ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಹೆತ್ತವರ ನಂತರದ ಸ್ಥಾನವನ್ನು ಗುರುವಿಗೆ ನೀಡುತ್ತಾರೆ. ಕಾರಣ ಪ್ರತಿವ್ಯಕ್ತಿಯ ಬದುಕನ್ನು ಬೆಳಗಿಸಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬದಲಾವಣೆ ಮಾಡುವ ಶಕ್ತಿ ಶಿಕ್ಷಕರಿಗೆ ಮಾತ್ರ ಸಲ್ಲುತ್ತದೆ ಎಂದು ಸಾಮಾಜಿಕ ಹೋರಾಟಗಾರ ಮಾರುತಿ ಗಂಜಗಿರಿ ಹೇಳಿದರು.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೂನಿಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಹೆತ್ತವರ ನಂತರದ ಸ್ಥಾನವನ್ನು ಗುರುವಿಗೆ ನೀಡುತ್ತಾರೆ. ಯಾಕೆಂದರೆ ಪ್ರತಿ ವ್ಯಕ್ತಿಯ ಬದುಕನ್ನು ಬೆಳಗಿಸಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬದಲಾವಣೆ ಮಾಡುವ ಶಕ್ತಿ ಶಿಕ್ಷಕರಿಗೆ ಮಾತ್ರ ಸಲ್ಲುತ್ತದೆ. ಆದ್ದರಿಂದ ಇಡೀ ಪ್ರಪಂಚವೇ ಅವರನ್ನು ಅಗ್ರಸ್ಥಾನದಲ್ಲಿಟ್ಟು ಗೌರವಿಸುತ್ತದೆ ಎಂದರು.
ಭಾರತ ರತ್ನ, ಸ್ವತಂತ್ರ ಭಾರತದ ಎರಡನೇ ಉಪರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ ಜನ್ಮ ದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಏನನ್ನಾದರು ಸಾಧಿಸಬೇಕಾದರೆ ಅವರ ಹಿಂದೆ ಶಿಕ್ಷಕರ ಪ್ರಮುಖ ಪಾತ್ರವಿದೆ ಎಂದರು.
ಈ ಸುದ್ಧಿ ಓದಿದ್ದೀರಾ? ಯಾದಗಿರಿ | ಸತತ ಮಳೆಯಿಂದಾಗಿ ರೈತರ ಬೆಳೆ, ಮನೆಗಳಿಗೆ ಹಾನಿ: ಸೂಕ್ತ ಪರಿಹಾರ ನೀಡಲು ಒತ್ತಾಯ
ಶಾಲೆಯ ಮುಖ್ಯಗುರುಗಳಾದ ಸುನಿತಾ ಪೂಜಾರಿ, ಸಹಶಿಕ್ಷಕಿ ಶಶಿಕಲಾ, ಅಂಗನವಾಡಿ ಕಾರ್ಯಕರ್ತೆ ಸುವರ್ಣಾ, ಬಿಸಿ ಊಟ ಅಡುಗೆ ಸಿಬ್ಬಂದಿ ಪದ್ಮಾವತಿ, ಚಂದ್ರಕಲಾ ಉಪಸ್ಥಿತರಿದ್ದರು.
