ರಸಾದ್

Date:

Advertisements

ಒತ್ತುವರಿಯಾಗಿರುವ 27,000 ಎಕರೆ ಅರಣ್ಯ ಭೂಮಿ ಹಾಗೂ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಿ, ಅಕ್ರಮ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಆರ್ ಭಾಸ್ಕರ್ ಪ್ರಸಾದ್ ಆಗ್ರಹಿಸಿದರು.

ಚಿಕ್ಕಮಗಳೂರು ನಗರದಲ್ಲಿ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದಿಂದ ನಡೆಸಿದ ನಾಯಕರ ಸಭೆಯಲ್ಲಿ ಮಾತನಾಡಿ, “ಜಿಲ್ಲೆಯಾದ್ಯಂತ ಒಟ್ಟು 27,000 ಎಕರೆಗೂ ಹೆಚ್ಚು ಅರಣ್ಯ, ಸ್ಮಶಾನ, ಗೋಮಾಳ, ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದು, ಅರಣ್ಯ ಒತ್ತುವರಿ ತೆರವಿಗೆ ರಾಜ್ಯ ಅರಣ್ಯ ಸಚಿವರು ಈ ಹಿಂದೆ ಖಡಕ್ ಸೂಚನೆ ನೀಡಿದ್ದರು ಹಾಗೂ ಸುಪ್ರೀಂ ಕೋರ್ಟ್‌ನ ಹಸಿರು ಪೀಠವು ಮೀಸಲು ಅರಣ್ಯ ಒತ್ತುವರಿ ತೆರವುಗೊಳಿಸಬೇಕು ಇಲ್ಲದೆ ಹೋದರೆ ಸಂಬಂಧಿಸಿದ ಅರಣ್ಯಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಹಲವು ಪ್ರಕರಣಗಳಲ್ಲಿ ಪುನರುಚ್ಚರಿಸಿಸುತ್ತಲೇ ಬಂದಿದೆ” ಎಂದರು.

“ನ್ಯಾಯಲಯಗಳಲ್ಲಿ ಅರಣ್ಯ ಇಲಾಖೆಯ ಪರವಾಗಿಯೇ ತೀರ್ಪುಗಳು ಬಂದಿದೆ. ಸರ್ಕಾರಿ ಜಮೀನುಗಳ ಒತ್ತುವರಿ ತೆರವುಗೊಳಿಸಿದ ಪ್ರಕರಣದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾನೂನುಬದ್ಧಗೊಳಿಸಿರುವ ಅಕ್ರಮ ಒತ್ತುವರಿದಾರರ ವಿರುದ್ಧ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಪ್ರಕರಣದಲ್ಲಿ ಅಕ್ರಮ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಜೀವನೋಪಾಯಕ್ಕಾಗಿ ಅಲ್ಪಸ್ವಲ್ಪ ಒತ್ತುವರಿ ಮಾಡಿರುವವರನ್ನು ಬಿಡಿಸುವ ಮುನ್ನ ನೂರಾರು ಎಕರೆಗೂ ಹೆಚ್ಚು ಅರಣ್ಯ ಒತ್ತುವರಿ ಮಾಡಿರುವ ಪ್ರಭಾವಿಗಳನ್ನು ಬಿಡಿಸುವ ಕೆಲಸ ಮಾಡಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಂಜಾರ ಸಂಸ್ಕೃತಿ, ಕಲೆಗೆ ರಾಷ್ಟ್ರೀಯ ಮಹತ್ವವಿದೆ: ಡಾ. ಎ ಆರ್ ಗೋವಿಂದಸ್ವಾಮಿ

ಪಕ್ಷದ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಮೀಲ್ ಅಹ್ಮದ, ಮುಬಾರಕ್, ಜಮೀಲ್ ಖಾನ್, ಅಂಗಡಿ ಚಂದ್ರು, ಮೊಹಮ್ಮದ್ ಜೀಲಾನ್, ಆಫ್ರೀದ್ ಸೇರಿದಂತೆ ಕಾರ್ಯಕರ್ತರು ಹಾಗೂ ಸ್ಥಳೀಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X