ಕೊಪ್ಪಳ | ಗಣೇಶ ವಿಸರ್ಜನೆ ವೇಳೆ ಸಿಡಿದ ಪಟಾಕಿ: ಕಣ್ಣು ಕಳೆದುಕೊಂಡ ಯುವಕ

Date:

Advertisements

ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡು ಕಣ್ಣು ಕಳೆದುಕೊಂಡ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ ಮಾರುತಿ ವೃತ್ತದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ಯುವಕನನ್ನು ಕಲ್ಲೇಶ್ ಸುಲೇಕಿ (26) ಎಂದು ಗುರುತಿಸಲಾಗಿದೆ. ಈತ ವಾರ್ಡ್ 1ರ ಮಾರುತಿ ನಗರದ ನಿವಾಸಿ ಎಂದು ತಿಳಿದು ಬಂದಿದೆ.

ನಿನ್ನೆ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಪಟಾಕಿ ಕಣ್ಣಿಗೆ ಸಿಡಿದು ಕಣ್ಣು ಸಂಪೂರ್ಣ ಛಿದ್ರವಾಗಿದ್ದು, ತಲೆಗೂ ಕೂಡ ತೀವ್ರ ಗಾಯವಾಗಿದೆ. ಘಟನೆ ನಡೆದ ತಕ್ಷಣವೇ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡ ಕಾರಣ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Advertisements
1001639620

ಗಣೇಶ ವಿಸರ್ಜನೆಯ ಐದನೇ ದಿನದ ಅಂಗವಾಗಿ ನಗರದಲ್ಲಿ ಎರಡು ಮೂರು ಗಣಪತಿ ಮೂರ್ತಿ ವಿಸರ್ಜನೆಯ ಮಾರುತಿ ವೃತ್ತದಲ್ಲಿ ಸೇರಿದಾಗ ಭಾರಿ ಪ್ರಮಾಣದಲ್ಲಿ ಡಿಜೆ ಸದ್ದಿಗೆ ಯುವಕರು ಕುಣಿಯುತ್ತಿದ್ದಾಗ, ಪಟಾಕಿ ಕೂಡ ಸಿಡಿಸಲಾಗುತ್ತಿತ್ತು. ಈ ವೇಳೆ ಪಟಾಕಿಯಯ ಕಣ್ಣಿಗೆ ಸಿಡಿದು ಗಂಭೀರ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ಯುವಕನು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಸ್ಥಳೀಯರಿಂದ ತಿಳಿದು ಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X