ಗದಗ | ಗೋವಿಂದ ಪೈ ಜಯಂತಿ ಸರ್ಕಾರದಿಂದ ಆಚರಿಸಲು ಮನೋಹರ್ ಮೆರವಾಡೆ ಒತ್ತಾಯ

Date:

Advertisements

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಗೋವಿಂದ ಪೈ ಕೊಡುಗೆ ಅಪಾರವಾಗಿದೆ. ಅವರ ಜಯಂತಿಯನ್ನು ಸರ್ಕಾರದ ಪರವಾಗಿ ಆಚರಿಸಬೇಕು ಎಂದು ಕಬ್ಬಿಗರ ಕೂಟದ ಅಧ್ಯಕ್ಷ ಮತ್ತು ನ್ಯಾಯವಾದಿ ಮನೋಹರ್ ಮೆರವಾಡೆ ಒತ್ತಾಯಿಸಿದರು.

ಗದಗ ನಗರದ ಕಬ್ಬಿಗರ ಕೂಟ ಕಚೇರಿಯಲ್ಲಿ ಕಬ್ಬಿಗರ ಕೂಟ ಮತ್ತು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಗೋವಿಂದ ಪೈ ಅವರ 61ನೇ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೋವಿಂದ ಪೈ ಕನ್ನಡದ ಪ್ರಥಮ ರಾಷ್ಟ್ರಕವಿ. ಏಕೀಕರಣಕ್ಕೆ ಮುಂಚೆ ಅವರಿಗೆ ರಾಷ್ಟ್ರಕವಿ ಪ್ರಶಸ್ತಿ ದೊರಕಿದೆ. 22 ಭಾಷೆಗಳನ್ನು ಬಲ್ಲವರಾಗಿದ್ದ ‘ಪೈ’ ಕನ್ನಡ ಸಾಹಿತ್ಯಕ್ಕೆ ನೀಡಿದ ಅನುಪಮ ಕೊಡುಗೆಯನ್ನು ಪರಿಗಣಿಸಿ, ಅವರ ಜಯಂತಿಯನ್ನು ಸರಕಾರದ ಪರವಾಗಿ ಆಚರಿಸಬೇಕು ಎಂದು ಸರಕಾರಕ್ಕೆ ಆಗ್ರಹಿಸಿದರು.

ಹಿರಿಯ ಸಾಹಿತಿ ಹಾಗೂ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ .ಎ. ಬಡಿಗೇರ್ ಬಡಿಗೇರ ಮಾತನಾಡಿ, ಗೋವಿಂದ ಪೈ ಅವರ ಜೀವನ ಮತ್ತು ಸಾಹಿತ್ಯದ ಕುರಿತು ಅಭ್ಯಾಸಪೂರ್ಣ ಉಪನ್ಯಾಸ ನಡೆಯಬೇಕು. ಕನ್ನಡದ ಪ್ರಥಮ ರಾಷ್ಟ್ರಕವಿ ಗೋವಿಂದ ಪೈ ಅವರು ಕನ್ನಡಕ್ಕಾಗಿ ತಮ್ಮ 40 ವರ್ಷಗಳ ಸುಧೀರ್ಘ ಅವಧಿಯನ್ನು ಸವೆಸಿದ್ದು ಗೊಲ್ಲೋದಾ, ವೈಸಾಕಿ, ಗಿಳಿವಿಂಡು ಮುಂತಾದ 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

Advertisements

ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಉಪಾಧ್ಯಕ್ಷ ಬಿ.ಎಸ್. ಹಿಂಡಿ, ಸಾಮಾಜಿಕ ಹೋರಾಟಗಾರ ರಮೇಶ್ ಸಂಕಣ್ಣನವರ, ನಿವೃತ್ತ ಉಪ ತಹಶಿಲ್ದಾರ್ ಪ್ರತೋ ನಾರಾಯಣಪೂರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ರಹಿಮಾನ ಸಾಬ ಮುದ್ದು, ವಿಶ್ವನಾಥ ಹಬೀಬಿ, ರಾಜು ಅರಸಿದ್ಧಿ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X