ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಸರ್ಕಾರದಿಂದ ಆಡಳಿತಾಧಿಕಾರಿಗಳನ್ನು ನೇಮಿಸಲು ಸಿಎಂಗೆ ಆಗ್ರಹ

Date:

Advertisements

ರಾಜ್ಯ ಸರ್ಕಾರಿ ನೌಕರರ ಸಂಘದ 2024 ರಿಂದ 2029ನೇ ಸಾಲಿನವರೆಗೆ ಆಡಳಿತ ಮಂಡಳಿಯ ಚುನಾವಣೆ ಬಾಕಿ ಇದ್ದು, ಪಾರದರ್ಶಕ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಕೋರಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, “ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಆಡಳಿತದ ಅವಧಿ ಮುಗಿದಿರುವ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಹೊಸ ಚುನಾಯಿತ ಆಡಳಿತ ಮಂಡಳಿ ಅಧಿಕಾರಕ್ಕೆ ಬರುವವರೆಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕು. ಮತ್ತು ಆಡಳಿತಾಧಿಕಾರಿಗಳ ಮೂಲಕ ಸರ್ಕಾರಿ ನೌಕರರ ಸಂಘದ 2024-29 ನೇ ಸಾಲಿಗೆ ಪಾರದರ್ಶಕವಾದ ಚುನಾವಣೆ ನಡೆಸಲು ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಸಂಘದ ಬೈಲಾ ಅನ್ವಯ ಈಗಿನ ಆಡಳಿತ ಮಂಡಳಿಯು ನಿಗದಿತ ಸಮಯದ ಒಳಗೆ ಆಡಳಿತ ಮಂಡಳಿಗೆ ಚುನಾವಣೆಯನ್ನು ನಡೆಸಲು ವಿಫಲವಾಗಿರುತ್ತದೆ. ಸಾಂಕೇತಿಕವಾಗಿ ದಿನಪತ್ರಿಕೆಯಲ್ಲಿ ಒಂದು ಜಾಹೀರಾತು ನೀಡಿದ್ದು, ಇಲ್ಲಿಯವರೆಗೆ ಕರಡು ಮತದಾರರ ಪಟ್ಟಿ ಚುನಾವಣಾ ವೇಳಾಪಟ್ಟಿ ಚುನಾವಣಾ ಅಧಿಕಾರಿಯ ನೇಮಕ ಆಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

Advertisements

“ಇಲ್ಲಿಯವರೆಗೆ ಇಲಾಖೆಯ ಅಧಿಕಾರಿಗಳು ನಿಯಮಾನುಸಾರ ಅವಧಿ ಮುಗಿದಿರುವ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಗಳನ್ನು ನೇಮಿಸಲು ನಿರ್ದಿಷ್ಟವಾದ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಯಾವುದೇ ಸಂಘ ಸಂಸ್ಥೆಗಳು ತಮ್ಮ ಆಡಳಿತ ಅವಧಿಯನ್ನು ದುರುಪಯೋಗ ಪಡಿಸಿಕೊಂಡು ಚುನಾಯಿತ ಅವಧಿ ಮುಗಿದ ನಂತರವೂ ಪದಾಧಿಕಾರಿಗಳಾಗಿ ಮುಂದುವರಿಯುವುದು ಕಾನೂನುಬಾಹಿರವಾಗಿರುತ್ತದೆ” ಎಂದು ವಿವರಿಸಿದ್ದಾರೆ.

“ತಾಲ್ಲೂಕು ಮಟ್ಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾಮಟ್ಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯಸಮಿತಿಯ ಸದಸ್ಯರು ಮತ್ತು ಇವರ ಮೂಲಕ ರಾಜ್ಯ ಮಟ್ಟದ ಪದಾಧಿಕಾರಿಗಳು ಚುನಾಯಿತರಾಗಬೇಕಾಗಿರುತ್ತದೆ. ಸಹಕಾರ ಸಂಘಗಳ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ 4ನೇ ವಲಯದ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು 21-08-2024 ರಲ್ಲಿ ಉಪನಿಬಂಧಕರ ಕಾರ್ಯಾಲಯದ ಸಹಕಾರ ಅಭಿವೃದ್ಧಿ ಅಧಿಕಾರಿಗೆ ಲಿಖಿತ ಪತ್ರ ನೀಡಿ ಸರ್ಕಾರಿ ನೌಕರರ ಸಂಘದ ವಿರುದ್ಧ ಚುನಾವಣೆ ಸಂಬಂಧ ಬಂದಿರುವ ಅರ್ಜಿಯ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ, ಆಡಳಿತ ಮಂಡಳಿಗೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಮತ್ತು ಚುನಾವಣೆಯವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸುವ ಸಂಬಂಧ ವರದಿ ನೀಡುವಂತೆ ಸೂಚಿಸಿರುತ್ತಾರೆ” ಎಂದಿದ್ದಾರೆ.

ರಾಜ್ಯದಲ್ಲಿ ಸುಮಾರು ನಾಲ್ಕುವರೆ ಲಕ್ಷ ಸರ್ಕಾರಿ ನೌಕರರು ತಮ್ಮ ಪ್ರಾತಿನಿಧಿಕ ಸಂಸ್ಥೆಯಾದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಚುನಾಯಿತ ಆಡಳಿತ ಮಂಡಳಿಯನ್ನು ಮತ್ತು ಪಾರದರ್ಶಕವಾದ ಆಡಳಿತವನ್ನು ಬಯಸುತ್ತಿದ್ದಾರೆ. ಈಗಿರುವ ಆಡಳಿತ ಮಂಡಳಿಯು ಉದ್ದೇಶಪೂರಕವಾಗಿ ಕೆಲವು ಸರ್ಕಾರಿ ನೌಕರರನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಅರ್ಹ ಮತದಾರರ ಪಟ್ಟಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳಿರುತ್ತವೆ” ಎಂದು ರಮೇಶ್‌ ಬಾಬು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X