ಜೈಲಿನ ನಿಯಮಾವಳಿ ಪ್ರಕಾರ ನಟ ದರ್ಶನ್‌ ಬೇಡಿಕೆ ಈಡೇರಿಕೆ, ಬಂಧಿಯಾಗಿರುವ ಸೆಲ್‌ನಲ್ಲಿ ಟಿವಿ ಸೌಲಭ್ಯ

Date:

Advertisements

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಜೈಲು ಅಧಿಕಾರಿಗಳಿಗೆ ಟಿವಿ ಒದಗಿಸಿಕೊಟ್ಟಿದ್ದಾರೆ.

ಹೊರ ಜಗತ್ತಿನಲ್ಲಿ ಏನು ನಡೆಯುತ್ತದೆ ಎಂಬುದನ್ನು ಅರಿಯಲು ತನಗೆ ಟಿವಿ ಒದಗಿಸಿಕೊಡುವಂತೆ ಜೈಲು ಅಧಿಕಾರಿಗಳಿಗೆ ನಟ ದರ್ಶನ್ ಮನವಿ ಮಾಡಿದ್ದರು.‌ ಮನವಿಗೆ ಸ್ಪಂದಿಸಿರುವ ಅಧಿಕಾರಿಗಳು ದರ್ಶನ್ ಬಂಧಿಯಾಗಿರುವ ಸೆಲ್‌ನಲ್ಲಿ ಟಿವಿ ಅಳವಡಿಸಿದ್ದಾರೆ.

ಜೈಲಿನ ನಿಯಮಾವಳಿಯ ಪ್ರಕಾರ ಖೈದಿಗಳಿಗೆ ಅವರ ಮನವಿಯ ಆಧಾರದ ಮೇಲೆ ಟಿವಿ ಅಳವಡಿಸುವ ವ್ಯವಸ್ಥೆ ಇದೆ. ಆ ಪ್ರಕಾರ ಟಿವಿ ಅಳವಡಿಸಲಾಗಿದೆ. ಎಲ್ಲ ವ್ಯವಸ್ಥೆ ಕಲ್ಪಿಸಲು ದರ್ಶನ್ ಅವರು ಜೈಲಧಿಕಾರಿಯ ಖಾಸಗಿ ಖಾತೆಗೆ 35,000 ರೂ. ಜಮಾ ಮಾಡಿದ್ದಾರೆ.

Advertisements

ಬೇರೆ ಬೇಡಿಕೆಗೂ ಸ್ಪಂದನೆ

ಟಿವಿ ಮಾತ್ರವಲ್ಲದೆ ದರ್ಶನ್ ಅವರು “ಜೈಲಿನೊಳಗಿನ ಇಂಡಿಯನ್ ಟಾಯ್ಲೆಟ್‌ನಲ್ಲಿ ಕೂರಲಾಗುವುದಿಲ್ಲ. ಸರ್ಜಿಕಲ್ ಚೇರ್ ಒದಗಿಸುವಂತೆ” ಮನವಿ ಮಾಡಿದ್ದರು. ಜೊತೆಗೆ ಫೋನ್ ಕಾಲ್ ಮಾಡಲು ಅನುಮತಿ ನೀಡಬೇಕು ಎಂದು ಸಹ ಅವರು ಜೈಲಧಿಕಾರಿಗೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿರುವ ಜೈಲು ಅಧಿಕಾರಿಗಳು ಅಗತ್ಯ ವ್ಯವಸ್ಥೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X