ಬೀದರ್‌ | ಸತತ ಮಳೆಗೆ ಬೆಳೆ ಹಾನಿ; ಪರಿಹಾರಕ್ಕೆ ರೈತ ಸಂಘ ಒತ್ತಾಯ

Date:

Advertisements

ಜಿಲ್ಲೆಯಲ್ಲಿ ಕಳೆದ ಎರಡು ವಾರ ನಿರಂತರವಾಗಿ ಸುರಿದ ಭಾರಿ ಮಳೆಗೆ ರೈತರು ಬೆಳೆದ ಉದ್ದು, ಹೆಸರು, ತೊಗರಿ ಹಾಗೂ ತರಕಾರಿ ಬೆಳೆಗಳು ಜಲಾವೃತಗೊಂಡು ಸಂಪೂರ್ಣ ನಾಶವಾಗಿವೆ. ಕೂಡಲೇ ಸರ್ಕಾರ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ʼಜಿಲ್ಲೆಯ ಮಾರುಕಟ್ಟೆಯಲ್ಲಿ ಮುಂಗಾರಿನ ಬೆಳೆಗಳ ದರ ಕುಸಿತವಾಗಿದೆ. ಹೀಗಾಗಿ ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯದಿದ್ದರೆ ರೈತರಿಗೆ ಅನ್ಯಾಯವಾಗುತ್ತದೆ. ಈಗಾಗಲೇ ತಿಂಗಳಿಂದ ರಾಶಿ ಮಾಡಿದ ರೈತರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಜಿಲ್ಲಾಡಳಿತ ಕಾಟಾಚಾರಕ್ಕೆ ಎಂಬಂತೆ ಓರ್ವ ರೈತರಿಂದ 10 ಕ್ವಿಂಟಲ್ ಕಾಳು ಖರೀದಿ ಮಾಡುತ್ತೇವೆಂದು ಹೇಳಿತ್ತು. ಆದರೆ, ಇಲ್ಲಿಯವರೆಗೆ ಖರೀದಿ ಕೇಂದ್ರ ಪ್ರಾರಂಭ ಮಾಡಿಲ್ಲʼ ಎಂದು ದೂರಿದರು.

Advertisements

ʼಈ ಹಿಂದೆ ಒಬ್ಬ ರೈತರಿಂದ 5 ಎಕರೆವರೆಗೆ 20 ಕ್ವಿಂಟಲ್ ಖರೀದಿ ಮಾಡುತ್ತಿತ್ತು, ಅದೇ ರೀತಿ ಎಕರೆಗೆ 20 ಕ್ವಿಂಟಲ್ ಖರೀದಿ ಮಾಡಬೇಕು. ಬೆಳೆ ವಿಮೆ ಕಟ್ಟಿದ ರೈತರಿಗೆ ವಿಮಾ ಹಣ ಪಾವತಿಸಬೇಕು. ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ಕೆಲ ರೈತರಿಗೆ ಇನ್ನು ಕಬ್ಬಿನ ಬಾಕಿ ಹಣ ಪಾವತಿಸಲಿಲ್ಲ. ಅಂತಹ ಕಾರ್ಖಾನೆಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು, ಬಾಕಿ ಉಳಿದ ರೈತರ ಹಣವನ್ನು ಕೂಡಲೇ ಬಡ್ಡಿ ಸಹಿತ ಪಾವತಿಸಬೇಕು ʼಎಂದು ಆಗ್ರಹಿಸಿದರು.

ಸರ್ಕಾರ ಜಿಲ್ಲೆಯ ರೈತರ ಸಮಸ್ಯೆಗಳಿಗೆ ಶೀಘ್ರದಲ್ಲಿ ಸ್ಪಂದಿಸಿ ಬಗೆಹರಿಸಬೇಕು. ಇಲ್ಲವಾದರೆ ರೈತರು ಉಗ್ರ ಸ್ವರೂಪದ ಹೋರಾಟ ಮಾಡಬೇಕಾಗುತ್ತದೆ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಹಿರಿಯ ಸಾಹಿತಿ, ಪ್ರಾಧ್ಯಾಪಕ ಜಿ.ಬಿ.ವಿಸಾಜಿ ನಿಧನ

ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳಾದ ವಿಠಲರಾವ ಮೇತ್ರೆ, ನಾಗಶೆಟ್ಟೆಪ್ಪ ಲಂಜವಾಡೆ, ಶಿವಕಾಂತ ಖಂಡೆ, ಬಸವರಾಜ ಅಷ್ಟೂರ್, ವಿಠಲರೆಡ್ಡಿ ಆಣದೂರ, ಕಾಶೆಪ್ಪಾ ಹುಡಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X