ಗದಗ | ಸೀತಾರಾಮ್ ಯೆಚೂರಿ ನಿಧನ; ಎಸ್‌ಎಫ್‌ಐನಿಂದ ಸಂತಾಪ

Date:

Advertisements

ದೇಶದ ನಾಡಿಮಿಡಿತ ಅರಿತ ಸಂಸದೀಯ ಪಟು, ಆರ್ಥಿಕ ಸಲಹೆಗಾರ ಸೀತಾರಾಮ್ ಯೆಚೂರಿ ಅವರು 1975ರಲ್ಲಿ ಜೆಎಸನ್‌ಯು ವಿವಿಯಲ್ಲಿ ಅಧ್ಯಯನ ಮಾಡುವ ಸಮಯದಲ್ಲಿ ಅಂದಿನ ಪ್ರಧಾನಮಂತ್ರಿಯಾಗಿದ್ದ ಇಂದಿರಾಗಾಂಧಿ ವಿರುದ್ಧ ಹೋರಾಟ ಮಾಡಿ ಜೈಲಿಗೆ ಸೇರಿದ್ದರು ಮತ್ತು ಉಪಕುಲಪತಿಯ ರಾಜೀನಾಮೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು ಎಂದು ಎಸ್‌ಎಫ್‌ಐ ಗದಗ ಜಿಲ್ಲಾ ಮುಖಂಡ ಚಂದ್ರು ರಾಠೋಡ ಸ್ಮರಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ಕಚೇರಿಯಲ್ಲಿ ತಾಲೂಕು ಸಮಿತಿಯಿಂದ ನೇತಾರ ಸೀತಾರಾಮ್ ಯೆಚೂರಿ ಅವರಿಗೆ ಗೌರವ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.

“ಎಸ್‌ಎಫ್‌ಐ ಅಖಿಲ ಭಾರತ ಮಾಜಿ ಅಧ್ಯಕ್ಷ ಕಾಮ್ರೇಡ್ ಸೀತಾರಾಮ್ ಯೆಚೂರಿಯವರು ನಮನ್ನಗಲಿದ್ದಾರೆ. ವಿದ್ಯಾರ್ಥಿ ಯುವಜನರು, ರೈತರು, ಕಾರ್ಮಿಕರಪರ ಯಶಸ್ವಿ ಸಂಘರ್ಷಾತ್ಮಕ ಹೋರಾಟಗಳನ್ನು ಕಟ್ಟಿ ಪಾರ್ಲಿಮೆಂಟ್ ಸದಸ್ಯರಾಗಿ ಎರಡುಬಾರಿ ಅತ್ಯುತ್ತಮ ಸಂಸದೀಯ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು” ಎಂದು ಹೇಳಿದರು.

Advertisements

“ಯೆಚೂರಿಯವರು ಸಂಸದೀಯ ಅನೇಕ ಸಮಿತಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಆರ್ಥಿಕ ಸಲಹೆ ನೀಡಿದ್ದಾರೆ. ತಮ್ಮ ಜೀವನದ ಕೊನೆವರೆಗೂ ದುಡಿಯುವ ಜನರ ಪರವಾಗಿ, ಕೋಮುವಾದಿ ಫ್ಯಾಸಿಸ್ಟನ್ನು ಹಿಮ್ಮೆಟ್ಟಿಸಲು ಶ್ರಮಿಸಿದ ಕಾಮ್ರೇಡ್ ಸೀತಾರಾಮ್ ಯೆಚೂರಿ ಅವರ ಅಗಲಿಕೆ ದೇಶದ ದುಡಿಯುವ ಜನರ ಚಳವಳಿಗೆ ತುಂಬಲಾರದ ನಷ್ಟವಾಗಿದೆ” ಎಂದು ಕಣ್ಣೀರು ಮಿಡಿದರು.

“ದೇಶದ ಜನರ ನಾಡಿಮಿಡಿತ, ಆರ್ಥಿಕತೆ, ಸಾಮಾಜಿಕತೆ, ರಾಜಕೀಯ, ಸಾಂಸ್ಕೃತಿಕತೆ ಬಗ್ಗೆ ಆಳವಾದ ಅಧ್ಯಯನ ಮಾಡಿದ್ದರು. ಸ್ಪಷ್ಟತೆಯ ನಿಲವು ಹೊಂದಿದ್ದರು, ಸಲಹೆ ನೀಡುತ್ತಿದ್ದರು. ಈಗ ಅವರ ಅಗಲಿಕೆ ದೇಶದ ಪ್ರಜಾಸತ್ತಾತ್ಮಕ ಶಕ್ತಿಗಳಿಗೆ ತುಂಬಲಾರದ ನಷ್ಟ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವುದು ಅವೈಜ್ಞಾನಿಕ: ರೈತ ಸಂಘ

ಈ ಸಂದರ್ಭದಲ್ಲಿ ಎಸ್‌ಎಫ್‌ಐನ ಪದಾಧಿಕಾರಿಗಳಾದ ಅನಿಲ್ ರಾಠೋಡ, ಸುದೀಪ್ ಹುಬ್ಬಳ್ಳಿ, ಸಿಪಿಎಂ ಪಕ್ಷದ ನಗರ ಸಮಿತಿ ಕಾರ್ಯದರ್ಶಿ ಮೆಹಬೂಬ್ ಹವಾಲ್ದಾರ್‌, ಕಾರ್ಮಿಕ ಮುಖಂಡರಾದ ಕನಕರಾಯ ಹಾದಿಮನಿ, ಪ್ರಾಕಾಶ ಹೊಸಮನಿ, ಶರಣಪ್ಪ ಗೋಸಾವಿ, ಫೀರೋಜಿ ರಾಮ್‌ಜೀ, ಕಳಕಪ್ಪ ಅವಧೂತ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X