ರಾಯಚೂರು | ವಕ್ಫ್ ಬೋರ್ಡ್‌ ತಿದ್ದುಪಡಿ ಮಸೂದೆಗೆ ವಿರೋಧ: ಮನೆ ಮನೆಗೆ ತೆರಳಿ ಅಭಿಯಾನ

Date:

Advertisements

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ಗುರುಗುಂಟ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಮನೆ ಮನೆಗೆ ತೆರಳಿ ವಕ್ಫ್ ಬೋರ್ಡ್‌ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಸಹಿ ಸಂಗ್ರಹ ಮಾಡುವ ಮೂಲಕ ಜಾಗೃತಿ ಮೂಡಿಸಿದರು.

ಕೇಂದ್ರ ಸರ್ಕಾರವು ಭಾರತದಾದ್ಯಂತ ವಿಶಾಲವಾದ ವಕ್ಫ್ ಆಸ್ತಿಗಳ ಮೇಲೆ ಮುಸ್ಲಿಮರ ನಿಯಂತ್ರಣವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಹೊಸ ತಿದ್ದುಪಡಿಗಳು ಸಮುದಾಯದ ಹಕ್ಕುಗಳನ್ನು ಮೊಟಕುಗೊಳಿಸುವ ಹುನ್ನಾರ ನಡೆದಿದೆ. ಇದನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತಹಾಕಿ ರದ್ದುಪಡಿಸಬೇಕು ಎಂದು ಜನರಿಗೆ ತಿಳಿಸಿದರು.

ತಿದ್ದುಪಡಿ ಮಾಡುವ ಪ್ರಸ್ತುತ ಕ್ರಮವು ಸಂವಿಧಾನ ವಿರೋಧಿ ಮತ್ತು ನಿರಂಕುಶವಾಗಿದೆ. ಮೋದಿ ಸರ್ಕಾರವು ಮುಸ್ಲಿಂ ವಕ್ಫ್ ಆಸ್ತಿಗಳನ್ನು ಗುರಿಯಾಗಿಸಿಕೊಂಡಿದೆ. ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಕೇಂದ್ರ ಸರ್ಕಾರದ ಕ್ರಮ ದುರುದ್ದೇಶಪೂರಿತ ಹೆಜ್ಜೆಯಾಗಿದೆ ಎಂದು ತಿಳಿಸಿದರು.

Advertisements

ಈ ಬಗ್ಗೆ ಎಸ್ ಡಿ ಪಿ ಐ ಮುಖಂಡ ಮೀರ್ ಅಲಿ ಮಾತನಾಡಿ, “ವಕ್ಫ್ ಆಸ್ತಿಗಳು ಸಾರ್ವಜನಿಕ ಆಸ್ತಿಗಳಲ್ಲ. ಇದು ಮುಸಲ್ಮಾನ ಸಮುದಾಯದ ಗಣ್ಯ ವ್ಯಕ್ತಿಗಳು ದಾನವಾಗಿ ನೀಡಿದ್ದು, ವಕ್ಫ್‌ ಆಸ್ತಿಯಾಗಿದೆ. ಸಮುದಾಯದ ಜನರು ಆರ್ಥಿಕವಾಗಿ ಸದೃಢವಾಗಲಿ ಎಂಬ ಸದುದ್ದೇಶದಿಂದ ವಕ್ಫ್‌ ಆಸ್ತಿಯಾಗಿ ಮಾರ್ಪಾಡಾಗಿದೆ” ಎಂದರು.

ಇದನ್ನು ಓದಿದ್ದೀರಾ? ಬೆಂಗಳೂರು | ಹಗಲು-ರಾತ್ರಿ ರಸ್ತೆ ಗುಂಡಿ ಮುಚ್ಚುವ ಕಾರ್ಯದಲ್ಲಿ ನಿರತರಾದ ಬಿಬಿಎಂಪಿ ಅಧಿಕಾರಿಗಳು

ಸಂವಿಧಾನದ ಪರಿಚ್ಛೇದ 25 – 28 ರ ಅಡಿಯಲ್ಲಿ ಖಾತ್ರಿಪಡಿಸಲಾದ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ನಿರಾಕರಿಸುವುದು ಮತ್ತು ಮುಸ್ಲಿಮರನ್ನು ಎರಡನೇ ದರ್ಜೆಯ ಪ್ರಜೆಗಳೆಂದು ಬದಿಗಿಟ್ಟು ಅವರನ್ನು ಗುಲಾಮರನ್ನಾಗಿ ಮಾಡುವುದು ಉದ್ದೇಶಪೂರ್ವಕ ಯೋಜನೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಕೋಮುವಾದಿ ಅಜೆಂಡಾವನ್ನು ಎಸ್ ಡಿಪಿಐ ಪಕ್ಷ ಬಲವಾಗಿ ಪ್ರತಿಭಟಿಸುತ್ತದೆ. ಸರ್ಕಾರವು ಈ ಸಂವಿಧಾನ ವಿರೋಧಿ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X