ಪಿಎಸ್‌ಐ ಪರೀಕ್ಷೆ ದಿನಾಂಕ | ಯಡವಟ್ಟು ಹೇಳಿಕೆ ನೀಡಿ, ತುರ್ತು ಸಭೆ ನಡೆಸುತ್ತಿರುವ‌ ಗೃಹ ಸಚಿವ ಪರಮೇಶ್ವರ್!

Date:

Advertisements

ಪಿಎಸ್‌ಐ ಮತ್ತು ಯುಪಿಎಸ್‌ಸಿ ಪರೀಕ್ಷೆಗಳು ಒಂದೇ ದಿನ ನಿಗದಿಯಾದ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಗಳು ಗೊಂದಲಕ್ಕೀಡಾಗಿದ್ದು, ಈ ನಡುವೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಪ್ಪು ಮಾಹಿತಿ ನೀಡುವ ಮೂಲಕ ಅಭ್ಯರ್ಥಿಗಳಿಗೆ ಮತ್ತಷ್ಟು ಗೊಂದಲ ಸೃಷ್ಟಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಎಂದಿನಂತೆ ಸುದ್ದಿಗಾರರು ಬಂದು ಇಂದು (ಸೆ.12) ಮೈಕ್‌ ಹಿಡಿದಾಗ ಹಿಂದೆ ಮುಂದೆ ಯೋಚಿಸದೇ “ಪಿಎಸ್‌ಐ ಮತ್ತು ಯುಪಿಎಸ್‌ಸಿ ಪರೀಕ್ಷೆ ಒಂದೇ ದಿನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮನವಿ ಮೇರೆಗೆ ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.28 ಶನಿವಾರ ಮುಂದೂಡಲಾಗಿದೆ” ಎಂದು ಹೇಳಿಕೆ ನೀಡಿಬಿಟ್ಟರು.

ಮುಂದುವರಿದು,“ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ, ಶನಿವಾರ ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ‌ ಮಾಡಿದ್ದೆ. ಪರೀಕ್ಷೆ ನಡೆಸಲು ಶಿಕ್ಷಕರು ಬೇಕಾಗುತ್ತದೆ. ಎಲ್ಲ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲವಾಗುವ ನಿಟ್ಟಿನಲ್ಲಿ ಸೆ.28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ” ಎಂದು ಪರಮೇಶ್ವರ್‌ ತಿಳಿಸಿದರು.

Advertisements

ಮಾಧ್ಯಮಗಳಲ್ಲಿ ಸಚಿವ ಪರಮೇಶ್ವರ್‌ ಹೇಳಿಕೆ ಪ್ರಕಟವಾಗುತ್ತಿದ್ದಂತೆ ಅಭ್ಯರ್ಥಿಗಳು ಮತ್ತೆ ಗೊಂದಲಕ್ಕೆ ಈಡಾಗಿದ್ದಾರೆ. ಪಿಎಸ್‌ಐ ಆಕಾಂಕ್ಷಿ ರವಿಶಂಕರ್‌ ಮಾಲಿಪಾಟೀಲ್‌ ಅವರು ಸಚಿವ ಪರಮೇಶ್ವರ್‌ ಹೇಳಿಕೆ ಗಮನಿಸಿ ಕೂಡಲೇ ಅವರು ಈ ದಿನ.ಕಾಮ್‌ ಕರೆ ಮಾಡಿ, “ಸಚಿವ ಪರಮೇಶ್ವರ್ ಅವರಿಗೆ ಯುಪಿಎಸ್‌ಸಿ ಪರೀಕ್ಷೆ ವೇಳಾಪಟ್ಟಿಯೇ ಗೊತ್ತಿಲ್ಲ ಅನ್ನಿಸುತ್ತದೆ. ಸ್ವತಃ ಪರಮೇಶ್ವರ್‌ ಘೋಷಿಸಿದ ದಿನಾಂಕದಂದೇ ಯುಪಿಎಸ್‌ಸಿ ಎರಡು ಭಾಷಾ ಪತ್ರಿಗಳಿಗೆ ಪರೀಕ್ಷೆ ನಡೆಯುತ್ತಿದೆ” ಎಂದು ಗಮನಕ್ಕೆ ತಂದರು.

“ರಾಜ್ಯದಲ್ಲಿ 60ಕ್ಕೂ ಹೆಚ್ಚು ಅಭ್ಯರ್ಥಿಗಳು ಯುಪಿಎಸ್‌ಸಿ ಪ್ರಿಲಿಮ್ಸ್‌ ಪರೀಕ್ಷೆಯಲ್ಲಿ ತೇರ್ಗಡೆಹೊಂದಿ ಮುಖ್ಯಪರೀಕ್ಷೆ ಬರೆಯುತ್ತಿದ್ದಾರೆ. ಜೊತೆಗೆ ಆ 60 ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ಕೂಡ ಕಟ್ಟಿದ್ದಾರೆ. ಶನಿವಾರದ ಯುಪಿಎಸ್‌ಸಿ ಪರೀಕ್ಷೆ ಬಹಳ ಮುಖ್ಯವಾದುದು. ಭಾಷಾ ಪರೀಕ್ಷೆಗೆ ಹಾಜರಾಗದಿದ್ದರೆ ಇಡೀ ಯುಪಿಎಸ್‌ಸಿ ಪರೀಕ್ಷೆಯಲ್ಲಿ ನಾವು ಎಷ್ಟೇ ಅಂಕಗಳಿಸಿದರೂ ಉಪಯೋಗವಿಲ್ಲ” ಎಂದು ವಿವರಿಸಿದರು.

WhatsApp Image 2024 09 12 at 5.25.41 PM

ಗೃಹ ಸಚಿವ ಹೇಳಿಕೆ ಪಡೆಯಲು ಈ ದಿನ.ಕಾಮ್‌ ಸಚಿವರನ್ನು ಸಂಪರ್ಕಿಸಿದಾಗ ಅವರ ಆಪ್ತರು ಮಾತನಾಡಿ, “ಪಿಎಸ್‌ಐ ಪರೀಕ್ಷೆ ಮುಂದೂಡಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಸಚಿವ ಮಧು ಬಂಗಾರಪ್ಪ ಅವರ ಜೊತೆ ಸಚಿವರು ಚರ್ಚಿಸಿ ಅಧಿಕೃತ ಸ್ಪಷ್ಟನೆ ನೀಡಲಿದ್ದಾರೆ. ಬೆಳಿಗ್ಗೆ ಸಚಿವರು ಹೇಳಿದ ದಿನಾಂಕದ ಬಗ್ಗೆಯೂ ಅಧಿಕಾರಿಗಳು ಸಚಿವರ ಗಮನಕ್ಕೆ ತಂದು ಚರ್ಚಿಸಿದ್ದಾರೆ. ಕೆಇಎ ಅಧಿಕಾರಿಗಳು ತಪ್ಪು ಮಾಹಿತಿ ಒದಗಿಸಿದ್ದರಿಂದ ಸಚಿವರು ಪರೀಕ್ಷಾ ದಿನಾಂಕವನ್ನು ಘೋಷಿಸಿದರು. ಈ ಬಗ್ಗೆ ತುರ್ತು ಸಭೆ ನಡೆಯುತ್ತಿದೆ. ದಿನಾಂಕ ಮತ್ತೆ ಮುಂದಕ್ಕೆ ಹೋಗಬಹುದು” ಎಂದು ತಿಳಿಸಿದರು.

“ಯುಪಿಎಸ್‌ಸಿ ಮತ್ತು 402 ಪಿಎಸ್‌ಐ ಎರಡು ಪರೀಕ್ಷೆಗಳನ್ನು ಬರೆಯುತ್ತಿರುವ ಅಭ್ಯರ್ಥಿಗಳು ಯಾರೂ ಗಾಬರಿ ಆಗಬೇಡಿ. ಗೃಹಮಂತ್ರಿಗಳಿಗೆ ಕೆಇಎ ಅಧಿಕಾರಿಗಳ ತಪ್ಪು ಮಾಹಿತಿಯನ್ನು ಒದಗಿಸಿದರ ಪರಿಣಾಮ ಗೃಹಮಂತ್ರಿಗಳು ಬೆಳಿಗ್ಗೆ ಮಾಧ್ಯಮಗಳ ಮುಂದೆ ತಪ್ಪಾದ ದಿನಾಂಕವನ್ನು ಹೇಳಿದ್ದಾರೆ. ನಾವು ಗೃಹಮಂತ್ರಿಗಳಿಗೆ ಮನವರಿಕೆ ಮಾಡಿ, ಸದ್ಯದಲ್ಲೇ ಬೇರೆ ದಿನಾಂಕವನ್ನು ನಿಗದಿಪಡಿಸಲು ಮನವಿ ಮಾಡಿದ್ದೇವೆ. ಅದಕ್ಕೆ ಒಪ್ಪಿದ ಗೃಹಮಂತ್ರಿಗಳು ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ 402 ಪರೀಕ್ಷಾ 28ನೇ ತಾರೀಕಿನ ಬದಲು ಬೇರೆ ದಿನಾಂಕವನ್ನು ಸದ್ಯದಲ್ಲೇ ನಿಗದಿಪಡಿಸುವುದಾಗಿ ಭರವಸೆ ನೀಡಿದ್ದಾರೆ” ಎಂಬ ಮಾಹಿತಿಯೊಂದು ಪಿಎಸ್‌ಐ ಆಕಾಂಕ್ಷಿಗಳ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

WhatsApp Image 2024 09 12 at 5.34.09 PM
WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X