ಜಂತರ್ ಮಂತರ್‌ಗೆ ಹೋಗಿ, ಮಹಿಳಾ ಕುಸ್ತಿಪಟುಗಳ ‘ಮನ್ ಕಿ ಬಾತ್’ ಆಲಿಸಿ; ಮೋದಿಗೆ ಕಪಿಲ್ ಸಿಬಲ್

Date:

Advertisements

ಜಂತರ್ ಮಂತರ್‌ಗೆ ಹೋಗಿ ಪ್ರತಿಭಟನಾ ನಿರತ ಮಹಿಳಾ ಕುಸ್ತಿಪಟುಗಳ ‘ಮನ್ ಕಿ ಬಾತ್’ ಆಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿ ಅವರು ಭಾನುವಾರ ತಮ್ಮ 100ನೇ ಸಂಚಿಕೆಯ ‘ಮನ್‌ ಕಿ ಬಾತ್’ ರೇಡಿಯೋ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಾರೆ. ಅವರ ಕಾರ್ಯಕ್ರಮದ ಬಗ್ಗೆ ಕಪಿಲ್ ಸಿಬಲ್ ಪ್ರತಿಕ್ರಿಯಿಸಿದ್ದು, “ಹೋರಾಟನಿರತ ಮಹಿಳಾ ಕುಸ್ತಿಪಟುಗಳ ‘ಮನ್‌ ಕಿ ಬಾತ್’ (ಮನದ ಮಾತು)ಅನ್ನು ಪ್ರಧಾನಿ ಕೇಳಬೇಕು. ಹೀಗೆ ಮಾಡುವುದರಿಂದ ಅವರ ನೋವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಮೋದಿ ಅವರು ಪ್ರಜೆಗಳ ನೋವನ್ನೂ ಅರಿಯಲು ಸಿದ್ದರಿದ್ದಾರೆ ಎಂಬುದನ್ನು ತೋರಿಸುತ್ತದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಬಲ್, “ಮೋದಿಜೀ: ನಿಮ್ಮ 100ನೇ ‘ಮನ್ ಕಿ ಬಾತ್’ ಗೆ ಅಭಿನಂದನೆಗಳು. ಮೋದಿಜೀ ನಿಮಗೆ ಸಮಯವಿದ್ದರೆ ದಯವಿಟ್ಟು ಜಂತರ್ ಮಂತರ್‌ಗೆ ಹೋಗಿ ಮತ್ತು ಪ್ರತಿಭಟನಾ ನಿರತ ಮಹಿಳಾ ಕುಸ್ತಿಪಟುಗಳ ‘ಮನ್ ಕಿ ಬಾತ್’ ಅನ್ನು ಆಲಿಸಿ” ಎಂದಿದ್ದಾರೆ.

Advertisements

“ನಮ್ಮ ಪ್ರಧಾನಿ ಅವರ ನೋವನ್ನು ಅರ್ಥಮಾಡಿಕೊಳ್ಳಲು ಸಿದ್ಧರಿದ್ದಾರೆ ಎಂದು ಅದು ತೋರಿಸುತ್ತದೆ!” ಸಿಬಲ್ ಹೇಳಿದ್ದಾರೆ.

ಬಿಜೆಪಿ ಸಂಸದ, ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ತಮಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಎಂದು ಏಳು ಮಹಿಳಾ ಕುಸ್ತಿಪಟುಗಳು ಆರೋಪಿಸಿದ್ದಾರೆ. ಅವರನ್ನು ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬ್ರಿಜ್ ಭೂಷಣ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮೊದಲು ನಿರಾಕರಿಸಿದ್ದ ಪೊಲೀಸರು ಶುಕ್ರವಾರ ಎರಡು ಎಫ್‌ಐಆರ್‌ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಂದ ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ | ತಬ್ಬಿ ಸಂತೈಸಿದ ನಾಯಕಿ

ಮೊದಲ ಎಫ್‌ಐಆರ್ ಅಪ್ರಾಪ್ತ ಕುಸ್ತಿಪಟುವಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ದಾಖಲಾಗಿದೆ. ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ದಂಡ ಸಂಹಿತೆ ವಿವಿಧ ಸೆಕ್ಷನ್‌ಗಳ ಅಡಿ ಎರಡನೇ ಎಫ್‌ಐಆರ್‌ ದಾಖಲಾಗಿದೆ.

ಸಿಂಗ್ ಅವರನ್ನು ಬಂಧಿಸುವವರೆಗೂ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಎಂದು ಕುಸ್ತಿಪಟುಗಳು ಪಟ್ಟುಹಿಡಿದಿದ್ದಾರೆ. ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ದೇಶದ ಹಲವಾರು ಅಂತಾರಾಷ್ಟ್ರೀಯ ಕ್ರಿಡಾಪಟುಗಳು ಬೆಂಬಲ ನೀಡಿದ್ದಾರೆ. “ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ನಡೆಸಬೇಕು. ತನಿಖಾ ವರದಿಯನ್ನು ಸರ್ಕಾರ ಸಾರ್ವಜನಿಕಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X