ಬಾಗಲಕೋಟೆ | ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ವಿರೋಧಿ ಪ್ರಕಾಶ ನಾಯಕ ಬಿಜೆಪಿ ಸೇರ್ಪಡೆ

Date:

Advertisements
  • ವಿರೋಧ ಮಾಡಿದ ನಿರಾಣಿ ಸಮ್ಮುಖದಲ್ಲೇ ಬಿಜೆಪಿ ಸೇರ್ಪಡೆ
  • ಭೂಸ್ವಾಧೀನ ರೈತ ಹೋರಾಟದ ನೇತೃತ್ವ ವಹಿಸಿದ್ದ ಪ್ರಕಾಶ

ಸಂಪದ್ಭರಿತ ಕೃಷಿ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗಾಗಿ ಭೂಸ್ವಾಧಿನ ಮಾಡಿಕೊಳ್ಳಲು ಹೊರಟ್ಟಿದ್ದ ಸರ್ಕಾರದ ವಿರುದ್ಧ ಹಾಗೂ ಕೈಗಾರಿಕಾ ಸಚಿವ ಮುರುಗೇಶ ನಿರಾಣಿಗೆ ಸಿಂಹಸ್ವಪ್ನವಾಗಿ ಕಾಡಿದ್ದ ರೈತ ಮುಖಂಡ ಪ್ರಕಾಶ ನಾಯಕ ಅವರು ಈಗ ನಿರಾಣಿ ಸಮ್ಮುಖದಲ್ಲಿಯೇ ಬಿಜೆಪಿ ಸೇರಿ ಅಚ್ಚರಿ ಮೂಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಹಲಕುರ್ಕಿ ಗ್ರಾಮದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಸರ್ಕಾರವು ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದೆ ಬಂದಾಗ ಇದನ್ನು ವಿರೋಧಿಸಿದ್ದ ರೈತರು ಅನಿರ್ದಿಷ್ಟಾವಧಿ ಧರಣಿ ನಡೆಸಿದರು.

ಹೋರಾಟದ ಮುಂಚೂಣಿಯಲ್ಲಿದ್ದ ರೈತ ಮುಖಂಡ ಪ್ರಕಾಶ ನಾಯಕ ಇಷ್ಟಕ್ಕೆ ಸುಮ್ಮನಾಗದೇ ಸಾವಿರಾರು ರೈತರ ಸಮ್ಮುಖದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, ಕೈಗಾರಿಕಾ ಸಚಿವ ಬೀಳಗಿ ಕ್ಷೇತ್ರದ ಶಾಸಕ ಮುರುಗೇಶ ನಿರಾಣಿ ವಿರುದ್ದ ಹರಿಹಾಯ್ದಿದ್ದರು.

Advertisements

ಈ ಸುದ್ದಿ ಓದಿದ್ದೀರಾ? : ಬಿಜೆಪಿ ಖಜಾನೆ ತುಂಬಿದ್ದು, ದುಡ್ಡು ಕೊಟ್ಟು ಜನರನ್ನು ಕರೆತರುತ್ತದೆ: ಮಲ್ಲಿಕಾರ್ಜುನ ಖರ್ಗೆ

ಇದೇ ವಿಷಯವಾಗಿ ಇಬ್ಬರು ನಾಯಕರು ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಂಡು ಕೆಸರು ಎರಚಿಕೊಂಡಿದ್ದರು. ಇದೀಗ ಇದೇ ನಿರಾಣಿ ಸಮ್ಮುಖದಲ್ಲಿಯೇ ಪ್ರಕಾಶ ಬಿಜೆಪಿ ಸೇರಿದ್ದು ಜಿಲ್ಲೆಯಲ್ಲಿ ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಕಾಶ ನಾಯಕ, “ಎರಡು ಸಾವಿರಕ್ಕೂ ಹೆಚ್ಚಿನ ರೈತರ ಭೂಮಿಯನ್ನು ಭೂಸ್ವಾಧಿನ ಮಾಡಿಕೊಳ್ಳುವುದಾಗಿ ಹೇಳಿದ್ದ ಮುರಗೇಶಿ ನಿರಾಣಿ ಹಲಕುರ್ಕಿ ಗ್ರಾಮದಲ್ಲಿರುವ ಯಾವ ರೈತರ ಜಮೀನುಗಳನ್ನು ಭೂ ಸ್ವಾಧಿನಪಡಿಸಿಕೊಳ್ಳುವುದಿಲ್ಲ ಎಂದು ಮಾತುಕೊಟ್ಟಿದ್ದಾರೆ” ಎಂದು ತಿಳಿಸಿದರು.

“ಭೂಸ್ವಾಧಿನ ಮಾಡಿಕೊಳ್ಳುವುದರ ವಿರುದ್ಧ ನಾನು ನಡೆಸಿದ ಹೋರಾಟದಲ್ಲಿ ಬೀಳಗಿ ಕ್ಷೇತ್ರದ ಯಾವೊಬ್ಬ ಕಾಂಗ್ರೆಸ್‌ ನಾಯಕರು ಪಾಲ್ಗೊಳ್ಳದೇ ಇದ್ದದ್ದರಿಂದ ಅಸಮಧಾನಿತನಾಗಿ ಮುರುಗೇಶ ನಿರಾಣಿ ನೇತೃತ್ವದಲ್ಲಿ ಬಿಜೆಪಿ ಸೇರುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X