ಮಂಡ್ಯ | ಮದ್ದೂರು ಪುರಸಭೆಯಲ್ಲಿ 17 ವರ್ಷಗಳ ಬಳಿಕ ಗದ್ದುಗೆ ಏರಿದ ಕಾಂಗ್ರೆಸ್‌

Date:

Advertisements

ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ 17 ವರ್ಷಗಳ ಬಳಿಕ, ಕಾಂಗ್ರೆಸ್ ಪಕ್ಷವು ಜೆಡಿಎಸ್‌ ಮತ್ತು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.

23 ಸದಸ್ಯ ಬಲದ ಪುರಸಭೆಯಲ್ಲಿ, ಸೋಮವಾರದಂದು ಚುನಾವಣೆ ನಡೆಯಿತು. ಕಾಂಗ್ರೆಸ್ ಪಕ್ಷದ ಕೋಕಿಲಾ ಅರುಣ್ ಅಧ್ಯಕ್ಷರಾಗಿ ಮತ್ತು ಜೆಡಿಎಸ್‌ನ ಟಿ.ಆರ್. ಪ್ರಸನ್ನ ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಕಾಂಗ್ರೆಸ್ ಶಾಸಕ ಕದಲೂರು ಉದಯ್ ಅವರ ನೇತೃತ್ವದಲ್ಲಿ, ಜೆಡಿಎಸ್‌ನ 6 ಸದಸ್ಯರು ಮತ್ತು ಬಿಜೆಪಿಯ ಓರ್ವ ಸದಸ್ಯರಿಂದ ಬೆಂಬಲ ಪಡೆದು ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿತು.

Advertisements

ಅಧ್ಯಕ್ಷೆ ಅಭ್ಯರ್ಥಿ ಕೋಕಿಲಾ ಅರುಣ್ ಪರ ಒಟ್ಟು 15 ಮತಗಳು ಬಿದ್ದಿದ್ದು, ಇದರಲ್ಲಿ ಕಾಂಗ್ರೆಸ್‌ನ 3, ಜೆಡಿಎಸ್‌ನ 6, ಪಕ್ಷೇತರ 4 ಮತ್ತು ಬಿಜೆಪಿ 1 ಮತಗಳು ಸೇರಿವೆ. ಜೆಡಿಎಸ್‌ನ ಶೋಭಾ ರಾಣಿ ಅವರ ಪರ ಕೇವಲ 8 ಮತಗಳು ಬಿದ್ದವು. ಈ ವೇಳೆ, ಜೆಡಿಎಸ್‌ನ ಸದಸ್ಯ ಸುರೇಶ್ ಕುಮಾರ್ ಹಾಗೂ ಸಂಸದ ಎಚ್.ಡಿ. ಕುಮಾರಸ್ವಾಮಿ ಗೈರಾಗಿದ್ದರು.

1001617661

ಕಾಂಗ್ರೆಸ್‌‌ಗೆ ಬೆಂಬಲ ನೀಡಿದ ಜೆಡಿಎಸ್‌ ಸದಸ್ಯ ಟಿ.ಆರ್. ಪ್ರಸನ್ನಕುಮಾರ್ 15 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರೆ, ಜೆಡಿಎಸ್‌ ಅಭ್ಯರ್ಥಿ ಮನೋಜ್ ಕುಮಾರ್ 8 ಮತಗಳನ್ನು ಮಾತ್ರ ಪಡೆದರು.

ಸಿಂಗ್ರಯ್ಯ 2007ರಲ್ಲಿ ಕಾಂಗ್ರೆಸ್ಸಿನಿಂದ ಅಧ್ಯಕ್ಷರಾಗಿದ್ದರು. ಶಾಸಕ ಕದಲೂರು ಉದಯ್‌ ನೇತೃತ್ವದಲ್ಲಿ 17 ವರ್ಷಗಳ ನಂತರ ಮತ್ತೊಮ್ಮೆ ಮದ್ದೂರು ಪುರಸಭೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ.

ಈ ಗೆಲುವಿನ ಸಂಭ್ರಮಾಚರಣೆ ವೇಳೆ, ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಉತ್ಸವವನ್ನು ಆಚರಿಸಿದರು. ಕಾಂಗ್ರೆಸ್ ಮುಖಂಡರಾದ ಅರುಣ್ ಕುಮಾರ್, ಅಮರ್ ಬಾಬು ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X