ರಾಮನಗರ | ರೈತರ ಸಮಸ್ಯೆಗಳ ನಿರ್ಲಕ್ಷ್ಯ ಸಲ್ಲದು ; ಬಡಗಲಪುರ ನಾಗೇಂದ್ರ

Date:

Advertisements

ರೈತರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ ಸಲ್ಲದು. ರೈತರ ನ್ಯಾಯಯುತ ಬೇಡಿಕೆಗಳ ಬಗ್ಗೆ ಸಭೆ ನಡೆಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿಯವರನ್ನು ಮಂಗಳವಾರ ಭೇಟಿ ಮಾಡಿದ ರೈತಸಂಘ, ಕನ್ನಡಪರ ಸಂಘಟನೆ ಹಾಗೂ ದಲಿತಪರ ಸಂಘಟನೆಗಳ ನಿಯೋಗವು, ಜಿಲ್ಲಾಧಿಕಾರಿಯ 144 ಸೆಕ್ಷನ್ ಜಾರಿಯ ಅಸಾಂವಿಧಾನಿಕ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಮಾತನಾಡಿ, ಚಳುವಳಿಗೆ ಬಹು ಪಾವಿತ್ರ್ಯಮಯ ಇತಿಹಾಸ ಇದೆ. ಅದನ್ನು ಹತ್ತಿಕ್ಕುವ ಮನಸ್ಥಿತಿ ಸಂವಿಧಾನಕ್ಕೆ ಮಾರಕ. ಅದನ್ನು ತಕ್ಷಣ ವಾಪಾಸ್ ಪಡೆಯುವಂತೆ ತಾವು ನಿರ್ದೇಶನ ನೀಡಬೇಕು ಎಂದರು.

Advertisements
ನಾಗೇಂದ್ರ ೧

ರಾಜ್ಯ ಗೌರವಾಧ್ಯಕ್ಷರಾದ ಚಾಮರಸ ಮಾಲಿ ಪಾಟೀಲ ಮಾತನಾಡಿ, ನೆನ್ನೆ ನಡೆದ ಹೋರಾಟದಲ್ಲಿ ರೈತ ಮಹಿಳೆಯರ ವಿರುದ್ಧ ಉದ್ದಟತನ ಪ್ರದರ್ಶಿಸಿದ, ಅವಹೇಳನಕಾರಿಯಾಗಿ ಮಾತನಾಡಿದ ಡಿವೈಎಸ್‌ಪಿ ದಿನಕರ್ ಶೆಟ್ಟಿಯನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿ ಎಂದು ಆಗ್ರಹಿಸಿದರು.

ರೈತ ನಿಯೋಗದ ಮನವಿ ಸ್ವೀಕರಿದ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ, ರಶ್ಮಿ, ಕಂದಾಯ ಇಲಾಖೆಯ ಕಾರ್ಯದರ್ಶಿ ರೈತರ 32 ಬೇಡಿಕೆಗಳ ರೈತ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ ಸಾಧಕ ಭಾದಕಗಳ ಬಗ್ಗೆ ವರದಿ ಪಡೆದು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈಗಲೇ ಸೂಚಿಸುತ್ತೇನೆ. 144 ಸೆಕ್ಷನ್ ನಿಷೇದಾಗ್ನೆ ಬಗ್ಗೆ ಜಿಲ್ಲಾಧಿಕಾರಿಯ ಜೊತೆ ಚರ್ಚಿಸಿ ವಾಪಾಸ್ ಪಡೆಯುವಂತೆ ಸೂಕ್ತ ನಿರ್ದೇಶನ ನೀಡುತ್ತೇನೆ. 15 ದಿನಗಳ ಒಳಗಾಗಿ ಎಲ್ಲಾ ತೊಡಕುಗಳ ಬಗ್ಗೆ ಕಾನೂನು ತಜ್ಞರೊಡನೆ ಚರ್ಚಿಸಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಮದ್ದೂರು ಪುರಸಭೆಯಲ್ಲಿ 17 ವರ್ಷಗಳ ಬಳಿಕ ಗದ್ದುಗೆ ಏರಿದ ಕಾಂಗ್ರೆಸ್‌

ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಮಲ್ಲಯ್ಯ, ಸಂಚಾಲಕ ಮುನಿರಾಜು, ರಾಮನಗರ ಜಿಲ್ಲಾಧ್ಯಕ್ಷ ತಿಮ್ಮೇಗೌಡ, ಕರವೇ ಪ್ರವೀಣ್ ಶೆಟ್ಟಿ ಬಣ ಜಿಲ್ಲಾಧ್ಯಕ್ಷ ರಾಜು ಎಂ ಎನ್ ಆರ್, ಕರವೇ ಸ್ವಾಭಿಮಾನಿ ಬಣದ ರಾಜ್ಯ ಉಸ್ತುವಾರಿ ಶಿವುಗೌಡ, ಕೆಆರ್‌ಎಸ್ ಪಕ್ಷದ ಮುಖಂಡ ಪ್ರಶಾಂತ್ ಹೊಸದುರ್ಗ, ಸ್ವತಂತ್ರ ಕರ್ನಾಟಕ ಜಿಲ್ಲಾಧ್ಯಕ್ಷ ಕನ್ನಡ ಭಾಸ್ಕರ್, ಕರವೇ ಕಾರ್ಯಧ್ಯಕ್ಷ ಲೋಕೇಶ್ ಆರ್ ಬಿ ಎಲ್, ರೈತಸಂಘದ ಚಂದ್ರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X