ದಾವಣಗೆರೆ | ಸಿಎಂ ಬದಲಾವಣೆ ಪರಿಸ್ಥಿತಿ ಬಂದರೆ ನಾನೂ ಸಿಎಂ ಆಕಾಂಕ್ಷಿ: ಶಾಮನೂರು ಶಿವಶಂಕರಪ್ಪ

Date:

Advertisements

ಮುಖ್ಯಮಂತ್ರಿಯನ್ನಾಗಿ ಮಾಡುವುದು ಹೈಕಮಾಂಡಿನದು. ಸಿಎಂ ಬದಲಾವಣೆಯಂಥ ಪ್ರಸಂಗ ಎದುರಾದರೆ ನಾನೂ ಸಿಎಂ ಆಕಾಂಕ್ಷಿ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯ ಎಂಸಿಸಿ ಬಿ ಬ್ಲಾಕ್‌ನಲ್ಲಿನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಗೃಹಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರೇ ಮುಂದುವರಿಯುತ್ತಾರೆ. ಮುಡಾ ಪ್ರಕರಣ ಸಂಬಂಧ ಸಿದ್ದರಾಮಯ್ಯರ ವಿರುದ್ಧ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕಾಂಗ್ರೆಸ್ ಹೈಕಮಾಂಡ್ ಆಶೀರ್ವಾದ ಇರುವವರೆಗೂ ಸಿಎಂ ಸಿದ್ದರಾಮಯ್ಯರು ಮುಖ್ಯಮಂತ್ರಿಯಾಗಿ ಇರುತ್ತಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಶಾಸಕರು ಶಾಸಕಾಂಗ ನಾಯಕನ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಂತಿಮ ನಿರ್ಧಾರ ಹೈಕಮಾಂಡಿನದು. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ. ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವುದರಲ್ಲಿ ಪ್ರಯೋಜನವಿಲ್ಲ. ನಾನು ಹಿರಿಯನಿದ್ದು, ಸಿಎಂ ಆಗಬೇಕೆಂದು ಹೇಳಿಕೊಂಡು ಓಡಾಡಿದರೆ ಹಗುರ ಆಗ್ತಾರೆ ಅಷ್ಟೇ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹ; ದಸಂಸದಿಂದ ಬೃಹತ್ ತಮಟೆ ಚಳವಳಿ

“ರಾಜಕೀಯದಲ್ಲಿ ಜೂನಿಯರ್, ಸೀನಿಯರ್ ಎಂಬ ಪ್ರಶ್ನೆ ಬರುವುದಿಲ್ಲ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಮತ ಹಾಕಿದರೆ ಬಹುಮತ ಪಡೆದವರು ಮುಖ್ಯಮಂತ್ರಿಯಾಗುತ್ತಾರೆ. ಹಾಗಾಗಿ ನಾನೂ ಸಿಎಂ ಹುದ್ದೆ ಬಿಡುವುದಿಲ್ಲ. ನಾನೂ ಸ್ಪರ್ಧೆಯಲ್ಲಿರುತ್ತೇನೆ” ಎಂದು ಸೂಚ್ಯವಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X