ಊಟ ನೀಡಿಲ್ಲವೆಂದು ಹೋಟೆಲ್‌ಗೆ ಟ್ರಕ್ ನುಗ್ಗಿಸಿದ ಪಾನಮತ್ತ ಚಾಲಕ: ವಿಡಿಯೋ ವೈರಲ್

Date:

Advertisements

ವ್ಯಕ್ತಿಯೋರ್ವನಿಗೆ ಪುಣೆಯ ಹೋಟೆಲ್‌ವೊಂದರಲ್ಲಿ ಊಟ ನೀಡಲು ನಿರಾಕರಿಸಲಾಗಿದ್ದು ಅದರಿಂದ ಪಾನಮತ್ತ ಚಾಲಕ ಹೋಟೆಲ್‌ಗೆ ಟ್ರಕ್ ನುಗ್ಗಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಹಿಂಗಂಗಾವ್‌ನ ಹೋಟೆಲ್ ಗೋಕುಲ್ ಬಳಿ ನಿಂತಿದ್ದ ಕೆಲವು ಜನರು ಈ ಘಟನೆಯ ವಿಡಿಯೋವನ್ನು ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಹಿಂಗಂಗಾವ್‌ನ ಹೋಟೆಲ್ ಗೋಕುಲ್ ಬಳಿ ನಿಂತಿದ್ದ ಕೆಲವು ಜನರು ಈ ಘಟನೆಯ ವಿಡಿಯೋವನ್ನು ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Advertisements

ಪಾನಮತ್ತ ಚಾಲಕ ಪದೇ ಪದೇ ತನ್ನ ಟ್ರಕ್‌ ಅನ್ನು ಹೊಟೇಲ್‌ ಕಟ್ಟಡಕ್ಕೆ ನುಗ್ಗಿಸುತ್ತಿರುವುದು ಕಾಣಬಹುದು. ಹೋಟೆಲ್‌ಗೆ ಹಾನಿ ಮಾಡಿರುವುದು ಮಾತ್ರವಲ್ಲದೇ ಈ ಟ್ರಕ್ ಚಾಲಕ ಹೋಟೆಲ್ ಹೊರಗೆ ನಿಲ್ಲಸಿದ್ದ ಕಾರಿಗೂ ಡಿಕ್ಕಿ ಹೊಡೆದಿದ್ದಾರೆ.

ವರದಿಗಳ ಪ್ರಕಾರ, ಚಾಲಕ ಸೊಲ್ಲಾಪುರದಿಂದ ಪುಣೆಗೆ ಪ್ರಯಾಣಿಸುತ್ತಿದ್ದು ಹೋಟೆಲ್ ಗೋಕುಲ್‌ನಲ್ಲಿ ನಿಲ್ಲಿಸಿ ಹೋಟೆಲ್ ಒಳಗೆ ಹೋಗಿ ಆಹಾರವನ್ನು ಕೇಳಿದ್ದ.

ಇದನ್ನು ಓದಿದ್ದೀರಾ? ಬೆಂಗಳೂರು | ಮಹಿಳೆ ಮೇಲೆ ಆಟೋ ಚಾಲಕನಿಂದ ಹಲ್ಲೆ; ವಿಡಿಯೋ ವೈರಲ್

ಆದರೆ ಹೋಟೆಲ್ ಮಾಲೀಕರು ಊಟ ಕೊಡಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಚಾಲಕ ತನ್ನ ಲಾರಿಯಲ್ಲಿ ಕುಳಿತು ಹೋಟೆಲ್ ಕಟ್ಟಡಕ್ಕೆ ಹಾನಿ ಮಾಡಿದ್ದಾನೆ.

ಚಾಲಕನನ್ನು ತಡೆಯಲು ಕೆಲವರು ಟ್ರಕ್‌ಗೆ ಕಲ್ಲು ತೂರಾಟ ಮಾಡುತ್ತಿರುವುದು ಕೂಡಾ ವಿಡಿಯೋದಲ್ಲಿ ನೋಡಬಹುದು. ಟ್ರಕ್‌ನ ಚಕ್ರವು ಸಿಲುಕಿ ಟ್ರಕ್ ಅಲ್ಲಾಡದಿದ್ದಾಗ ಕೊನೆಗೆ ಚಾಲಕ ಹೋಟೆಲ್‌ಗೆ ಹಾನಿ ಮಾಡುವುದನ್ನು ನಿಲ್ಲಿಸಿದ್ದಾನೆ.

ಪೊಲೀಸರು ಆತನನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಚಾಲಕ ಪಾನಮತ್ತನಾಗಿದ್ದ ಕಾರಣ ಹೋಟೆಲ್‌ನಲ್ಲಿ ಊಟ ನೀಡಲು ನಿರಾಕರಿಸಲಾಗಿದೆಯೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದು ತಿಳಿದುಬಂದಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X