ತಮಿಳುನಾಡು | ಪ್ರಬಲ ವಿರೋಧದ ನಡುವೆ ಕಾರ್ಖಾನೆಗಳ ಮಸೂದೆ ಹಿಂಪಡೆದ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್

Date:

Advertisements
  • ಏಪ್ರಿಲ್‌ 24ರಂದು ಮಸೂದೆಗೆ ತಡೆ ನೀಡಿದ್ದ ಎಂ ಕೆ ಸ್ಟಾಲಿನ್
  • ಕಾರ್ಮಿಕರ ಕೆಲಸದ ಅವಧಿ 8ರಿಂದ 12 ತಾಸಿಗೆ ಹೆಚ್ಚಿಸುವ ಮಸೂದೆ

ಕೈಗಾರಿಕೆಗಳಲ್ಲಿ ಕಾರ್ಮಿಕರಿಗೆ ಕೆಲಸದ ಸಮಯ ಹೆಚ್ಚಿಸುವ ಕಾರ್ಖಾನೆಗಳು (ತಿದ್ದುಪಡಿ), 2023 ಮಸೂದೆಯನ್ನು ಹಿಂಪಡೆಯುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೋಮವಾರ (ಮೇ 1) ಘೋಷಿಸಿದ್ದಾರೆ.

ಕಾರ್ಮಿಕ ಸಂಘ ಹಾಗೂ ಪ್ರತಿಪಕ್ಷಗಳ ತೀವ್ರ ವಿರೋಧದಿಂದ ಸ್ಟಾಲಿನ್‌ ಈ ನಿರ್ಧಾರ ಕೈಗೊಂಡಿದ್ದಾರೆ.

ಚೆನ್ನೈನಲ್ಲಿ ಆಡಳಿತಾರೂಢ ಡಿಎಂಕೆ ಸಂಯೋಜಿತ ಕಾರ್ಮಿಕ ಪ್ರಗತಿಪರ ಒಕ್ಕೂಟ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಎಂ ಕೆ ಸ್ಟಾಲಿನ್‌ ಈ ಘೋಷಣೆ ಮಾಡಿದ್ದಾರೆ.

Advertisements

ಮಸೂದೆಯನ್ನು ಯಾವುದೇ ಹಿಂಜರಿಕೆಯಿಲ್ಲದೆ ಹಿಂಪಡೆಯಲಾಗಿದೆ. ಇದಕ್ಕೆ ಧೈರ್ಯ ಬೇಕು ಎಂದು ಸ್ಟಾಲಿನ್ ಹೇಳಿದ್ದಾರೆ. “ತಿದ್ದುಪಡಿ ಮಸೂದೆಯನ್ನು ಡಿಎಂಕೆ ಸರ್ಕಾರ ತಂದಿದ್ದರೂ ಡಿಎಂಕೆ ಮಿತ್ರ ಪಕ್ಷ ಎಲ್‌ಪಿಎಫ್‌ ಮಸೂದೆ ವಿರೋಧಿಸಿತು. ಇದನ್ನು ನಾನು ಅಭಿನಂದಿಸುತ್ತೇನೆ. ಇದು ಡಿಎಂಕೆ ಎಷ್ಟು ಪ್ರಜಾಸತ್ತಾತ್ಮಕವಾಗಿದೆ ಎಂದು ತೋರಿಸುತ್ತದೆ” ಎಂದು ಸ್ಟಾಲಿನ್‌ ಹೇಳಿದರು.

ಆಡಳಿತಾರೂಢ ಡಿಎಂಕೆ ಪಕ್ಷದ ಬೆಂಬಲಿತ ಸಂಘಟನೆಗಳು ಮತ್ತು ರಾಜಕೀಯ ಮಿತ್ರ ಪಕ್ಷಗಳು ಎಂ ಕೆ ಸ್ಟಾಲಿನ್ ಅವರ ಈ ಮಸೂದೆಯನ್ನು ವಿರೋಧಿಸಿವೆ. ಇದರಲ್ಲಿ ಕಾಂಗ್ರೆಸ್‌ ಹಾಗೂ ಎಡಪಕ್ಷಗಳೂ ಸೇರಿವೆ.

ಮೊದಲಿಗೆ ಏಪ್ರಿಲ್‌ 21ರಂದು ರಾಜ್ಯ ವಿಧಾನಸಭೆ ಮಸೂದೆ ಅಂಗೀಕರಿಸಿತ್ತು. ಇನ್ನೂ ಚರ್ಚೆಗಳು ಬಾಕಿ ಇರುವುದರಿಂದ ಮಸೂದೆಗೆ ತಡೆ ನೀಡಲಾಗಿದೆ ಎಂದು ಸ್ಟಾಲಿನ್ ಏಪ್ರಿಲ್‌ 24ರಂದು ಹೇಳಿದ್ದರು.

ಸರ್ಕಾರ ಕಾರ್ಮಿಕ ವಿರೋಧಿ ಬಿಜೆಪಿ ಬೆಂಬಲಿತ ನೀತಿ ಸುಧಾರಣೆಗಳ ಪ್ರತಿಬಿಂಬವಾಗಿದೆ ಎಂದು ಕಾರ್ಮಿಕ ಸಂಘಟನೆಗಳು ದೂರಿದ್ದವು.

ಈ ಸುದ್ದಿ ಓದಿದ್ದೀರಾ? ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಕ್ರಿಯವಾಗಿರುವ ಚೀನಾ ನೌಕಾಪಡೆ ಮೇಲೆ ನಿಗಾ

ಕಾರ್ಖಾನೆಯ ಕಾರ್ಮಿಕರ ದೈನಂದಿನ ಕೆಲಸದ ಅವಧಿಯನ್ನು 12 ಗಂಟೆವರೆಗೆ ವಿಸ್ತರಿಸುವ ಬಗ್ಗೆ ಮಸೂದೆ ಪ್ರಸ್ತಾಪಿಸುತ್ತದೆ. ವಾರದಲ್ಲಿ 4 ದಿನ ಎಂಟು ಗಂಟೆ ಬದಲಿಗೆ 12 ಗಂಟೆ ಕೆಲಸದ ಅವಧಿ ಆಯ್ಕೆ ಮಾಡಬಹುದು ಎಂದು ಮಸೂದೆ ಹೇಳುತ್ತದೆ.

ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸುವ ಎಂ ಕೆ ಸ್ಟಾಲಿನ್‌ ಸರ್ಕಾರದ ಮಸೂದೆಯನ್ನು ಅಧಿಕಾರಿಗಳು ಈ ಹಿಂದೆ ಸಮರ್ಥಿಸಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X