ಚಿಂತಾಮಣಿ | ನಗರಸಭಾ ಸದಸ್ಯನ ಕೊಲೆಗೆ ಯತ್ನ: ಆರೋಪಿಯ ಬಂಧನ

Date:

Advertisements

ಹಳೆಯ ದ್ವೇಷ ಇಟ್ಟುಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭಾ ಸದಸ್ಯನ ಕೊಲೆಗೆ ಯತ್ನ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಿಂತಾಮಣಿ ನಗರದ ವಾರ್ಡ್ ಸಂಖ್ಯೆ 3ರ ನಗರಸಭಾ ಸದಸ್ಯ ಸಿ ಕೆ ಶಬ್ಬೀರ್ ಅವರೊಂದಿಗೆ ಹಣ ಕೇಳುವ ವಿಚಾರಕ್ಕೆ ಮಾತುಕತೆ ನಡೆದಿದ್ದು, ಈ ವೇಳೆ ಡ್ರಾಗರ್‌ನಿಂದ ಕೊಲೆ ಮಾಡಲು ಯತ್ನಿಸಲಾಗಿದೆ. ಘಟನೆಯು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟಗಿರಿಕೋಟೆಯಲ್ಲಿ ಬುಧವಾರ ರಾತ್ರಿ 8ರ ಸುಮಾರಿಗೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಆರೋಪಿ ಮನ್ಸೂರ್ ಅಲಿಯಾಸ್ ಚೋಟು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ನಗರಸಭಾ ಸದಸ್ಯ ಸಿ ಕೆ ಶಬ್ಬೀರ್ ರಾತ್ರಿ ಸುಮಾರು 8ರ ವೇಳೆಗೆ ಅದೇ ವಾರ್ಡಿನ ವಾಸಿಯಾದ ಮನ್ಸೂರ್ ಅಲಿಯಾಸ್ ಚೋಟು, ನಗರಸಭಾ ಸದಸ್ಯನ ಬಳಿ ಬಂದು 100/-ರೂ ಹಣ ಕೊಡು ಎಂದು ಕೇಳಿದ್ದಾರೆ. ಈ ವೇಳೆ ಶಬ್ಬೀರ್ ಅವರು ತನ್ನ ಮಗನಾದ ಜಾಬೀರ್ ಅವರ ಬಳಿ ಹೋಗಿ ತೆಗೆದುಕೋ ಎಂತ ಹೇಳಿದ್ದರು. ಅದಕ್ಕೆ ಉತ್ತರಿಸಿದ್ದ ಆರೋಪಿ ಮನ್ಸೂರ್, ನಿಮ್ಮ ಜಾಬೀರ್ ಯಾರ ಜೊತೆಯಲ್ಲಿಯೋ ಮಾತನಾಡುತ್ತಿದ್ದಾನೆ ಎಂದು ಉತ್ತರಿಸಿದ್ದಾನೆ. ಇದೇ ವೇಳೆ ವಾಗ್ವಾದ ನಡೆದಾಗ, ತನ್ನ ಬೆನ್ನಿನ ಹಿಂದೆ ಇಟ್ಟುಕೊಂಡಿದ್ದ ಒಂದು ಡ್ರಾಗರ್ ತರಹದ ದೊಡ್ಡ ಚಾಕುವನ್ನು ಏಕಾಏಕಿ ತೆಗೆದು ತಿವಿಯಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಬಂದು ನಗರಸಭಾ ಸದಸ್ಯನನ್ನು ಬಚಾವ್ ಮಾಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ರಾಯಚೂರು | ಶಾಲಾ ಬಸ್‌ ಅಪಘಾತ: ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಈ ಘಟನೆಯ ವಿಷಯ ತಿಳಿದ ತಕ್ಷಣ ನಗರ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ವಿಜಿ ಕುಮಾರ್ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡಿ, ಆರೋಪಿ ಮನ್ಸೂರ್‌ನನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X