ಲೈಂಗಿಕ ದೌರ್ಜನ್ಯ | ಸಿ ಪಿ ಯೋಗೇಶ್ವರ್ ಆಪ್ತ ಟಿ ಎಸ್‌ ರಾಜು ವಿರುದ್ಧ ದೂರು ದಾಖಲು, ಆರೋಪಿ ಪರಾರಿ

Date:

Advertisements

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ ಎಸ್ ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ.

ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ ಟಿ ಎಸ್ ರಾಜು ವಿರುದ್ಧ ದೂರು ನೀಡಿದ್ದಾರೆ. ಆರೋಪಿ ರಾಜು ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಅವರ ಆಪ್ತ ಎನ್ನಲಾಗಿದ್ದು, ಘಟನೆ ಬೆನ್ನಲ್ಲೇ ರಾಜು ತಲೆಮರೆಸಿಕೊಂಡಿದ್ದಾನೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ, ಇತ್ತ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ ಎನ್ ಆನಂದಸ್ವಾಮಿ ಅವರು ಸೋಮವಾರ ರಾಜುನನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Advertisements

ಘಟನೆ ವಿವರ

ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ ಗಣೇಶ ಹಬ್ಬದ ಸಲುವಾಗಿ ತವರು ಮನೆಗೆ ಬಂದಿದ್ದರು. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಲುವಾಗಿ ಮೆರವಣಿಗೆ ನಡೆಯುವಾಗ ಮಹಿಳೆ ರಾತ್ರಿ 11.40ರ ಸುಮಾರಿಗೆ ತಾಯಿಯೊಂದಿಗೆ ಮನೆ ಮುಂದೆ ನಿಂತಿದ್ದರು. ತಾಯಿ ಕಾರ್ಯನಿಮಿತ್ತ ಒಳಕ್ಕೆ ಹೋಗಿದ್ದರು. ಮಹಿಳೆ ಒಬ್ಬರೇ ಇದ್ದಿದ್ದನ್ನು ಗಮನಿಸಿ ಅವರತ್ತ ಬಂದಿದ್ದ ರಾಜು, ‘ಯಾವಾಗ ಬಂದೆ ಬೇಬಿ’ ಎಂದು ಕೇಳಿದ್ದ ಎಂದು ಮಹಿಳೆ ದೂರಿನಲ್ಲಿಉಲ್ಲೇಖಿಸಿದ್ದಾರೆ.

ಮಹಿಳೆಯ ಹೆಗಲ ಮೇಲೆ ಕೈ ಹಾಕಿ ಎದೆ ಭಾಗವನ್ನು ಮುಟ್ಟುತ್ತಾ, ಕಾಮುಕ ದೃಷ್ಟಿಯಿಂದ ಕೈ ಹಿಡಿದು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಮೊಬೈಲ್‌ ಫೋನ್‌ನಿಂದ ಮಹಿಳೆಯ ಫೋಟೊ ತೆಗೆದು ತನ್ನ ಸ್ನೇಹಿತರಿಗೆ ಕಳಿಸಿದ್ದ. ಈ ಕುರಿತು ಮಹಿಳೆ ಪ್ರಶ್ನಿಸಿದಾಗ, ‘ನನ್ನ ಮೊಬೈಲ್, ನನ್ನಿಷ್ಟ’ ಎಂದು ರಾಜು ಕೆಟ್ಟದಾಗಿ ಪ್ರತಿಕ್ರಿಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ರಾಜು ವರ್ತನೆಯಿಂದ ದಿಗ್ಬ್ರಮೆಗೊಂಡ ಮಹಿಳೆ ತಕ್ಷಣ ಒಳಗಿದ್ದ ತನ್ನ ಅಣ್ಣನಿಗೆ ವಿಷಯ ತಿಳಿಸಿದ್ದಾರೆ. ಅವರು ಬಂದು ಪ್ರಶ್ನಿಸಿದಾಗ, ರಾಜು ತಬ್ಬಿಬ್ಬುಗೊಂಡಿದ್ದಾನೆ. ನಂತರ, ಕುಟುಂಬದವರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ, ಆತನ ಮೊಬೈಲ್ ಕಿತ್ತಕೊಂಡು ಇಟ್ಟುಕೊಂಡಿದ್ದು, ತನಿಖೆ ಸಂದರ್ಭದಲ್ಲಿ ಹಾಜರುಪಡಿಸುವುದಾಗಿ ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

ಹಿಂದೆಯೂ ಕಿರಿ ಕಿರಿ

ಈ ಹಿಂದೆಯೂ ರಾಜು ನನಗೆ ಕಿರಿಕಿರಿ ಕೊಟ್ಟಿದ್ದಾನೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನನಗೆ ಕರೆ ಮಾಡಿ, ‘ಮೈಸೂರು ಕಾಫಿ ಡೇಗೆ ಹೋಗೋಣ. ನೀನೊಬ್ಬಳೇ ಬಾ. ಯಾರಿಗೂ ಹೇಳಬೇಡ’ ಎಂದಿದ್ದ. ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡಿರುವ ರಾಜು, ನನ್ನ ಗೌರವಕ್ಕೆ ಚ್ಯುತಿ ತಂದಿದ್ದಾನೆ” ಎಂದು ಮಹಿಳೆ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X