ಹುಬ್ಬಳ್ಳಿ | ಒಳಚರಂಡಿ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆ ಸೌಲಭ್ಯ ಒದಗಿಸಲು ಪೌರಕಾರ್ಮಿಕರ ಸಂಘದಿಂದ ಮನವಿ

Date:

Advertisements

ಕನಿಷ್ಠ ವೇತನ ಕಾಯ್ದೆ ಅನ್ವಯ ಮಾಸಿಕ ವೇತನ ಪಾವತಿ ಹಾಗೂ ಗುತ್ತಿಗೆ ಕಾರ್ಮಿಕ ಕಾಯ್ದೆ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ, ಹಾಗೂ ಪೌರಕಾರ್ಮಿಕರ ಸಂಘದ ವತಿಯಿಂದ ಹುಬ್ಬಳ್ಳಿ-ಧಾರವಾಡ ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೇರವೇತನ ಹಾಗೂ ಗುತ್ತಿಗೆ ಪೌರಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ 1948ರ ಅನ್ವಯ ಪ್ರತಿ ತಿಂಗಳು 7ನೇ ತಾರೀಖಿನ ಒಳಗಾಗಿ ಮಾಸಿಕ ವೇತನ ಕಡ್ಡಾಯವಾಗಿ ಪಾವತಿಸಬೇಕು. ಪಾಲಿಕೆ ಗುತ್ತಿಗೆ ಪೌರ ಕಾರ್ಮಿಕರಿಗೆ 3 ತಿಂಗಳಿಗೊಮ್ಮೆ ವೇತನ ಹಾಗೂ ನೇರವೇತನ ಪೌರಕಾರ್ಮಿಕರಿಗೆ 2 ತಿಂಗಳಿಗೊಮ್ಮೆ ವೇತನ ಪಾವತಿಸುವ ಮೂಲಕ ಶಾಸನಬದ್ಧ ಸೌಲಭ್ಯಗಳಿಂದ ಬಡ ದಲಿತ ಪೌರಕಾರ್ಮಿಕರಿಗೆ ಶೋಷಣೆ ಹಾಗೂ ವಂಚನೆ ಮಾಡಲಾಗುತ್ತಿದೆ ಎಂದು ಅರೋಪಿಸಿದರು.

ಹೊರಗುತ್ತಿಗೆ ಮೂಲಕ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಾಲಿಕೆಯ ಗುತ್ತಿಗೆ ಕರಾರಿನಂತೆ ಗುತ್ತಿಗೆದಾರರು ಪ್ರತಿ ತಿಂಗಳು ತಪ್ಪದೇ ನಿಗಧಿತ ಸಮಯಕ್ಕೆ ವೇತನ ಪಾವತಿಸಿ ಪಾಲಿಕೆಗೆ ದಾಖಲೆಗಳನ್ನು ಸಲ್ಲಿಸಬೇಕು. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಪ್ರತಿ ತಿಂಗಳು 7ನೇ ತಿಂಗಳಿನ ಒಳಗಾಗಿ ಪೌರಕಾರ್ಮಿಕರ ಮಾಸಿಕ ವೇತನ, ಇಎಸ್ಐ, ಪಿಎಫ್. ಮೊತ್ತಗಳನ್ನು ಪಾವತಿಸಿದ ನಂತರ ಅವರು ಸಲ್ಲಿಸಿದ ಗುತ್ತಿಗೆ ಬಿಲ್‌ಗಳನ್ನು ಸಂದಾಯ ಮಾಡಬೇಕು ಎಂದು ಒತ್ತಾಯಿಸಿದರು.

Advertisements

ಕಾರ್ಮಿಕ ಇಲಾಖೆಯಿಂದ ಗುತ್ತಿಗೆ ಲೈಸೆನ್ಸ್ ನೋಂದಣಿ ಮೂಲ ಮಾಲಿಕರಿಂದ ನೋಂದಣಿ ಪ್ರಮಾಣ ಪತ್ರ, ಗುತ್ತಿಗೆ ಕಾರ್ಮಿಕ ಕಲ್ಯಾಣ ಮತ್ತು ಆರೋಗ್ಯ ಸೌಲಭ್ಯಗಳ ಅನುಷ್ಠಾನ, ಕ್ಯಾಂಟೀನ್, ವಿಶ್ರಾಂತಿ ಕೊಠಡಿಗಳು, ನಾಮಫಲಕ ಪ್ರಕಟಣೆ, ಪ್ರಥಮ ಚಿಕಿತ್ಸೆ ಸೌಲಭ್ಯಗಳು ಒದಗಿಸುವುದು ನಡೆಯಬೇಕು. ಶಾಸನಬದ್ಧ ಕಾರ್ಮಿಕ ಕಾಯ್ದೆ ಸೌಲಭ್ಯಗಳನ್ನು ಪೌರಕಾರ್ಮಿಕರಿಗೆ ದೊರಕಿಸಿಕೊಡುವಲ್ಲಿ ನಿರ್ಲಕ್ಷ್ಯ ವಹಿಸುವ ಪಾಲಿಕೆ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕ: ಮೇಯರ್ ರಾಮಪ್ಪ ಬಡಿಗೇರ

ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ಡಾ. ವಿಜಯ ಗುಂಟ್ರಾಳ, ಶರಣಪ್ಪ ಅಮರಾವತಿ, ಪ್ರಕಾಶ ಕಡಕೋಳ, ಸತೀಶ ಹೂಗಾರ, ಆನಂದ ಸವಣೂರ ದೇವಪ್ಪ ಮುದಿಘಾಟ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X