ತುಮಕೂರು | ಮೀಟರ್ ಬಡ್ಡಿ ದಂಧೆಯ ಕಿರುಕುಳ: ವಿಡಿಯೋ ಮಾಡಿಟ್ಟು ಬೇಕರಿ ಮಾಲೀಕ ಆತ್ಮಹತ್ಯೆ

Date:

Advertisements

ಮೀಟರ್ ಬಡ್ಡಿ ಕಿರುಕುಳಕ್ಕೆ ಬೇಸತ್ತು ತುಮಕೂರು ಜಿಲ್ಲೆಯ ಗುಬ್ಬಿ ಹೊರವಲಯದ ಸಿಐಟಿ ಕಾಲೇಜು ಬಳಿ ಇರುವ ಬೇಕರಿ ಅಂಗಡಿಯ ಮಾಲೀಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಬಸವರಾಜು(45) ಎಂದು ಗುರುತಿಸಲಾಗಿದೆ. ಸಾವಿಗೆ ಶರಣಾಗುವುದಕ್ಕೂ ಮುನ್ನ ಮಾಡಿರುವ ವಿಡಿಯೋದಲ್ಲಿ ಮೀಟರ್ ಬಡ್ಡಿ ದಂಧೆ, ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದಾರೆ.

ಸಿಐಟಿ ಕಾಲೇಜು ಮುಂಭಾಗ ಬೇಕರಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದ ಮೃತ ಬಸವರಾಜು, ಚೆಕ್ ನೀಡಿ ಪಡೆದಿದ್ದ ಸಾಲಕ್ಕೆ ಮೀಟರ್ ಬಡ್ಡಿ ನೀಡುವಂತೆ ಮೀಟರ್ ಬಡ್ಡಿ ನಾಗ ಎಂಬ ವ್ಯಕ್ತಿ ಕೇಳಿರುವುದಾಗಿ ನೇರ ಆರೋಪ ಮಾಡಿದ್ದಾರೆ. ಬಡ್ಡಿಗೆ ಸಾಲ ನೀಡಿದ್ದ ನಾಗ ಎಂಬಾತನ ಎಲ್ಲ ಸಾಲವನ್ನೂ ತೀರಿಸಿದ್ದೇನೆ. ಆದರೂ ನನಗೆ ಕಿರುಕುಳ ನೀಡುತ್ತಿದ್ದ. ಹಾಗಾಗಿ, ಈ ನಿರ್ಧಾರ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿ, ನಂತರ ಬೇಕರಿಯಲ್ಲೇ ಆತ್ಮಹತ್ಯೆ ಶರಣಾಗಿದ್ದಾರೆ. ಇವರು ಪತ್ನಿ, ಮಗುವನ್ನು ಅಗಲಿದ್ದಾರೆ.

Advertisements

“ನಾಗುಗೆ ನಾನು ಸಾಲ ಎಲ್ಲ ಕೊಟ್ಟಿದ್ದೀನಿ. ಅವನು ಕೊಟ್ಟಿದ್ದ ಚೆಕ್ ವಾಪಸ್ ಕೊಡದೆ ಬೆದರಿಸುತ್ತಿದ್ದಾನೆ. ತುಂಬಾ ರೌಡಿಸಂ ಮಾಡುತ್ತಿದ್ದಾನೆ. ನಂದಿನಿ ಪಾರ್ಲರ್ ನವನು ಓಡಿ ಹೋಗಲು ಇವನೇ ಕಾರಣ. ಯಾವುದೇ ಸಾಲ ಇಲ್ಲದಿದ್ದರೂ ತುಂಬಾ ಕಿರುಕುಳ ನೀಡುತ್ತಿದ್ದಾನೆ. ಎಷ್ಟೋ ಜನ ಇವನಿಂದ ಹೆದರಿ ಓಡಿ ಹೋಗಿದ್ದಾರೆ. ತುಂಬಾ ರೌಡಿಸಂ ಮಾಡುತ್ತಾನೆ. ನನಗೆ ಅವರು ಗೊತ್ತು ಇವರು ಗೊತ್ತು ವಾಸಣ್ಣ ಗೊತ್ತು ಎಂದು ಹೆದರಿಸುತ್ತಾನೆ. ಈತನ ಬಗ್ಗೆ ಹಲವು ಬಾರಿ ಕೇಸ್ ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ವಿಡಿಯೋದಲ್ಲಿ ಹೇಳಿರುವ ಮೃತನ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನು ಓದಿದ್ದೀರಾ? ವಿಜಯನಗರ | ತಾಡಪಲ್‌ ದರ ದುಪ್ಪಟ್ಟು : ಬೆಲೆ ಕಡಿಮೆಗೊಳಿಸಲು ಆಗ್ರಹಿಸಿ ರೈತ ಸಂಘದಿಂದ ಮನವಿ

ಆತ್ಮಹತ್ಯೆಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೀಟರ್ ಬಡ್ಡಿ ದಂಧೆಯ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸಿ, ಹೆಡೆಮುರಿ ಕಟ್ಟುವರೇ ಕಾದು ನೋಡಬೇಕಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X