ಕಲಬುರಗಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆ ಪ್ರತಿಭಟನೆ

Date:

Advertisements

ವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆಯ ವತಿಯಿಂದ ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಚಿಂಚೋಳಿ ತಾಲೂಕಿನ ಚಂದಾಪೂರ ಪಟ್ಟಣದ ಕನಕ ವೃತ್ತದಿಂದ ಮೆಟ್ರಿಕ್ ಅಗ್ರೋ ಪವರ್ ಲಿಮಿಟೆಡ್ ಪೋಲಕಪಳ್ಳಿ ಕಾರ್ಖಾನೆವರೆಗೆ ಬೃಹತ್ ಪ್ರತಿಭಟನೆ ನಡೆಸುವುದರ ಮೂಲಕ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸಿದ ಬಳಿಕ ಮುಖಂಡ ಮಾರುತಿ ಗಂಜಗಿರಿ ಮಾತನಾಡಿ, ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಮೆಟ್ರಿಕ್ ಆಗ್ರೋ ಪವರ್ ಲಿಮಿಟೆಡನಲ್ಲಿ ಫೋಕಿಂಗ್ ಬೈಲರಗಳಿಗೆ ಸಂಬಂಧಪಟ್ಟ ಎಪಿಎಚ್ ಮತ್ತು ಈಎಸ್‌ಪಿಗಳು ಕೆಟ್ಟು ಹೋಗಿದೆ. ಇದರಿಂದ ಕಪ್ಪು ಹೊಗೆ ಹೋರ ಹೋಗದೆ ಕಂಪನಿ ಒಳಭಾಗದಲ್ಲಿಯೇ ಹೋರಸೂಸುತ್ತಿರುವುದರಿಂದ ಕೆಲಸ ಮಾಡುವ ಕಾರ್ಮಿಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಅಲ್ಲದೆ ಸಾರ್ವಜನಿಕರಿಗೆ ಮತ್ತು ಕಂಪನಿ ಮುಂಭಾಗದಲ್ಲಿರುವ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ಕೊಡಲೆ ಕಂಪನಿ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisements

ಕಾರ್ಖಾನೆ ಅಧಿನಿಯಮ ಉಲ್ಲಂಘನೆ ಮಾಡಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಮತ್ತು ಸೇಪ್ಟಿ ಸಾಮಾಗ್ರಿಗಳ ನೀಡದೆ ದುಡಿಸಿಕೊಳ್ಳುತ್ತಿದೆ. ಕಾರ್ಖಾನೆ ಅಧಿನಿಯಮದ ಪ್ರಕಾರ ನೂರು ಜನ ಕಾರ್ಮಿಕರು ಕೆಲಸ ಮಾಡುವ ಕಂಪನಿಗಳಲ್ಲಿ ಕಾರ್ಮಿಕರಿಗೆ ವಿಶ್ರಾಂತಿ ಕೋಣೆ ಮತ್ತು ಶೌಚಾಲಯ ಇರಬೇಕು. ಈ ಪವರ್ ಪ್ಯಾಂಟ್ನಲ್ಲಿ ಇದಾವ ಸೌಕರ್ಯವಿಲ್ಲ. ಕಾರ್ಮಿಕರಿಗೆ ಕನಿಷ್ಠ ವೇತನ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದರು ಕೂಡ ಈ ಕಂಪನಿಯವರು ಕನಿಷ್ಠ ವೇತನ ನೀಡದೆ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ಕೂಡಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸುದ್ಧಿ ಓದಿದ್ದೀರಾ ಕಲಬುರಗಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆ: ಒಪ್ಪಿಗೆ ಸೂಚಿಸಿದ ಸಿಎಂ‌ ಸಿದ್ದರಾಮಯ್ಯ

ಗೋಪಾಲ ಗಾರಂಪಳ್ಳಿ, ಮೋಹನ ಐನಾಪುರ, ರಾಜಕುಮಾರ್ ಚಿಮ್ಮಾಯಿದ್ಲಾಯಿ, ಮೌನೇಶ್ ಗಾರಂಪಳ್ಳಿ, ಕಂಪನಿಯಲ್ಲಿ ಕೆಲಸ ಮಾಡುವ ಶಿವರಾಜ ಚಿಮ್ಮಾಯಿದ್ಲಾಯಿ , ಬಸವಸಾಗರ, ಮಹೇಶಕುಮಾರ, ಬಸವರಾಜ, ಉಮೇಶ್, ಶ್ರೀಮಂತ, ಪವನ, ಸಾಗರ, ದೀಲಿಪ, ಪ್ರಶಾಂತ, ಮಲ್ಲಿಕಾರ್ಜುನ, ಈಶಪ್ಪಾ, ಮಾಹಂತೇಶ, ಮಧುಸೂದನ, ವೀಠಲ್, ಸಂಜುಕುಮಾರ, ಈರಯ್ಯ, ನಾಗರಾಜ, ಅಲ್ತಾಫ್ ಖಾನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X