ಭಾರತ ಮಾತೆಗೆ ಮೋದಿ ದ್ರೋಹ ಬಗೆದಿದ್ದಾರೆಂದು ಘೋಷಿಸೋಣವೇ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

Date:

Advertisements

ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಬ್ರಮಣಿಯನ್ ಸ್ವಾಮಿ ಚೀನಾವು ಭಾರತವನ್ನು ಆಕ್ರಮಿಸಿಕೊಂಡಿರುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಚೀನಾ ಭಾರತದ ಗಡಿ ಆಕ್ರಮಿಸಿಕೊಂಡರೂ ಪ್ರಧಾನಿ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ “ಭಾರತ ಮಾತೆಗೆ ಮೋದಿ ದ್ರೋಹ ಬಗೆದಿದ್ದಾರೆಂದು ಘೋಷಿಸೋಣವೇ” ಎಂದು ಪ್ರಶ್ನಿಸಿದ್ದಾರೆ.

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಅರುಣಾಚಲ ಪ್ರದೇಶದಲ್ಲಿ ಕನಿಷ್ಠ 60 ಕಿಲೋಮೀಟರ್ ಭಾರತದ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ವರದಿಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ ಚೀನಾದೊಂದಿಗೆ ರಾಯಭಾರಿ ಮಟ್ಟದ ಸಂಬಂಧವನ್ನು ಕಡಿದುಕೊಳ್ಳಲು ಆಗ್ರಹಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ನಾಯಕ, “ಚೀನಾವು ಪೀಪಲ್ಸ್ ಲಿಬರೇಶನ್ ಆರ್ಮಿಯು (ಪಿಎಲ್‌ಎ) ಭಾರತೀಯ ಭೂಪ್ರದೇಶದೊಳಗೆ 60 ಕಿ.ಮೀ.ನಷ್ಟು ಆಕ್ರಮಿಸಿಕೊಂಡು ಬೀಡುಬಿಟ್ಟಿದೆ ಎಂದು ವರದಿಯಾಗಿದೆ. ಈಗ ನಾವು ಭಾರತ ಮಾತೆಯ ಗೌರವಕ್ಕೆ ಮೋದಿ ದ್ರೋಹ ಬಗೆದಿದ್ದಾರೆ ಎಂದು ಘೋಷಿಸೋಣವೇ? ಚೀನಾದೊಂದಿಗೆ ರಾಯಭಾರಿ ಮಟ್ಟದ ಸಂಬಂಧವನ್ನು ಕಡಿದುಕೊಳ್ಳಲು ನಾನು ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ? ಮೋದಿ 75 ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ, ಕಿತ್ತು ಹಾಕಲಾಗುತ್ತದೆ: ಸುಬ್ರಮಣಿಯನ್ ಸ್ವಾಮಿ

“ಮಾಲ್ಡೀವ್ಸ್ ಸಿಂಡ್ರೋಮ್ ಬಾಂಗ್ಲಾದೇಶದಲ್ಲಿ ಮೌನವಾಗಿ ಹರಡುತ್ತಿದೆ ಮತ್ತು ಮೋದಿ ಅವರ ಪರಂಪರೆಯು ಭಾರತದ ವಿಘಟನೆಗಾಗಿ ಕೆಲಸ ಮಾಡುವ ನೆರೆಹೊರೆಯವರನ್ನು ಸೃಷ್ಟಿಸುತ್ತಿದೆ. ಮುಂಬರುವ 25 ವರ್ಷಗಳ ‘ಅದ್ಭುತ’ ಮೋದಿ ಪರಂಪರೆ: ಭಾರತವನ್ನು ಸುತ್ತುವರೆದಿರುವ ನೆರೆಹೊರೆಯವರು ನಮ್ಮ ವಿಘಟನೆಗಾಗಿ ಕೆಲಸ ಮಾಡುತ್ತಾರೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಬಿಜೆಪಿಯ ಹಿರಿಯ ನಾಯಕ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವಾರು ಬಾರಿ ಸರ್ಕಾರದ ಕೆಲವು ನಿಲುವುಗಳನ್ನು ವಿರೋಧಿಸಿದ್ದಾರೆ. ಪ್ರಧಾನಿ ವಿರುದ್ಧ, ವಿದೇಶಾಂಗ ನೀತಿಯ ವಿರುದ್ಧ ಕಿಡಿಕಾರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X