ಚಿತ್ರದುರ್ಗ | ವಿದ್ಯಾರ್ಜನೆ ಬಾಲ್ಯವಿವಾಹ ತಡೆಗೆ ದಾರಿ: ಆರ್ ಕೆ ಸರ್ದಾರ್

Date:

Advertisements

ನಮ್ಮ ಭಾರತದ ಕಾನೂನಿನ ಅಡಿಯಲ್ಲಿ ಬಾಲ್ಯವಿವಾಹ ಕಾಯ್ದೆ ಪ್ರಕಾರ 18 ವರ್ಷದೊಳಗಿನವರಿಗೆ ಮದುವೆ ಮಾಡಬಾರದು ಅಥವಾ ಅವರು ಮಾಡಿಕೊಳ್ಳಬಾರದು. ಮಕ್ಕಳಿಗೆ ವಿದ್ಯೆಯನ್ನು ಕೊಡಿಸಿ ಛಲ ತುಂಬಬೇಕು. ವಿದ್ಯಾರ್ಜನೆ ಬಾಲ್ಯವಿವಾಹ ತಡೆಗೆ ದಾರಿಯಾಗಿದೆ ಎಂದು ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕಾಂಗ್ರೆಸ್ ಮುಖಂಡ ಆರ್ ಕೆ ಸರ್ದಾರ್ ಕರೆ ನೀಡಿದರು.

ಚಿತ್ರದುರ್ಗದಲ್ಲಿ ಸೆಪ್ಟಂಬರ್‌ 10ರಂದು ಟಿಪ್ಪು ಸ್ಪೋರ್ಟ್ಸ್ ಕ್ಲಬ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಕಾಯಿದೆ ಹಾಗೂ ಮಹಿಳೆಯರು, ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಕ್ಕಳಿಗೆ ಮದುವೆ ಮುಖ್ಯವಲ್ಲ. ವಿದ್ಯಾಭ್ಯಾಸ ಮುಖ್ಯವಾಗಿರುತ್ತದೆ. ಉತ್ತಮ ವಿದ್ಯಾಭ್ಯಾಸದ ನಂತರ ವಯಸ್ಕರಾದ ಮೇಲೆ ಮದುವೆ ಮಾಡಬೇಕು” ಎಂದು ಕರೆ ನೀಡಿದರು.

Advertisements

“ನಮ್ಮ ರಾಷ್ಟ್ರ ಭಾರತ, ಬೇರೆ ಯಾವುದೋ ದೇಶವಲ್ಲ. ನಮ್ಮ ಭಾರತದ ಕಾನೂನಿಗೆ ವಿರುದ್ಧವಾಗಿ ನೆಡೆದರೆ, ಬಾಲ್ಯವಿವಾಹ, ಅನೈತಿಕ ಚಟುವಟಿಕೆಗಳಾದರೆ ಕಾನೂನಿನ ನಿಟ್ಟಿನಲ್ಲಿ ಕ್ರಮ ಜರುಗಿಸುವುದು ಖಚಿತ. ಧರ್ಮ ಜೀವನದ ಒಂದು ಭಾಗವಷ್ಟೆ. ಹಿಂದಿನ ಕಾಲದ ಜನರು ವಿದ್ಯೆ ಇಲ್ಲದಂತೆ ಮಕ್ಕಳನ್ನು ಬೆಳೆಸುವ ಅನಿವಾರ್ಯತೆ, ಸಂದರ್ಭ ಇತ್ತು. ಇಂದು ಸಾಕಷ್ಟು ಬದಲಾವಣೆಗಳಾಗಿವೆ. ಎಲ್ಲರಿಗೂ ಶಿಕ್ಷಣ ದೊರೆಯುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ-ಪೂನಾ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರ; ಸೆ.15ರಂದು ಚಾಲನೆ

ಕಾರ್ಯಕ್ರಮದಲ್ಲಿ ಜಿಲ್ಲಾ ವಕ್ಫ್ ಬೋರ್ಡ್ ಅಮ್ಜದ್, ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ ಪೀರ್, ರಾಜ್ಯಾಧ್ಯಕ್ಷ ಟಿಪ್ಪು ಖಾಸಿಂ ಅಲಿ, ಮಹಾಬೂಬ ಖಾನ್, ರಹಮತುಲ್ಲಾ, ನಗರ ಸಭೆ ಸದಸ್ಯ ನಸ್ರು, ಬಾಬು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X