ಮೀರತ್‌ ಹೆಲಿಕಾಪ್ಟರ್ ‘ಕಳ್ಳತನ’ ಆರೋಪ: ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

Date:

Advertisements

ಉತ್ತರ ಪ್ರದೇಶದ ಮೀರತ್‌ನಲ್ಲಿ ಹೆಲಿಕಾಪ್ಟರ್ ‘ಕಳ್ಳತನ’ವಾಗಿದೆ ಎಂಬ ಆರೋಪವು ರಾಜಕೀಯ ಬಿರುಗಾಳಿಯನ್ನು ಸೃಷ್ಟಿಸಿದೆ. ಈ ವಿಚಾರದಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಸ್‌ಎಆರ್ ಏವಿಯೇಷನ್ ​​ಸರ್ವಿಸ್ ಪ್ರೈವೇಟ್ ಲಿಮಿಟೆಡ್‌ನ ಪೈಲಟ್ ರವೀಂದ್ರ ಸಿಂಗ್ ತನ್ನ ಸಂಸ್ಥೆಯ ಹೆಲಿಕಾಪ್ಟರ್ ಕಳ್ಳತನವಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೇ ತಿಂಗಳಲ್ಲಿ ಕೆಲವರು ಟ್ರಕ್‌ನಲ್ಲಿ ಹೆಲಿಕಾಪ್ಟರ್ ಅನ್ನು ವಿವಿಧ ಭಾಗಗಳಾಗಿ ವಿಂಗಡಿಸಿ ತೆಗೆದುಕೊಂಡು ಹೋಗಿದ್ದಾರೆ ಎಂದು ಸಿಂಗ್ ದೂರಿದ್ದಾರೆ. ಹಾಗೆಯೇ ತನ್ನ ಮೇಲೆ ಈ ಆರೋಪಿಗಳು ಹಲ್ಲೆ ಮಾಡಿರುವುದಾಗಿಯೂ ತಿಳಿಸಿದ್ದಾರೆ.

ಈ ಪ್ರಕರಣ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್ ಯಾದವ್, “ಇದುವರೆಗೂ ಉತ್ತರ ಪ್ರದೇಶದ ಕ್ರಿಮಿನಲ್‌ಗಳು ಕೊಲೆ, ದರೋಡೆ, ಡಕಾಯಿತಿ ಮತ್ತು ಅತ್ಯಾಚಾರದ ಮೂಲಕ ಬಿಜೆಪಿಯ ಕಾನೂನು ಸುವ್ಯವಸ್ಥೆಯನ್ನು ಪುಡಿ ಪುಡಿ ಮಾಡುತ್ತಿದ್ದರು. ಈಗ ಮೀರತ್‌ನಲ್ಲಿ ಹೆಲಿಕಾಪ್ಟರ್ ಅನ್ನು ಟ್ರಕ್‌ನಲ್ಲಿ ತೆಗೆದುಕೊಂಡು ಹೋದ ಸುದ್ದಿ ಬಂದಿದೆ. ಇದು ವಿಮಾನ ನಿಲ್ದಾಣದ ಭದ್ರತೆಯ ಪ್ರಶ್ನೆಯೂ ಹೌದು. ಅಲ್ಲಿನ ಸೆಕ್ಯುರಿಟಿ ರಜೆಯಲ್ಲಿದ್ದರಾ” ಎಂದು ಪ್ರಶ್ನಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಭಾರೀ ಮಳೆ | ಪುಣೆಯಲ್ಲಿ ನಾಲ್ವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ

ಇನ್ನು ಪೊಲೀಸರು ಶೀಘ್ರವಾಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಹೆಲಿಕಾಪ್ಟರ್ ಅನ್ನು ಎಸ್‌ಎಆರ್ ಏವಿಯೇಷನ್ ​​ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಮತ್ತೊಂದು ಸಂಸ್ಥೆಗೆ ಮಾರಾಟ ಮಾಡಿದೆ. ಈ ವಿಷಯ ತಿಳಿದಿರದ ಕಾರಣ ಕಳ್ಳತನದ ಬಗ್ಗೆ ಸಿಂಗ್ ದೂರು ನೀಡಿದ್ದಾರೆ ಎಂದು ಸರ್ಕಲ್ ಅಧಿಕಾರಿ ಅಂತರಿಕ್ಷ್ ಜೈನ್ ಹೇಳಿಕೊಂಡಿದ್ದಾರೆ.

ಇದು ಕಳ್ಳತನವಲ್ಲ, ಇಬ್ಬರು ಪಾಲುದಾರರ ನಡುವಿನ ವಿವಾದವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಹಾಗೆಯೇ ತನ್ನ ಮೇಲೆ ಹಲ್ಲೆ ನಡೆದಿದೆ ಎಂಬ ಪೈಲಟ್ ರವೀಂದ್ರ ಸಿಂಗ್ ಆರೋಪ ಸಾಬೀತಾಗಿಲ್ಲ ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X