ಕಲಬುರಗಿ | ದೇಶಸೇವೆ ಮುಗಿಸಿ ತಾಯ್ನಾಡಿಗೆ ಮರಳಿದ ವೀರಯೋಧ ಸಿದ್ದರಾಮ ಮುನ್ನೊಳಿ; ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ

Date:

Advertisements

ದೇಶದ ಗಡಿಯಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿ ಹುಟ್ಟೂರಿಗೆ ವಾಪಸಾದಾ ಯೋಧ ಸಿದ್ದರಾಮ ಮುನ್ನೊಳಿ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದು, ಇಡೀ ಊರೇ ಹೂಮಳೆಗೆರೆದು ಅದ್ದೂರಿ ಮೇರವಣಿಗೆ ನಡೆಸುವ ಮೂಲಕ ಹಬ್ಬದಂತೆ ಸಂಭ್ರಮಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಪಡಸಾವಳಿ ಗ್ರಾಮದಲ್ಲಿ ಎಲ್ಲೆಂದರಲ್ಲಿ ರಾರಾಜಿಸುತ್ತಿರುವ ತ್ರಿವರ್ಣ ಧ್ವಜಗಳು, ಒಂದೇ ಮಾತರಂ ಎಂದು ಘೋಷಣೆ ಕೂಗಿತ್ತಿರುವ ಯುವಕರು, ತೆರೆದ ವಾಹನದಲ್ಲಿ ಜನರತ್ತ ಕೈಬಿಸುತ್ತಿರುವ ವೀರಯೋಧ. ಈ ಎಲ್ಲ ದೃಶ್ಯಗಳು ಕಂಡುಬಂದಿದೆ. 40 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ವಾಪಸ್ಸಾದ ವೀರಯೋಧ ಸಿದ್ದರಾಮ ಮುನ್ನೊಳಿ ಅವರನ್ನು ಗ್ರಾಮಸ್ಥರೆಲ್ಲ ಸೇರಿ ಅದ್ದೂರಿಯಾಗಿ ಸ್ವಾಗತಿಸಿದರು‌. ನಗರದ ತುಂಬೆಲ್ಲ ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆ ನಡೆಸಿ ದೇಶಾಭಿಮಾನ ಮೆರೆದಿದ್ದಾರೆ.

ಬಳಿಕ ನಡೆದ ಸಮಾರಂಭದಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಡಾ. ಶಂಭುಲಿಂಗ ಶಿವಾಚಾರ್ಯರು, ಮಾಜಿ ಸೈನಿಕರು, ಗ್ರಾಮದ ಗಣ್ಯರು ಭಾಗವಹಿಸಿ ನಿವೃತ್ತ ಯೋಧ ಸಿದ್ದರಾಮ ಅವರಿಗೆ ಅಭಿನಂದನೆ ಸಲ್ಲಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನಿಯಮ ಮೀರಿ ಪ್ಲಾಸ್ಟಿಕ್ ಬಳಸಿದರೆ ಅಂಗಡಿಗಳ ಪರವಾನಗಿ ರದ್ದು: ಸುಭಾಷ್ ಆಡಿ ಎಚ್ಚರಿಕೆ

ಮನೆಯಲ್ಲಿ ಅದೆಷ್ಟೇ ಕಷ್ಟ ಇದ್ದರೂ ಸಹ ದೇಶಸೇವೆಯೇ ಮುಖ್ಯವೆಂದು ಯೋಧ ಸಿದ್ದರಾಮ ಅವರು ಛಲ ಬಿಡದೆ 40 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ, ದೇಶದ ನಾನಾ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿ, ರಾಷ್ಟ್ರಪತಿ ಪದಕವನ್ನು ಪಡೆದು ಸೈ ಎನಿಸಿಕೊಳ್ಳುವ ಮೂಲಕ ಯುವಕರಿಗೆ ಮಾದರಿಯಾಗಿದ್ದಾರೆ.

ವರದಿ: ಸಿಟಿಜನ್ ಜರ್ನಲಿಸ್ಟ್ ರಾಜೇಂದ್ರ ರಾಜವಾಳ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X