ಆರ್ ಅಶೋಕ್‌ಗೆ ನಮ್ಮ ಪಕ್ಷದ ಉಸಾಬರಿ ಯಾಕೆ: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

Date:

Advertisements

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್‌ ಅವರಿಗೆ ನಮ್ಮ ಪಕ್ಷದ ಉಸಾಬರಿ ಯಾಕೆ? ಅವರ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ. ಮೊದಲು ಅದನ್ನು ಸರಿಪಡಿಕೊಂಡು ಮಾತನಾಡಲಿ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರ್‌ ಅಶೋಕ್‌ ಎಲ್ಲದಕ್ಕೂ ಪ್ರತಿಕ್ರಿಯಿಸಲು ಹೋಗುತ್ತಾರೆ. ಮೊದಲು ತಮ್ಮ ಪಕ್ಷದ ಒಳ ಬೇಗುದಿಯನ್ನು ಸರಿಪಡಿಸಿಕೊಳ್ಳಲಿ” ಎಂದರು.

ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ಅಮೆರಿಕಾ ಪ್ರವಾಸ ಬಗ್ಗೆ ಮಾತನಾಡಿ, “ಡಿ ಕೆ ಶಿವಕುಮಾರ್‌ ಅವರು ಸರ್ಕಾರದ ಕೆಲಸದ ಮೇಲೆ ಅಮೆರಿಕ ಹೋಗಿಲ್ಲ. ಅವರ ಕುಟುಂಬ ಸದಸ್ಯರ ಜೊತೆ ಹೋಗಿದ್ದಾರೆ. ಅದು ಅವರ ವೈಯಕ್ತಿಕ ವಿಚಾರ. ಮಾಧ್ಯಮಗಳು ಇಲ್ಲದ ಬಣ್ಣ ಹಚ್ಚುತ್ತಿದ್ದಾರೆ” ಎಂದರು.

Advertisements

‘ನಾನು ಒಂದಲ್ಲಾ ಒಂದು ದಿನ ಮುಖ್ಯಮಂತ್ರಿಯಾಗುವೆ’ ಎಂಬ ಸಚಿವ ಎಂ ಬಿ ಪಾಟೀಲ್‌ ಹೇಳಿಕೆ ವಿಚಾರವಾಗಿ ಮಾತನಾಡಿ, “ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಅಪ್ರಸ್ತುತ. ಮುಡಾ ಪ್ರಕರಣ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸೋಮವಾರ ಕೂಡ ವಾದ, ಪ್ರತಿವಾದ ನಡೆಯಲಿದೆ. 12ನೇ ತಾರೀಖಿಗೆ ತೀರ್ಪು ಬರಲಿದೆ. ಮುಖ್ಯಮಂತ್ರಿ ಚರ್ಚೆಯನ್ನೇ ಪ್ರಾರಂಭಿಸುವ ಅವಶ್ಯಕತೆ ಇಲ್ಲ” ಎಂದು ಹೇಳಿದರು.

“ಸಚಿವ ಸತೀಶ್‌ ಜಾರಕಿಹೊಳಿ ಭೇಟಿಗೆ ಸುಮ್ಮನೇ ನಾನಾ ಅರ್ಥಗಳನ್ನು ಕಲ್ಪಿಸಲಾಗುತ್ತಿದೆ. ನಮ್ಮ ಮಧ್ಯ ಯಾವ ವಿಚಾರಗಳ ಚರ್ಚೆ ನಡೆದಿಲ್ಲ. ನೀವೇ (ಮಾಧ್ಯಮದವರು) ಇಲ್ಲದ ಕಥೆ ಕಟ್ಟಬೇಡಿ” ಎಂದು ಸ್ಪಷ್ಟಪಡಿಸಿದರು.

ನಟ ದರ್ಶನ್‌ ವಿಚಾರವಾಗಿ ಮಾತನಾಡಿ, “ನ್ಯಾಯಾಲಯದಲ್ಲಿ ತನಿಖೆ ನಡೆಯುತ್ತಿದೆ. ಈ ಬಗ್ಗೆ ನ್ಯಾಯಾಲಯವೇ ತೀರ್ಪು ಕೊಡಲಿದೆ. ನಾವು ನೀವು ಮಾತನಾಡುವುದು ಅನವಶ್ಯಕ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X