ದೋಷಾರೋಪ ಪಟ್ಟಿ ಎಂಬುದು ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ್

Date:

Advertisements

ರಾಮೇಶ್ವರಂ ಕೆಫೆ ‌ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ದೋಷಾರೋಪ ಪಟ್ಟಿಯಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ‌ ಮಂಗಳವಾರ (ಸೆ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ ಮಿಕ್ಕ ವಿಚಾರಗಳು ಗೊತ್ತಿಲ್ಲ” ಎಂದರು.

ರೇಣುಕಸ್ವಾಮಿ ಕೊಲೆ‌ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ಗು ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್‌ ಏನು ತೀರ್ಮಾನ ಮಾಡುತ್ತದೆ ನೋಡೋಣ” ಎಂದು ಹೇಳಿದರು.

Advertisements

“ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ.‌ ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ” ಎಂದು ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗೆ ಕಡಿವಾಣ ಹಾಕಲು ಹೈಕಮಾಂಡ್‌ಗೆ ಪತ್ರ ಬರೆದಿರುವ ಕುರಿತು ಮಾತನಾಡಿ, “ಮುಖ್ಯಮಂತ್ರಿಗಳ ಸ್ಥಾನದ‌ ಬಗ್ಗೆ ಚರ್ಚೆ ಅನಗತ್ಯ ಎಂಬ ವಿಚಾರವನ್ನು ನಾನು ಸಹ ಹೇಳಿದ್ದೇನೆ. ಮಾಧ್ಯಮದವರು ಮುಖ್ಯಮಂತ್ರಿಯಾಗುತ್ತೀರ ಎಂದು ಕೇಳಿದಾಗ, ನಾವು ಬೇಡ ಅಂತ ಯಾಕೆ ಹೇಳಬೇಕು ಅಂತ ನನಗೆ ಆ ಸ್ನೇಹಿತರು ಹೇಳಿದ್ದಾರೆ. ಅಷ್ಟು ಬಿಟ್ಟರೆ ಬೇರೆ ಏನು ಇಲ್ಲ” ಎಂದರು.

“ಸಚಿವ ಎಂ ಬಿ ಪಾಟೀಲ್ ಅವರು ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ‌. ನಾನು ಸಹ ಗೃಹ ಇಲಾಖೆಗೆ ಸಂಬಂಧಿಸಿದ ಕೆಲಸ ಇದ್ದರೆ ದೆಹಲಿಗೆ ಹೋಗುತ್ತೇನೆ. ಹೋದಾಕ್ಷಣ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಮಾಡಲು ಹೋಗಿದ್ದರು ಅಂತ ಹೇಳಿ ಬಿಟ್ಟರೆ ಹೇಗೆ? ಈ ಬಗ್ಗೆ ಚರ್ಚೆಯೇ ಅನಗತ್ಯ” ಎಂದು ಹೇಳಿದರು‌.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X