ರಾಯಚೂರು | ವಿಶೇಷ ಚೇತನರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

Date:

Advertisements

ವಿಶೇಷ ಚೇತನರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಆರ್‌ಪಿಡಿ ಟಾಸ್ಕ್ ಪೋರ್ಸ್ ವತಿಯಿಂದ ರಾಯಚೂರು ಅಪರ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ಬಹುತೇಕ ಸರ್ಕಾರಿ ಕಚೇರಿಗಳಿಗೆ ಯಾವುದೇ ಮಾನದಂಡವಿಲ್ಲದೆ ಅವೈಜ್ಞಾನಿಕವಾಗಿ ರ‍್ಯಾಂಪ್‌ಗಳನ್ನು ನಿರ್ಮಾಣ ಮಾಡಲಾಗಿದ್ದು, ತೆರವುಗೊಳಿಸಿ ಮರು ನಿರ್ಮಾಣ ಮಾಡಬೇಕು ಮತ್ತು ಎಲ್ಲ ಸರ್ಕಾರಿ ಇಲಾಖೆಯಲ್ಲಿ ವೀಲ್ ಚೇರ್ ಸೌಲಭ್ಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ವಿಶೇಷ ಚೇತನರ ಹಕ್ಕುಗಳ ಕಾಯ್ದೆ 2006 ರ ಸೆಕ್ಷನ್ 72 ರ ಅಡಿಯಲ್ಲಿ ರಚನೆಯಾದ ಜಿಲ್ಲಾ ಅನುಷ್ಟಾನ ಸಮಿತಿ ಹಾಗೂ ಜಿಲ್ಲಾ ಮಟ್ಟದವಿಶೇಷ ಚೇತನರ ಕುಂದುಕೊರತೆಗಳ ಸಭೆಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು. ಪ್ರತಿ ತಾಲೂಕುಗಳಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ವಿಶೇಷ ಚೇತನರ ಕುಂದುಕೊರತೆಗಳ ಸಭೆಗಳನ್ನು ಹಮ್ಮಿಕೊಳ್ಳಲು ಆದೇಶ ನೀಡಬೇಕೆಂದು ತಿಳಿಸಿದರು.

Advertisements

ಜಿಲ್ಲೆಯ ಎಲ್ಲ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳ ಸ್ವಂತ ನಿಧಿ, ಎಸ್. ಎಫ್. ಸಿ, ಅನುದಾನ ಹಾಗೂ 2002-03ನೇ ಸಾಲಿನಲ್ಲಿ ಬಿಡುಗಡೆಯಾದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4 ರ ಅಡಿ ಮಂಜೂರಾದ ಅನುದಾನಗಳಲ್ಲಿ ವಿಶೇಷ ಚೇತನ ವ್ಯಕ್ತಿಗಳಿಗೆ ಮೀಸಲಿರುವ ಶೇ.5 ರಷ್ಟರ ಅನುದಾನವನ್ನು 2024-25 ನೇ ಸಾಲಿನ ಒಳಗಾಗಿ ಸಂಪೂರ್ಣ ಬಳಕೆಯಾಗಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಉಡುಪಿ | ಲಂಡನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದ ಆರ್ ಮನೋಹರ್ ಅಭಿವೃದ್ಧಿಪಡಿಸಿದ ಬೈನಾಕ್ಯುಲರ್

ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಗಳಿಗೆ ನಿಗದಿಪಡಿಸಿರುವ ಹಾಗೂ ಸ್ವಂತ ಸಂಪನ್ಮೂಲಗಳಿಂದ ಬರುವ ಅನುದಾನ ಸೇರಿಸಿ ಒಟ್ಟು ಅನುದಾನದಲ್ಲಿ ಶೇ. 5 ರಷ್ಟು ಅನುದಾನ ವನ್ನು ವಿಶೇಷ ಚೇತನರ ಸರ್ವತೋಮುಖ ಅಭಿವೃದ್ಧಿಗಾಗಿ ಬಳಕೆ ಮತ್ತು ವಿವಿಧ ಇಲಾಖೆಗಳ ಹಾಗೂ ಇಲಾಖೇತರರ ಸಮನ್ವಯತೆಯಿಂದ ವಿಶೇಷ ಚೇತನರ ಸಮಗ್ರ ಅಭಿವೃದ್ಧಿಗಾಗಿ ಹೊರಡಿಸಿದ ಸುತ್ತೋಲೆ ಅನುಷ್ಠಾನ ಗೊಳಿಸಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂಡಿ ಜಾಫರ್ ಮಾನ್ವಿ, ಪ್ರಧಾನ ಕಾರ್ಯದರ್ಶಿ ಸುರೇಶ ಭಂಡಾರಿ ಮುದಗಲ್, ಮಹಮದ್ ಅನ್ವರ್, ಅಸ್ಕಿಹಾಳ ನಾಗರಾಜ, ಅಜಮಲ್, ಹನುಮೇಶ ಕಾತರಕಿ, ರಾಯಪ್ಪ ಮಸ್ಕಿ, ಗುಂಡಪ್ಪಗೌಡ ಸಿರವಾರ ಸೇರಿದಂತೆ ಅನೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X