ರಾಯಚೂರು | ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಕಾಂಗ್ರೆಸ್ ನಾಯಕರಿಂದ ಸ್ವಾಗತ!

Date:

Advertisements

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶ ಚತುರ್ಥಿ ವಿಸರ್ಜನಾ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಮುಖ್ಯ ಅತಿಥಿಯಾಗಿ ಸ್ವಾಗತಿಸಿದ್ದು, ಸಾರ್ವಜನಿಕರಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಯುವಕರ ಸೇನೆ ಆಯೋಜಿಸಿರುವ ಗಣೇಶೋತ್ಸವ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ನಾಯಕರೇ ಬಿಜೆಪಿ ಶಾಸಕರನ್ನು ಆಹ್ವಾನಿಸಿರುವುದು ಕಾಂಗ್ರೆಸ್‌ನ ಕೆಲವು ನಾಯಕರಲ್ಲಿ ಅಸಮಾಧಾನ ಉಂಟು ಮಾಡಿದೆ.

ಮಾನ್ವಿ ನಗರದಲ್ಲಿ ವಿವಿಧ ಮುಖ್ಯ ರಸ್ತೆಗಳಲ್ಲಿ ಹರೀಶ್ ಪೂಂಜಾ ಅವರನ್ನು ಸ್ವಾಗತಿಸಿ ಹಾಕಿರುವ ಫ್ಲೆಕ್ಸ್‌ನಲ್ಲಿ ಜಿಲ್ಲೆಯ ಸಚಿವರಾದ ಎನ್ ಎಸ್ ಬೋಸರಾಜ, ಅವರ ಮಗ ರವಿ ಬೋಸರಾಜ್, ಮಾನ್ವಿ ಶಾಸಕ ಹಂಪಯ್ಯ ನಾಯಕ, ಎಂಎಲ್‌ಸಿ ಬಸನಗೌಡ ಬಾದರ್ಲಿ ಕಾಣಿಸಿಕೊಂಡಿದ್ದಾರೆ.

Advertisements

ಕಾರ್ಯಕ್ರಮದ ಮುಖ್ಯ ಸಂಘಟಕರಾಗಿರುವ ಎಂಎಲ್‌ಸಿ ಬಸನಗೌಡ ಬಾದರ್ಲಿ ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಸಹಪಾಠಿಗಳು(ಕ್ಲಾಸ್‌ಮೇಟ್ಸ್‌) ಎನ್ನಲಾಗಿದೆ. ಹೀಗಾಗಿ, ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರೆದಿದ್ದಾರೆ ಎಂಬ ಮಾತುಗಳು ಸ್ಥಳೀಯವಾಗಿ ಕೇಳಿಬಂದಿದೆ.

ಸದಾ ವಿವಾದಾತ್ಮಕ ಹೇಳಿಕೆ ಹಾಗೂ ಮುಸ್ಲಿಂ ಸಮುದಾಯ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರ ವಿರುದ್ಧ ದ್ವೇಷ ಭಾಷಣ ಮಾಡುವುದರಿಂದಲೇ ಗುರುತಿಸಿಕೊಂಡಿರುವ ಬಿಜೆಪಿಯ ಶಾಸಕ ಹರೀಶ್ ಪೂಂಜಾರನ್ನು ಕಾಂಗ್ರೆಸ್ ನಾಯಕರು ಫ್ಲೆಕ್ಸ್ ಹಾಕಿ ಸ್ವಾಗತ ಕೋರಿರುವುದು, ವ್ಯಾಪಕ ಆಕ್ರೋಶಕ್ಕೂ ವ್ಯಕ್ತವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X