ಶಿವಮೊಗ್ಗ | ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವುದು ಅವೈಜ್ಞಾನಿಕ: ರೈತ ಸಂಘ

Date:

Advertisements

ಬೆಂಗಳೂರಿಗೆ ಶರಾವತಿ ನದಿ ನೀರನ್ನು ಹರಿಸುವ ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ₹800 ಕೋಟಿ ವೆಚ್ಚದಲ್ಲಿ ಬಹುದೊಡ್ಡ ಕಾಮಕಾರಿ ಮಾಡಲು ಹೊರಟಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದ ಮಲೆನಾಡಿನ ಜನರಿಗೆ ವಂಚನೆಯಾಗುತ್ತದೆ ಎಂದು ಸಾಗರ ತಾಲೂಕಿನ ರೈತ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಪವಿಭಾಗೀಯ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ ರೈತರು ಆಗ್ರಹ ವ್ಯಕ್ತಪಡಿಸಿದರು.

“ಶರಾವತಿ ನದಿ ನೀರನ್ನು 800 ಕಿಲೋಮೀಟರ್ ದೂರವಿರುವ ಬೆಂಗಳೂರಿಗೆ ಹರಿಸುವುದರಿಂದ ಇಲ್ಲಿರುವ ಪರಿಸರದ ಜೀವ ಜಂತುಗಳು ನಾಶವಾಗುತ್ತವೆ. ಕಾಮಗಾರಿ ಮಾಡುವ ಸಂದರ್ಭದಲ್ಲಿ ಭೂಮಿಯನ್ನು ಯಂತ್ರಗಳಿಂದ ಅಗೆಯುತ್ತಾರೆ. ಇದರಿಂದ ಕೇರಳದಲ್ಲಿ ಉಂಟಾದ ಅನಾಹುತದಂತೆ ಇಲ್ಲಿಯೂ ಗುಡ್ಡ ಕೊರೆತ ಉಂಟಾಗುವ ಸಾಧ್ಯತೆ ಇದೆ. ಈ ಹಿಂದೆ 1961ರಿಂದ 64ರವರೆಗೂ ಹೋರಾಟ ನಡೆಸಿದಂತಹ ರೈತರಿಗೆ, ನಿರಾಶ್ರಿತರಿಗೆ ಭೂಮಿ ಕೊಡುವಲ್ಲಿ ಸರ್ಕಾರ ವಂಚನೆ ಮಾಡಿದೆ” ಎಂದು ರೈತರು ಆರೋಪಿಸಿದರು.

Advertisements

“ಆ ಯೋಜನೆಯ ಫಲಾನುಭವಿಗಳು ಇನ್ನೂ ನೆರಳುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಪುನಃ ಈ ಯೋಜನೆ ಮಾಡುವುದರಿಂದ ಮಲೆನಾಡು ಪ್ರದೇಶದಲ್ಲಿ ಭೂಕುಸಿತಗಳಾಗುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರ ನೀರು ಹರಿಸುವ ಯೋಜನೆಯನ್ನು ಹಿಂಪಡೆದು ಮಲೆನಾಡಿನ ಜನಕ್ಕೆ ನ್ಯಾಯ ಒದಗಿಸಬೇಕು. ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಯೋಜನೆಯನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೌಟುಂಬಿ ಕಲಹಕ್ಕೆ ಮಹಿಳೆಗೆ ವಿಷ ಕುಡಿಸಿ ಕೊಲೆಗೆ ಯತ್ನ; ನಾಲ್ವರ ಬಂಧನ

ಈ ಸಂದರ್ಭದಲ್ಲಿ ಮಾಜಿ ಮಂತ್ರಿ, ಶಾಸಕ ಎಚ್ ಹಾಲಪ್ಪ, ಮಾಜಿ ಎಂಎಲ್‌ಸಿ ಪ್ರಪುಲ್ಲಾ ಮಧುಕರ್ ಹಾಗೂ ಅಖಿಲೇಶ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ದೇವೇಂದ್ರಪ್ಪ, ನಗರಸಭಾ ಸದಸ್ಯ ಗಣೇಶ್ ಪ್ರಸಾದ್, ರೈತ ಸಂಘದ ಅಧ್ಯಕ್ಷ ದಿನೇಶ್ ಸಿರಿವಾಳ ಸೇರಿದಂತೆ ಹಲವಾರು ಪ್ರಗತಿಪರ ಚಿಂತಕರು‌, ರೈತ ಮುಖಂಡರು, ಮಹಿಳೆಯರು, ಪತ್ರಕರ್ತರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಲೂಟಿ ಮಾಡುವ ಯೋಜನೆ ಇದು ಇವರಿಗೆ 400 k.m, ದೂರದ ಶರಾವತಿ ನೀರೇ ಬೇಕೇ, ಬಂಗಾರಪ್ಪ ಶಿವಮೊಗ್ಗದಲ್ಲಿ ಮಾಡಿದ ತುಂಗಾ ಎಡದಂಡೆ ಯೋಜನೆ ನೋಡಿದಿರಲ್ಲ ಹಾಗೆಯೇ ಇದು ಏನೇ ಆಗಲಿ ಬಿಡಬೇಡಿ ಹಣ ಪೋಲಗಲು ಉದ್ದಾರದ ಹೆಸರಲ್ಲಿ ಹಣ ಮಾಡುವ ಯೋಜನೆ

  2. ಲೂಟಿ ಮಾಡುವ ಯೋಜನೆ ಇದು ಇವರಿಗೆ 400 k.m, ದೂರದ ಶರಾವತಿ ನೀರೇ ಬೇಕೇ, ಬಂಗಾರಪ್ಪ ಶಿವಮೊಗ್ಗದಲ್ಲಿ ಮಾಡಿದ ತುಂಗಾ ಎಡದಂಡೆ ಯೋಜನೆ ನೋಡಿದಿರಲ್ಲ ಹಾಗೆಯೇ ಇದು ಏನೇ ಆಗಲಿ ಬಿಡಬೇಡಿ ಹಣ ಪೋಲಗಲು ಉದ್ದಾರದ ಹೆಸರಲ್ಲಿ ಹಣ ಮಾಡುವ ಯೋಜನೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X