ಬೀದರ್ | ಹಿರಿಯ ಸಾಹಿತಿ, ಪ್ರಾಧ್ಯಾಪಕ ಜಿ.ಬಿ.ವಿಸಾಜಿ ನಿಧನ

Date:

Advertisements

ಹಿರಿಯ ಸಾಹಿತಿ, ಕನ್ನಡ ಪ್ರಾಧ್ಯಾಪಕ ಜಿ.ಬಿ.ವಿಸಾಜಿ (82) ಗುರುವಾರ ಬೆಂಗಳೂರಿನಲ್ಲಿ ನಿಧನರಾದರು.

ಭಾಲ್ಕಿಯ ಚನ್ನಬಸವೇಶ್ವರ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಕಾವ್ಯ, ಸಂಪಾದನೆ, ವಿಮರ್ಶೆ, ಲೇಖನ ಹಾಗೂ ಶರಣ ಸಾಹಿತ್ಯದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸುಮಾರು 4 ದಶಕಗಳಿಗೂ ಅಧಿಕ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಗಡಿಭಾಗದಲ್ಲಿ ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅವರು ವಿವಿಧ ಸಂಘ-ಸಂಸ್ಥೆಗಳ ಹಾಗೂ ಸರ್ಕಾರದ ಹಲವು ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದರು.

Advertisements

ಅವರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. ನಾಳೆ (ಸೆ.13) ಮಧ್ಯಾಹ್ನ 2.30ಕ್ಕೆ ಸ್ವಗ್ರಾಮ ಭಾಲ್ಕಿಯ ರೈಲ್ವೆ ನಿಲ್ದಾಣ ಬಳಿಯ ಅವರ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಂತಾಪ :

ಸಾಹಿತಿ ಡಾ.ಜಿ.ಬಿ.ವಿಸಾಜಿ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸಂತಾಪ ಸೂಚಿಸಿದ್ದಾರೆ.

ʼಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯಿಂದ ಜಿಲ್ಲೆಯ ಸಾಹಿತ್ಯ ಲೋಕವು ಶೂನ್ಯವಾಗಿದ್ದು, ಅವರ ಸ್ಮರಣೆ ಸದಾ ಪ್ರೇರಣೆ ನೀಡುವಂತೆ ಮಾಡುತ್ತದೆ’ ಎಂದು ಸಚಿವ ಖಂಡ್ರೆ ಕಂಬನಿ ಮಿಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X