ರಾಮೇಶ್ವರಂ ಕೆಫೆ ಸ್ಫೋಟ | ಪ್ರಕರಣದ ಚಾರ್ಜ್‌ಶೀಟ್‌ ಸಲ್ಲಿಕೆ, ಬಿಜೆಪಿ ಕಚೇರಿ ಸ್ಫೋಟಕ್ಕೆ ನಡೆದಿತ್ತು ಸಂಚು!

Date:

Advertisements

ಬೆಂಗಳೂರಿನ ವೈಟ್‌ ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.

ಆರೋಪಿಗಳಾದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹಮದ್ ತಾಹಾ, ಮಾಜ್ ಮುನೀರ್ ಅಹಮದ್ ಹಾಗೂ ಮುಝಮಿಲ್ ಷರೀಫ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಂದೇ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸ್ಫೋಟಿಸಲು ಯತ್ನಿಸಿ ವಿಫಲವಾಗಿದ್ದರು. ಬಳಿಕ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಿದ್ದರು ಎಂಬ ಅಂಶ ಚಾರ್ಜ್ ಶೀಟ್‌ನಲ್ಲಿ ಬಹಿರಂಗವಾಗಿದೆ.

Advertisements

ಶಿವಮೊಗ್ಗ ಮೂಲದವರಾಗಿದ್ದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹಮದ್ ತಾಹಾ ಐಸಿಸ್‌ನಿಂದ ಪ್ರೇರಿತರಾಗಿದ್ದು, ಮುಸ್ಲಿಂ ಯುವಕರನ್ನು ಐಸಿಸ್‌ನತ್ತ ಸೆಳೆಯುತ್ತಿದ್ದರು. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹಮದ್ ಹಾಗೂ ಮುಝಮಿಲ್ ಷರೀಫ್​ನನ್ನು ಸಹ ಅದೇ ರೀತಿ ಐಸಿಸ್‌ನ ವಿಚಾರಗಳೆಡೆಗೆ ಸೆಳೆಯಲಾಗಿತ್ತು ಎಂದು ಉಲ್ಲೇಖಿಸಲಾಗಿದೆ.

ಕಳೆದ ಮಾರ್ಚ್‌ 1 ರಂದು ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರು ಬಿಸಿಬಿಸಿಯಾದ ಊಟವನ್ನ ಸವಿಯುತ್ತಿದ್ದ ವೇಳೆ ಹೋಟೆಲ್‌ ಒಳಗಡೆ ಏಕಾಏಕಿ ಸ್ಫೋಟಗೊಂಡಿತ್ತು. ಹೋಟೆಲ್ ಸಿಬ್ಬಂದಿ ಫಾರುಖ್, ಅಮೇಜನ್ ಕಂಪನಿಯ ಸಿಬ್ಬಂದಿ ದೀಪಾಂಶು, ಸ್ವರ್ಣಾಂಬ, ಮೋಹನ್, ನಾಗಶ್ರೀ, ಮೋಮಿ, ಬಲರಾಮ್ ಕೃಷ್ಣನ್, ನವ್ಯಾ, ಶ್ರೀನಿವಾಸ್ ಗಾಯಗೊಂಡಿದ್ದರು.

ಪ್ರಕರಣದ ತನಿಖೆ ಚುರುಕುಗೊಳಿಸಿದ ಎನ್‌ಐಎ ಅಧಿಕಾರಿಗಳು ಆರೋಪಿ ಟೋಪಿವಾಲನ ಬೆನ್ನತ್ತಿ ದಿಕ್ಕು ದಿಕ್ಕಿನಲ್ಲೂ ತನಿಖೆ ನಡೆಸಿ ಉಳಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X