ಗುಬ್ಬಿ | ಬಡ್ಡಿ ದಂಧೆಗೆ ಮತ್ತೋರ್ವ ಬಲಿ : ನಿಟ್ಟೂರು ವಾಸಿ ನೇಣಿಗೆ ಶರಣು; ಆತಂಕದಲ್ಲಿ ಜನತೆ

Date:

Advertisements

ಮೀಟರ್ ಬಡ್ಡಿ ದಂಧೆಗೆ ಬೇಕರಿ ಮಾಲೀಕ ಬಲಿಯಾದ ಘಟನೆ ಮಾಸುವ ಮುನ್ನವೇ ಬಡ್ಡಿ ದಂಧೆ ಕಿರುಕುಳಕ್ಕೆ ಮತ್ತೋರ್ವ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ.

ನಿಟ್ಟೂರು ಗ್ರಾಮದ ಒಲಂಪಿಕ್ ಹೇರ್ ಡ್ರೆಸಸ್ ಅಂಗಡಿ ಮಾಲೀಕ ರಾಮಸ್ವಾಮಿ (45) ಬಡ್ಡಿ ಕಿರುಕುಳಕ್ಕೆ ಬಲಿಯಾದ ವ್ಯಕ್ತಿ. ಯೋಗೀಶ್ ಎಂಬಾತನ ಮೀಟರ್ ಬಡ್ಡಿ ವ್ಯವಹಾರಕ್ಕೆ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ತಾಲೂಕಿನ ಜನರಲ್ಲಿ ಆತಂಕ ಮೂಡಿಸಿದೆ.

ಕಳೆದ ಆರೇಳು ವರ್ಷದ ಹಿಂದೆ ನಿಟ್ಟೂರು ನಿವಾಸಿ ಯೋಗೀಶ್ ಎಂಬಾತನಿಂದ ಪಡೆದ ಮೂರು ಲಕ್ಷ ರೂಗಳ ಸಾಲಕ್ಕೆ ಬಡ್ಡಿ ಕಟ್ಟುತ್ತಲೇ ಬಂದಿದ್ದ ಮೃತ ರಾಮಸ್ವಾಮಿ, ಅವರನ್ನು ಮಂಗಳವಾರ ಹುಡುಕಿಕೊಂಡು ಯೋಗೀಶ್ ಸೆಲೂನ್‌ಗೆ ಬಂದಿದ್ದ. ಆ ಬಳಿಕ ಒಂದು ತಾಸಿನ ನಂತರ ಮರಳಿ ಬಂದು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisements

ಯೋಗೀಶ್ ಎಂಬುವವರು ನಿಟ್ಟೂರಿನಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದು, ನನ್ನ ತಮ್ಮ ರಾಮಸ್ವಾಮಿಗೆ ಬಳಿ ಚೆಕ್ ಪಡೆದು ಸಾಲವಾಗಿ ಮೂರು ಲಕ್ಷ ನೀಡಿ ಆರೇಳು ವರ್ಷದಿಂದ ಬಡ್ಡಿ ವಸೂಲಿ ಮಾಡಿದ್ದಾರೆ. ಬಲಾಢ್ಯರ ಮುಂದೆ ಸಣ್ಣ ಸಮುದಾಯ ಸವಿತಾ ಸಮಾಜದ ನಾವುಗಳು ನೋವು ನುಂಗಿ ಬದುಕುವಂತಾಗಿದೆ. ಸಾಲ ವಸೂಲಿಗೆ ಅಂಗಡಿಯಿಂದ ಕರೆದು ಹೋದ ಯೋಗೀಶ್ ಕಿರುಕುಳಕ್ಕೆ ನನ್ನ ತಮ್ಮ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಅಣ್ಣ ಗೋವಿಂದಸ್ವಾಮಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ರಾಮನಗರ | ಸಾಲ ತೀರಿಸಲು ನೆರೆಮನೆಯ ಬಾಲಕಿಯ ಅಪಹರಣಕ್ಕೆ ಯತ್ನ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕ

ವಿಚಯ ತಿಳಿದು ಸ್ಥಳಕ್ಕೆ ಆಗಮಿಸಿದ ಗುಬ್ಬಿ ಪೊಲೀಸರು, ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X