ಬೆಂಗಳೂರು | ಗಣೇಶ ಹಬ್ಬ: ಶನಿವಾರ ಮಾಂಸ ಮಾರಾಟ ನಿಷೇಧ

Date:

Advertisements

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರ ಶನಿವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ.

ಮಾಂಸ ಮಾರಾಟ ನಿಷೇಧಿಸಿ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, “ಗಣೇಶ ಚರುರ್ಥಿ ಪ್ರಯುಕ್ತ ಶನಿವಾರ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಮತ್ತು ಮಾಂಸದಂಗಡಿಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ” ಎಂದು ಹೇಳಿದೆ.

ಇನ್ನು, ಹಬ್ಬದ ವೇಳೆ ವಿದ್ಯುತ್ ಅವಘಡಗಳು ನಡೆಯದಂತೆ ಎಚ್ಚರಿಕೆ ವಹಿಸಲು ಬೆಸ್ಕಾಂ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. “ಯಾವುದೇ ವಿದ್ಯುತ್ ಅವಘಡಗಳು ಸಂಭವಿಸಿದರೆ ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಬೇಕು” ಎಂದು ಜನರಲ್ಲಿ ಮನವಿ ಮಾಡಿದೆ.

Advertisements

“ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ ಹಾಕುವಾಗ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರವಹಿಸಬೇಕು. ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟಬಾರದು. ಮೆರವಣಿಗೆ ವೇಳೆ ರಸ್ತೆ ಬದಿ ವಿದ್ಯುತ್‌ ತಂತಿಗಳನ್ನು ಮೇಲಕ್ಕೆತ್ತಲು ಪ್ರಯತ್ನಿಸಬಾರದು” ಎಂದು ಎಚ್ಚರಿಕೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X