ವಿಜಯನಗರ | ತಾಡಪಲ್‌ ದರ ದುಪ್ಪಟ್ಟು : ಬೆಲೆ ಕಡಿಮೆಗೊಳಿಸಲು ಆಗ್ರಹಿಸಿ ರೈತ ಸಂಘದಿಂದ ಮನವಿ

Date:

Advertisements

ಕೃಷಿ ಇಲಾಖೆಯಲ್ಲಿ ನೀಡಲಾಗುತ್ತಿರುವ ಸಹಾಯಧನದ ತಾಡಪಲ್ ದರವನ್ನು ಸರಕಾರ ದುಪ್ಪಟ್ಟುಗೊಳಿಸಿದೆ. ಅದನ್ನು ಕಡಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಹೂವಿನ ಹಡಗಲಿ ತಾಲೂಕು ಘಟಕದ ಮುಖಂಡರು ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಕಳೆದ ವರ್ಷ ಸಾಮಾನ್ಯ ರೈತರಿಗೆ ನೀಡಲಾಗುತ್ತಿದ್ದ ತಾಡಪಲ್‌ ದರವು ₹950 ಇತ್ತು. ಈ ವರ್ಷ ₹1670 ಆಗಿದೆ. ಎಸ್‌ಸಿ-ಎಸ್‌ಟಿ ಸಮುದಾಯದ ರೈತರಿಗೆ ₹250 ಇದ್ದ ತಾಡಪಲ್ ದರವು, ಈ ವರ್ಷ ₹570 ರೂಪಾಯಿಗೆ ಹೆಚ್ಚಿಸಿದ್ದಾರೆ. ರೈತರ ಗಾಯದ ಮೇಲೆ ಸರಕಾರ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೂವಿನ ಹಡಗಲಿ ತಾಲೂಕು ಬರಪೀಡಿತಗೊಂಡಿದ್ದು, ರೈತರು ಕಷ್ಟ ಅನುಭವಿಸತ್ತಿದ್ದಾರೆ. ಸರಕಾರವೇ ಬರಪೀಡಿತ ತಾಲೂಕು ಎಂದು ಸರಕಾರ ಘೋಷಣೆ ಮಾಡಿದೆ. ಆದರೂ ಇಂತಹ ನಿರ್ಧಾರಕ್ಕೆ ಮುಂದಾಗಿರುವುದು ಅಕ್ಷಮ್ಯ. ರೈತರು ಸಮಸ್ಯೆ ಎದುರಿಸುತ್ತಿರುವಾಗ ಸರಕಾರ ಏಕಾಏಕಿ ದರ ಹೆಚ್ಚಿಸಿ ಮಣ್ಣು ಮುಕ್ಕಿಸುವ ಕೆಲಸ ಮಾಡಿದೆ ಎಂದು ರೈತರು ಪ್ರತಿಭಟಿಸಿದರು.

Advertisements

ಇದನ್ನು ಓದಿದ್ದೀರಾ? ಎತ್ತಿನಹೊಳೆ | ಮುಖ್ಯಮಂತ್ರಿ ಅವರಿಂದ ಬಾಗಿನ ಅರ್ಪಿಸಲು ನಿರ್ಮಿಸಲಾಗಿದ್ದ ಮಂಟಪ ದಿಢೀರ್‌ ಕುಸಿತ

ಹಿಂದೆ ಇದ್ದ ಬೆಲೆಗೆ ಮತ್ತು ಗುಣಮಟ್ಟದ ತಾಡಪಲ್ ವಿತರಿಸಬೇಕು ಎಂದು ರೈತರು ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಈ ವೇಳೆ ತಾಲೂಕು ಅಧ್ಯಕ್ಷ ಸಿದ್ದಪ್ಪ ಹೊಸಮನಿ, ಪ್ರಧಾನ ಕಾರ್ಯದರ್ಶಿ ಶಿವರಾಜ್ ಹೊಳಗುಂದಿ, ಜಿಲ್ಲಾಧ್ಯಕ್ಷರು ಸೋಮಶೇಖರಪ್ಪ , ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಚನ್ನವೀರಮ್ಮ, ದುರ್ಗಪ್ಪ, ಶಿವನಾಗಪ್ಪ, ಗಿರೀಶ್, ಮಂಜುನಾಥ್,ಮೈಲಾರ, ಶರಣಪ್ಪ, ಶಂಕರಗೌಡ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X