ಚಿಕ್ಕಬಳ್ಳಾಪುರ | ಮುಚ್ಚಿದ ಲಕೋಟೆಯಲ್ಲಿ ವಿ.ಪ ಸದಸ್ಯರ ಮತದಾನಕ್ಕೆ ಕೋರ್ಟ್‌ ಆದೇಶ; ಬಿಜೆಪಿ ಹರ್ಷ

Date:

Advertisements

ನಗರಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯರು ಮುಚ್ಚಿದ ಲಕೋಟೆಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಹೈಕೋರ್ಟ್‌ ಬುಧವಾರ ಆದೇಶಿಸಿದ್ದು, ಬಿಜೆಪಿಗರಿಗೆ ಹರ್ಷ ತಂದಿದೆ.

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ಹಿನ್ನೆಲೆ ವಿ.ಪ ಸದಸ್ಯರನ್ನು ಮತದಾರರ ಪಟ್ಟಿಗೆ ಸೇರಿಸಿರುವುದನ್ನು ಪ್ರಶ್ನಿಸಿ ಬಿಜೆಪಿ ಸದಸ್ಯರು ಕೋರ್ಟ್‌ ಮೆಟ್ಟಿಲೇರಿದ್ದರು.

ಇದೀಗ ಬೆಂಗಳೂರು ಉಚ್ಚ ನ್ಯಾಯಾಲಯವು ಸದರಿ ಆದೇಶ ಹೊರಡಿಸಿ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದ್ದು, ವಿ.ಪ ಸದಸ್ಯರ ಮತಗಳು ರಿಟ್‌ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತವೆ ಎಂದು ಅಭಿಪ್ರಾಯಪಟ್ಟಿದೆ.

Advertisements

ಈ ಹಿನ್ನೆಲೆ ಬುಧವಾರ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಮುಖಂಡ ನವೀನ್‌ ಕಿರಣ್‌, ಕಾಂಗ್ರೆಸ್‌ನವರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ವಿಧಾನ ಪರಿಷತ್‌ ಸದಸ್ಯರನ್ನು ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರಿಸಿದ್ದಾರೆ. ಇದೀಗ ನ್ಯಾಯಾಲಯವು ನಮ್ಮ ಮನವಿಯನ್ನು ಪುರಸ್ಕರಿಸಿದ್ದು, ಮುಚ್ಚಿದ ಲಕೋಟೆಯಲ್ಲಿ ಮತ ಹಾಕಲು ಅವರಿಗೆ ಸೂಚಿಸಿದೆ. ಇದು ನಮಗೆ ಸಿಕ್ಕಿರುವ ತಾತ್ಕಾಲಿಕ ಜಯ ಎಂದು ಹರ್ಷ ವ್ಯಕ್ತಪಡಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಡಿ.ಎಸ್.ಆನಂದ ರೆಡ್ಡಿ ಮಾತನಾಡಿ, ವಿ.ಪ ಸದಸ್ಯರಾದ ಅನಿಲ್‌ ಕುಮಾರ್‌ ಮತ್ತು ಸೀತಾರಾಮ್‌ ಅವರು ಮತದಾರರ ಪಟ್ಟಿಗೆ ಸೇರಲು ಹಕ್ಕಿಲ್ಲ. ಅವರಿಬ್ಬರೂ ಚಿಕ್ಕಬಳ್ಳಾಪುರ ನಿವಾಸಿಗಳಲ್ಲ. ಆದರೂ ಸಹ ಅವರನ್ನು ಪಟ್ಟಿಗೆ ಸೇರಿಸಲಾಗಿದೆ. ಅವರು ನಾಮನಿರ್ದೇಶಿತ ಸದಸ್ಯರಾಗಿದ್ದು, ಸಂವಿಧಾನದ 243-R-(2)(a)(1)ನೇ ವಿಧಿ ಅನುಸಾರ ಇವರಿಬ್ಬರಿಗೂ ಮತ ಹಾಕಲು ಹಕ್ಕಿಲ್ಲ. ಇದು ಕರ್ನಾಟಕ ಮುನ್ಸಿಪಾಲಿಟೀಸ್‌ ಕಾಯ್ದೆಯ ಉಲ್ಲಂಘನೆ ಎಂದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಮಾತನಾಡಿ, ವಿಧಾನ ಪರಿಷತ್‌ ಸದಸ್ಯರಿಗೆ ನಾಚಿಕೆ ಆಗಬೇಕು. ಅವರು ಯಾವ ಮುಖ ಇಟ್ಟುಕೊಂಡು ಮತಹಾಕಲು ಬರುತ್ತಿದ್ದಾರೆ. ಇದು ಅಕ್ರಮ ಎಂದು ಗುಡುಗಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ನಾಳೆ ನಗರಸಭಾ ಚುನಾವಣೆ: ಜೆಡಿಎಸ್‌ ಸದಸ್ಯರು ನಾಪತ್ತೆ; ಆತಂಕದಲ್ಲಿ ಮುಖಂಡರು

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕೆ.ವಿ.ನಾಗರಾಜು, ಶಿವಾನಂದ್‌, ಕಿಸಾನ್‌ ಕೃಷ್ಣಪ್ಪ, ಲೀಲಾವತಿ ಶ್ರೀನಿವಾಸ್‌, ಕೃಷ್ಣಮೂರ್ತಿ ಹಾಗೂ ಇತರರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X