ವಸತಿಶಾಲೆಯಲ್ಲಿ ಅಡುಗೆ ಮಾಡುವ ಸಿಬ್ಬಂದಿಗಳ ಬಾಕಿವೇತನ ಪಾವತಿಸಲು, ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸ್ ಪಡೆಯಲು ಹಾಗೂ ಸಮಯಕ್ಕೆ ಸರಿಯಾಗಿ ವೇತನ ಪಾವತಿಸದ ಶಾರ್ಪ್ ಏಜೆನ್ಸಿ ಮೇಲೆ ಶಿಸ್ತು ಕ್ರಮ ಜರುಗಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲೆ ಹೊರಗುತ್ತಿಗೆ ನೌಕರರ ಸಂಘ ಆಗ್ರಹಿಸಿದೆ.
ಕಲಬುರಗಿ ಜಿಲ್ಲಾಸಮಿತಿಯಿಂದ ನಗರದ ಜಿಲ್ಲಾ ಪಂಚಾಯತ್ ಎದುರು ಧರಣಿ ಸತ್ಯಗ್ರಹ ನಡೆಸಿ ಮುಖ್ಯ ಕಾರ್ಯಾನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.
ರಾಜ್ಯಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಮಾತನಾಡಿ, “ಕಲಬುರಗಿ ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ, ಕ್ರೈಸ್ ವಸತಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಪಾವತಿಸದೇ ಇರುವುದರಿಂದ ನೌಕರರು ಅತ್ಯಂತ ಸಂಕಷ್ಟದಲ್ಲಿ ಒದ್ದಾಡುತ್ತಿದ್ದಾರೆ. ಅಲ್ಲದೇ ಸಿಬ್ಬಂದಿ ಕಡಿತ ಮಾಡಿರುವುದರಿಂದ ಕೆಲಸದ ಹೊರೆ ಹೆಚ್ಚಾಗಿ ನೌಕರರು ಅನಾರೋಗ್ಯದಿಂದ ಬಳಲುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.
“ಕ್ರೈಸ್ ವಸತಿನಿಲಯಗಳ ವೇತನಕ್ಕಾಗಿ ಅನುದಾನವಿದ್ದರೂ ಕೂಡಾ ಶಾರ್ಪ್ ಏಜನ್ಸಿ ನಿರ್ಲಕ್ಷ್ಯತನದಿಂದ ವೇತನ ಸಮಯಕ್ಕೆ ಸರಿಯಾಗಿ ಪಾವತಿಸದೇ ನೌಕರರು ಗೋಳಾಡುವಂತಾಗಿದೆ. ಕೂಡಲೇ ಬಾಕಿ ವೇತನ ಪಾವತಿಸಬೇಕು. ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸ್ ಪಡೆಯಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ 50 ಮಂದಿ ವಿದ್ಯಾರ್ಥಿಗಳಿಗೆ 3 ಜನರಂತೆ ಹಿಂದಿನ ಆದೇಶ ಜಾರಿಮಾಡಬೇಕು. ಕಳೆದ ಮೂರು ವರ್ಷಗಳಿಂದ ಕಡಿಮೆ ವೇತನ ಪಾವತಿಸಿದ ಶಾರ್ಪ್ ಏಜೆನ್ಸಿಯಿಂದ ‘ವ್ಯತ್ಯಾಸದ ಹಣ ಕೊಡಿಸಬೇಕು ಮತ್ತು ಇಡೀ ರಾಜ್ಯದಲ್ಲಿ ವಸತಿ ಶಾಲೆಗಳಲ್ಲಿ ಅಲ್ಲಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತಿರುವದರಿಂದ ಎಲ್ಲ ವಸತಿ ಶಾಲೆಗಳಲ್ಲಿ ಪ್ರಿನ್ಸಿಪಾಲ್, ವಾರ್ಡನ್ ಮತ್ತು ದೈಹಿಕ ಶಿಕ್ಷಕರು ಮಹಿಳಾ ಸಿಬ್ಬಂದಿಗಳೇ ಇರಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ಟಿಪ್ಪರ್ ಸಂಚಾರದಿಂದ ಹದಗೆಟ್ಟ ರಸ್ತೆ; ಸೂಕ್ತ ಕ್ರಮಕ್ಕೆ ಎಸ್ಎಫ್ಐ ಆಗ್ರಹ
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪರಶುರಾಮ ಹಡಲಗಿ, ಉಪಾಧ್ಯಕ್ಷ ಮೇಘರಾಜ ಕಠಾರ, ಅಧ್ಯಕ್ಷ ಬಾಬುರಾವ ಹೊಸಮನಿ, ಅದ್ಯಕ್ಷ ರಾಮಚಂದ್ರ ಪವಾರ, ಬಂಡೆ ಜಿಲ್ಲಾ ಕಾರ್ಯದರ್ಶಿ ಕಾಶಿನಾಥ, ಅಧ್ಯಕ್ಷೆ ನರಸಮ್ಮ ಚಂದಕೇರಾ, ಅಧ್ಯಕ್ಷ ನಾಗರಾಜ ಕಟ್ಟಿಮನಿ, ಅಧ್ಯಕ್ಷೆ ನಾಗರತ್ನ ಮದನಕರ, ಮಲ್ಲಮ್ಮ ಕೋಡ್ಲಿ, ಶಿವರಾಜ ಆಡಕಿ ಸೇರಿದಂತೆ ಇತರರು ಇದ್ದರು.