ರಾಯಚೂರು | ಒಳ ಮೀಸಲಾತಿ ಅನುಷ್ಠಾನಕ್ಕೆ ನಿರ್ಲಕ್ಷ್ಯ: ಸೆ.12ರಂದು ರಾಜ್ಯಾದ್ಯಂತ ತಮಟೆ ಚಳವಳಿ

Date:

Advertisements

ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪನ್ನು ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸೆ.12ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರದಲ್ಲಿನ ಬೃಹತ್ ತಮಟೆ ಚಳವಳಿ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಹನುಮಂತಪ್ಪ ಕಾಕರಗಲ್ ಹೇಳಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳಿಗೆ ಒಳ ಮೀಸಲಾತಿ ನೀಡಲು ಕಳೆದ 30 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದೆ. ಆದರೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಾ ಬಂದಿದೆ ಎಂದರು.

ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ಹೇಳಿದೆ. ಆದರೆ ತೀರ್ಪು ನೀಡಿ ಒಂದು ತಿಂಗಳಾದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಇದು ಖಂಡನೀಯ ಎಂದು ಕಿಡಿಕಾರಿದರು.

Advertisements

ಈ ಹಿಂದೆ ಪಂಜಾಬ್, ಹರಿಯಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಸರ್ಕಾರಗಳು ಒಳ ಮೀಸಲಾತಿ ನೀಡಲು ಮುಂದಾಗಿದ್ದವು. ಆದರೆ ಇದಕ್ಕೆ ಸ್ಥಳೀಯ ನ್ಯಾಯಾಲಯಗಳು ತಡೆಯೊಡ್ಡಿತ್ತು. ಒಳ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರಿಂದ ಪರಿಶಿಷ್ಟ ಜಾತಿಯಲ್ಲಿರುವ ಉಪ ಜಾತಿಗಳ ಹಿಂದುಳಿಯುವಿಕೆ ಮುಂದುವರೆಯಿತು ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಮೇಲೆಯೂ ಹಿಂದೆ ಒತ್ತಡ ಹಾಕಿ ಹೋರಾಟ ನಡೆಸುತ್ತಾ ಬಂದಿದೆ. ಒಳ ಮೀಸಲಾತಿಗಾಗಿ ಸಂವಿಧಾನ ತಿದ್ದುಪಡಿ ತರಬೇಕೆಂದು ಮುಖ್ಯಮಂತ್ರಿ ಹೇಳಿದ್ದರು. ಈ ಎಲ್ಲ ಗೊಂದಲಗಿಳಿಗೆ ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿ ರಾಜ್ಯಗಳಿಗೆ ಒಳ ಮೀಸಲಾತಿ ನೀಡುವ ಅಧಿಕಾರವಿದೆ ಎಂದು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಒಳ ಮೀಸಲಾತಿ ನೀಡಲು ಮುಂದಾಗಬೇಕಿದೆ ಎಂದರು.

ಕೋರ್ಟ್ ತೀರ್ಪು ನೀಡಿ ಒಂದು ತಿಂಗಳು ಗತಿಸಿದೆ. ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಸೆ.12ರಂದು ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಲೊಯೋಲಾ ಶಾಲಾಡಳಿತದಿಂದ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಚೆಕ್‌ ವಿತರಣೆ

ಸುದ್ದಿಗೋಷ್ಠಿಯಲ್ಲಿ ಕುರುಮಂತೆಪ್ಪ ಕಟ್ಟಿಮನಿ, ರಾಮಣ್ಣ ಸಾಸಲಮರಿ, ಶಿವರಾಜ ರುದ್ರಾಕ್ಷಿ, ರಮೇಶ ಬೋಸ್ಲೆ, ಹನುಮೇಶ, ಜಂಬಣ್ಣ, ಸುರೇಶ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X