ಶಿವಮೊಗ್ಗ | ಕೌಟುಂಬಿಕ ಕಲಹಕ್ಕೆ ಮಹಿಳೆಗೆ ವಿಷ ಕುಡಿಸಿ ಕೊಲೆಗೆ ಯತ್ನ; ನಾಲ್ವರ ಬಂಧನ

Date:

Advertisements

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಹಿಳೆಯೊಬ್ಬರಿಗೆ ವಿಷ ಕುಡಿಸಿ ಕೊಲ್ಲಲು ಯತ್ನಿಸಿರುವ ಘಟನೆ ನಡೆದಿದ್ದು, ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭದ್ರಾವತಿ ನಗರದ ದಾನವಾಡಿಯ ಜಯಲಕ್ಷ್ಮಿ ಮತ್ತು ಚರಣ್ ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ಒಂದು ಹೆಣ್ಣುಮಗುವಿದೆ. ಇದಾದ ಬಳಿಕ ಗಂಡನ ಮನೆಯವರು ಕಿರುಕುಳ ನೀಡಿರುವುದಾಗಿ ಆರೋಪ ವ್ಯಕ್ತವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಆನಂದಪುರ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಅವರನ್ನು ಸಂಪರ್ಕಿಸಿದಾಗ ಮಾತನಾಡಿ, “ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿರುವ ದಂಪತಿಗೆ ಒಂದು ಹೆಣ್ಣುಮಗುವಿದೆ. ಆದರೆ, ಸಂತ್ರಸ್ತ ಮಹಿಳೆಗೆ ಅವರ ಕುಟುದಲ್ಲಿ ಕಿರುಕುಳ ನೀಡುತ್ತಿದ್ದುದು ಬೆಳಕಿಗೆ ಬಂದಿದೆ. ಬಳಿಕ ಆಕೆಯ ಗಂಡ ಮತ್ತು ಅತ್ತೆ ಸೇರಿಕೊಂಡು ಆಕೆಗೆ ವಿಷ ಕುಡಿಸಿ ಕೊಲ್ಲಲು ಯತ್ನಿಸಿದ್ದಾರೆ” ಎಂದು ತಿಳಿಸಿದರು.‌

Advertisements

“ಸೊಸೆಗೆ ವಿಷ ಕುಡಿಸಿದ ಬಳಿಕ ಮಾವನೂ ಕೂಡ ಫಿನಾಯಿಲ್‌ ಕುಡಿದಿದ್ದಾರೆ. ಇಬ್ಬರನ್ನೂ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಚೇತರಿಕೆ ಕಾಣತೊಡಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ʼಸಂಗನಹಾಲ ಚಲೋʼ

“ಘಟನೆಗೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯ ಅತ್ತೆ ಮತ್ತು ಗಂಡ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚರಣ್, ಗಾಯಿತ್ರಿ , ಪ್ರಸನ್ನ, ಗೌತಮ್ ಬಂಧಿತ ಆರೋಪಿಗಳು” ಎಂದು ಮಾಹಿತಿ ನೀಡಿದರು.

ಘಟನೆ ಹಿನ್ನೆಲೆ

ಭದ್ರಾವತಿಯ ದಾನವಾಡಿಯಲ್ಲಿದ್ದ ಜಯಲಕ್ಷ್ಮಿ ಅವರು ಕೌಟುಂಬಿಕ ಕಲಹವನ್ನು ತಿಳಿಗೊಳಿಸಿರೆಂದು ಗಂಡನ ಊರಾದ ಆನಂದಪುರ ಬಳಿಯ ದಾಸನಕೊಪ್ಪದ ದೇವಸ್ಥಾನಕ್ಕೆ ಮನವಿ ಮಾಡಿದ್ದರು. ನಿಗದಿಯಾದ ದಿನದಂದು ಮಧ್ಯಾಹ್ನ 2 ಗಂಟೆಗೆ ಕಲಹದ ಕುರಿತು ಇತ್ಯರ್ಥಗೊಳಿಸಲಾಗಿತ್ತು. ಆದರೆ ಮಾವ ಸುಧಾಕರ್ ಹೋಗಿ ಗಲಾಟೆ ಮಾಡಿದ ಪರಿಣಾಮ, ಸೊಸೆ ಜಯಲಕ್ಷ್ಮಿಯವರಿಗೆ ವಿಷ ಕುಡಿಸಿದ್ದು, ಇದೇ ವೇಳೆ ಮಾವನೂ ಕೂಡಾ ಫಿನಾಯಿಲ್ ಸೇವಿಸಿರುವುದಾಗಿ ಹೇಳಲಾಗುತ್ತಿದೆ.

ವರದಿ: ಅಮಿತ್ ಆರ್, ಆನಂದಪುರ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X