ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ʼಸಂಗನಹಾಲ ಚಲೋʼ

Date:

Advertisements

ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಪ್ರಕರಣ ಖಂಡಿಸಿ ಸೆ.17 ಮತ್ತು 18 ರಂದು ಸಮಾನ ಬದುಕಿನತ್ತ ಅರಿವಿನ ಜಾಥಾ ಮೂಲಕ ’ಸಂಗನಹಾಲ ಚಲೋʼ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಗನಹಾಲ ಚಲೋ ಸಂಚಾಲಕ ಬಸವರಾಜ ಸೂಳಿಬಾವಿ ಹೇಳಿದರು.

ಕೊಪ್ಪಳದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ʼಸಂಗನಹಾಲ ಚಲೋ ಅಂಗವಾಗಿ ಸೆ.17 ರಂದು ಕೊಪ್ಪಳ ಜಿಲ್ಲಾಡಳಿತ ಕಚೇರಿಯಿಂದ ಸಂಗನಹಾಲ ಗ್ರಾಮದವರೆಗೆ ಜಾಥಾ ಹಾಗೂ ಸಂಗನಹಾಲ ಗ್ರಾಮದಲ್ಲಿ ಸೆ.18 ರಂದು ಸೌಹಾರ್ದತೆ ಸಮಾವೇಶ ಹಮ್ಮಿಕೊಳ್ಳಲಾಗಿದೆʼ ಎಂದು ಮಾಹಿತಿ ನೀಡಿದರು.

ಕೊಪ್ಪಳ ಜಿಲ್ಲೆಯನ್ನು ದಲಿತರ ದೌರ್ಜನ್ಯ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಸರ್ಕಾರ ಜಿಲ್ಲೆಯ ದಲಿತರ ಸಮುದಾಯಗಳಿಗೆ ಸೂಕ್ತ ರಕ್ಷಣೆ ಒದಗಿಸುವ ವ್ಯವಸ್ಥೆ ಮಾಡಬೇಕು. ಸ್ವಾಲಂಬಿಗಳಾಗಿ ಬದುಕಲು ಜನರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕು. ಕಲ್ಯಾಣ ಕರ್ನಾಟಕ ಜನರ ಕಲ್ಯಾಣಕ್ಕಾಗಿ ಸರ್ಕಾರ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ಕೊಡಬೇಕುʼ ಎಂದರು.

Advertisements

ಮತ ರಾಜಕಾರಣಕ್ಕಾಗಿ ಘೋಷಿಸಿದ ಕಲ್ಯಾಣ ಕರ್ನಾಟಕ ಹೆಸರು ಹಿಂಪಡೆದು ಚಾರಿತ್ರಿಕವಾಗಿ ಸರಿಯಾಗಿರುವ ʼಹೈದರಾಬಾದ ಕರ್ನಾಟಕʼ ಹೆಸರನ್ನು ಪುನರ್ ಘೋಷಣೆಯಾಗಬೇಕು. ಹಳೆ ಹೆಸರು ಈ ಭಾಗದ ಜನರ ವಿಮೋಚನೆಯ ಹೋರಾಟದ ಜತೆಗೆ ತಳಕು ಹಾಕಿಕೊಂಡಿದೆ. ಅಸ್ಪೃಶ್ಯತೆಯ ನಿವಾರಣೆಗೆ ಶಾಶ್ವತ ಪರಿಹಾರವನ್ನು ಹುಡುಕಬೇಕಾಗಿದೆ. ದಲಿತರ ಮೇಲೆ ಹಲ್ಲೆ, ಗಲಭೆಗಳು ನಡೆದಾಗ ಹಲ್ಲೆಗೊಳಗಾದವರ ಮೇಲೆ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ನಿಲ್ಲಬೇಕು. ಈ ಹಿಂದೆ ದಾಖಲಾಗಿರುವ ಎಲ್ಲಾ ಕೌಂಟರ್ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ನಾವು ತಲ್ವಾರ್ ಹಿಡಿಯುತ್ತೇವೆ; ಪ್ರತಾಪ್ ಸಿಂಹ ಮತ್ತೊಂದು ವಿವಾದಾತ್ಮಕ ಹೇಳಿಕೆ

ಮುಖಂಡರಾದ ಅಲ್ಲಮಪ್ರಭು ಬೆಟ್ಟದೂರು, ಬಸವರಾಜ್ ಶೀಲವಂತರ್, ಮುದ್ದಣ್ಣ ಸಂಗನಹಾಲ, ಶುಕರಾಜ್ ತಾಳಿಕೇರಿ, ವೆಂಕಟೇಶ್ , ಹನುಮೇಶ್, ಸಂಜಯ್ ದಾಸ್ , ಮಹಾಂತೇಶ್ ಕೊತಬಾಳ, ಶಿವಪ್ಪ ಹಡಪದ ಸೇರಿದಂತೆ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X