ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಕಲುಷಿತ : ಎಚ್ಚರಿಕೆ ನೀಡಿದ ಗ್ರೀನ್ ಪೀಸ್ ವರದಿ

Date:

Advertisements

ಕರ್ನಾಟಕ ರಾಜ್ಯದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಹಾಗು ಮೈಸೂರಿನ ಗಾಳಿಯ ಗುಣಮಟ್ಟ ತೀವ್ರ ಪ್ರಮಾಣದಲ್ಲಿ ಕುಸಿದಿದೆ. ವಾಯು ಮಾಲಿನ್ಯದ ಕಾರಣದಿಂದಾಗಿ ಈ ಮೂರು ಜಿಲ್ಲೆಗಳಲ್ಲಿ ಗಾಳಿಯು ಅಪಾಯಕಾರಿ ಮಟ್ಟಕ್ಕೆ ತಲುಪಿದೆ ಎಂದು ಗ್ರೀನ್‌ಪೀಸ್ ಇಂಡಿಯಾದ ‘ಸ್ಪೇರ್ ದಿ ಏರ್-2’ ವರದಿಯು ಎಚ್ಚರಿಕೆ ನೀಡಿದೆ.

ದಕ್ಷಿಣ ಭಾರತದ ಪ್ರಮುಖ 10 ನಗರಗಳ ಗಾಳಿಯು ಮಾಲಿನ್ಯವಾಗಿದೆ. ಈ ಹತ್ತು ನಗರಗಳಲ್ಲಿ ಪಿಎಂ 2.5 (ಸೂಕ್ಷ್ಮ) ಮತ್ತು ಪಿಎಂ 10 (ಅತಿಸೂಕ್ಷ್ಮ)ಗಳ ಪ್ರಮಾಣವು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಾರ್ಗಸೂಚಿ ನಿಗದಿಪಡಿಸಿದ ಸರಾಸರಿ ಮಟ್ಟಗಳನ್ನು ಮೀರಿದೆ. ಇದನ್ನು ಈಗಲೇ ನಿಯಂತ್ರಿಸದಿದ್ದರೆ ಆ ಗಾಳಿಯನ್ನೇ ಉಸಿರಾಡುವ ಜನರ ಆರೋಗ್ಯಕ್ಕೆ ಅತೀ ಕೆಟ್ಟ ಪರಿಣಾಮ ಬೀರಲಿದೆ ಎಂದು ಗ್ರೀನ್‌ಪೀಸ್ ಇಂಡಿಯಾದ ‘ಸ್ಪೇರ್ ದಿ ಏರ್-2’ ವರದಿ ಹೇಳಿದೆ.

ದಕ್ಷಿಣ ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ, ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ಗ್ರೀನ್‌ಪೀಸ್ ಇಂಡಿಯಾ ವಿಶ್ಲೇಷಿಸಿದೆ.

Advertisements

ಇದನ್ನು ಓದಿದ್ದೀರಾ? ದಾವಣಗೆರೆ | ಗಾಳಿಯ ಗುಣಮಟ್ಟ ಉತ್ತಮಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು: ಪಾಲಿಕೆ ಆಯುಕ್ತೆ ರೇಣುಕಾ

ಈ ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂನಲ್ಲಿ ಗಾಳಿಯ ಗುಣಮಟ್ಟ ತೀವ್ರ ಕಲುಷಿತವಾಗಿದೆ. ಇಲ್ಲಿನ ಗಾಳಿಯಲ್ಲಿ ಪಿಎಂ 2.5 ಕಣಗಳ ಪ್ರಮಾಣ ಡಬ್ಲ್ಯುಎಚ್‌ಒ ಮಾರ್ಗಸೂಚಿ ನಿಗದಿಪಡಿಸಿದ ಮಾನದಂಡಕ್ಕಿಂತ 10 ಪಟ್ಟು ಮತ್ತು ಪಿಎಂ 10 ಕಣಗಳ ಪ್ರಮಾಣ 9 ಪಟ್ಟು ಹೆಚ್ಚಿದೆ.

ಗಾಳಿಯಲ್ಲಿ ಪಿಎಂ 2.5 ಕಣಗಳ ಮಟ್ಟವು ಮಂಗಳೂರು, ಹೈದರಾಬಾದ್, ವಿಜಯವಾಡ, ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ ಸುಮಾರು 6ರಿಂದ 7 ಪಟ್ಟು ಅಧಿಕವಾಗಿದೆ. ಅದೇ ರೀತಿ, ಪಿಎಂ 10 ಕಣಗಳ ಮಟ್ಟವು ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4ರಿಂದ 5 ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X