ಅಮೆರಿಕವನ್ನು ಕಂಡುಹಿಡಿದಿದ್ದು ನಮ್ಮ ಪೂರ್ವಜರು, ಕೊಲಂಬಸ್ ಅಲ್ಲ: ಮಧ್ಯಪ್ರದೇಶ ಶಿಕ್ಷಣ ಸಚಿವ

Date:

Advertisements

“ಭಾರತದ ನಾವಿಕರಾದ ನಮ್ಮ ಪೂರ್ವಜರು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕವನ್ನು ಕಂಡುಹಿಡಿದರು, ಕೊಲಂಬಸ್ ಅಲ್ಲ” ಎಂದು ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಮಂಗಳವಾರ ಹೇಳಿದ್ದಾರೆ.

ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಭಾಗಿಯಾಗಿದ್ದ ಬರ್ಕತುಲ್ಲಾ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಮಧ್ಯಪ್ರದೇಶ ಶಿಕ್ಷಣ ಸಚಿವರು, “ಭಾರತದ ನಾವಿಕರೊಬ್ಬರು ಅಮೆರಿಕ ಕಂಡುಹಿಡಿದರು” ಎಂದು ಹೇಳಿದರು.

ಹಾಗೆಯೇ, “ಭಗವಾನ್ ರಾಮನ ಪ್ರತಿಮೆಗಳನ್ನು ಮಾಡಿದ ಭಾರತೀಯ ವಾಸ್ತುಶಿಲ್ಪಿ ಸಹಾಯದಿಂದ ಬೀಜಿಂಗ್ ನಗರವನ್ನು ವಿನ್ಯಾಸಗೊಳಿಸಲಾಗಿದೆ. ಋಗ್ವೇದವನ್ನು ಬರೆದವರು ಭೂಮಿಯು ಸೂರ್ಯನ ಸುತ್ತ ಸುತ್ತುತ್ತದೆ ಎಂದು ಮೊದಲು ಊಹಿಸಿದವರು” ಎಂದೂ ಹೇಳಿಕೊಂಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ರಾಹುಲ್ ಗಾಂಧಿ ಮೂರು ದಿನಗಳ ಅಮೆರಿಕ ಪ್ರವಾಸ

“ಇತಿಹಾಸಕಾರರು ವ್ಯವಸ್ಥಿತವಾಗಿ ಭಾರತದ ಶಕ್ತಿಯನ್ನು ದುರ್ಬಲಗೊಳಿಸಿದ್ದಾರೆ. ಸುಳ್ಳು ಸಂಗತಿಗಳಿಂದಾಗಿ, ಭಾರತದ ನಕಾರಾತ್ಮಕ ಚಿತ್ರಣವನ್ನು ಜಗತ್ತಿಗೆ ಪ್ರಸ್ತುತಪಡಿಸಲಾಗಿದೆ” ಎಂದು ಇಂದರ್ ಸಿಂಗ್ ಪರ್ಮಾರ್ ಆರೋಪಿಸಿದರು.

“ನಮ್ಮ ಪೂರ್ವಜರು ಜ್ಞಾನ, ಕೌಶಲ್ಯ ಮತ್ತು ಸಾಮರ್ಥ್ಯದ ಪ್ರತಿಯೊಂದು ಅಂಶದಲ್ಲೂ ಮುಂದುವರಿದಿದ್ದವರು. ನಾವು ಯಾವುದೇ ಕೀಳರಿಮೆಯನ್ನು ಹೊಂದಿರಬಾರದು. ಉನ್ನತ ವಿಚಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಮುನ್ನಡೆಯಲು ಶ್ರಮಿಸಬೇಕು” ಎಂದು ತಿಳಿಸಿದರು.

“ಕೊಲಂಬಸ್ ಅಮೆರಿಕವನ್ನು ಕಂಡುಹಿಡಿದನು ಎಂಬುದು ಭಾರತದಲ್ಲಿ ಅನಗತ್ಯವಾಗಿ ಕಲಿಸಲ್ಪಟ್ಟ ಸುಳ್ಳಾಗಿದೆ. ಇದು ಭಾರತೀಯ ವಿದ್ಯಾರ್ಥಿಗಳಿಗೆ ಅಪ್ರಸ್ತುತವಾಗಿತ್ತು. ಇದನ್ನು ಕಲಿಸಲು ಹೋದರೆ, ಕೊಲಂಬಸ್ ನಂತರ ಬಂದವರು ಮಾಡಿದ ದೌರ್ಜನ್ಯ, ಸ್ಥಳೀಯ ಸಮಾಜವನ್ನು ನಾಶ ಮಾಡಿದ ರೀತಿ, ಮತಾಂತರ ಮಾಡಿದ ಬಗ್ಗೆಯೂ ನಾವು ಕಲಿಸಬೇಕಾಗಿತ್ತು” ಎಂದು ಅಭಿಪ್ರಾಯಿಸಿದರು.

“ಒಬ್ಬ ಭಾರತೀಯ ನಾವಿಕ 8ನೇ ಶತಮಾನದಲ್ಲಿ ಅಮೆರಿಕಕ್ಕೆ ಹೋಗಿ ಸ್ಯಾನ್ ಡಿಯಾಗೋದಲ್ಲಿ ಹಲವಾರು ದೇವಾಲಯಗಳನ್ನು ನಿರ್ಮಿಸಿದನು. ಅವುಗಳನ್ನು ಇನ್ನೂ ಅಲ್ಲಿನ ವಸ್ತುಸಂಗ್ರಹಾಲಯದಲ್ಲಿ ದಾಖಲಿಸಲಾಗಿದೆ, ಗ್ರಂಥಾಲಯಗಳಲ್ಲಿ ಸಂರಕ್ಷಿಸಲಾಗಿದೆ” ಎಂದು ಪರ್ಮಾರ್ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X