ವಿಜಯಪುರ | ಬೆಳೆಹಾನಿ ಪರಿಹಾರಕ್ಕೆ ರೈತಸಂಘ ಆಗ್ರಹ

Date:

Advertisements

ಇತ್ತೀಚೆಗೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಡೋಣಿ ನದಿಗಳ ಪ್ರವಾಹದಿಂದಾಗಿ ಬೆಳೆಹಾನಿಯಾಗಿದ್ದು, ಸರ್ಕಾರ ಹಾಗೂ ವಿಮಾ ಕಂಪನಿಗಳು ಕೂಡಲೇ ಪರಿಹಾರ ನೀಡಬೇಕೆಂದು ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು ಆಗ್ರಹಿಸಿದರು.

ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರಿಗೆ ಮನವಿ ಸಲ್ಲಿಸಿ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಬೆಳೆಗಳಿಗೆ ಕೃಷಿ ಇಲಾಖೆಯಿಂದ ಸಮೀಕ್ಷೆ ನಡೆಸಿ ಹಾನಿಯಾಗಿರುವ ಬೆಳೆಗಳಿಗೆ ಕೂಡಲೇ ಪರಿಹಾರ ನೀಡಬೇಕು. ಕಳೆದ ಎರಡ್ಮೂರು ವರ್ಷಗಳಲ್ಲಿ ಬರಗಾಲದಿಂದ ನಷ್ಟ ಅನುಭವಿಸಿದ್ದ ರೈತರು, ಈ ವರ್ಷ ಉತ್ತಮ ನಿರೀಕ್ಷೆಯಲ್ಲಿದ್ದರು. ಆದರೆ ಬಿತ್ತಿದ ಬೆಳೆಗಳು ಮಳೆಯ ರಭಸಕ್ಕೆ ನೆಲಕಚ್ಚಿವೆ. ಕೂಡಲೇ ಸರ್ಕಾರ ಜಂಟಿ ಸಮೀಕ್ಷೆ ಮಾಡಿ ಅರ್ಹ ರೈತರಿಗೆ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

“ಜಿಲ್ಲೆಯ 13 ತಾಲೂಕುಗಳಲ್ಲಿ ಸಮೀಕ್ಷೆ ಮಾಡಲು ನಿರ್ದೇಶಿಸಬೇಕು. ಕೆಲವೊಂದು ತಾಲೂಕಗಳಲ್ಲಿ ಸಮೀಕ್ಷೆ ಮಾಡಲು ಆದೇಶ ಬಂದಿಲ್ಲವೆಂದು ರೈತರಿಗೆ ಮರಳಿ ಕಳಿಸುತ್ತಿದ್ದಾರೆ. ವಿಮೆ ತುಂಬಿದ ಎಲ್ಲ ರೈತರಿಗೂ ಸರಿಯಾದ ನ್ಯಾಯ ಸಿಗಬೇಕು. ಈ ಕುರಿತು ಜಾಗೃತಿ ಮೂಡಿಸುವುದರ ಜತೆಗೆ ಇರುವ ದಾಖಲಾತಿಗಳನ್ನು ಇಲಾಖೆಗೆ ನೀಡುವಂತೆ ತಿಳಿಸಬೇಕು” ಎಂದರು.

Advertisements

“ಕಳೆದ ವರ್ಷ ವಿಮೆಯಲ್ಲಿ ಭಾರೀ ಪ್ರಮಾಣದ ಅನ್ಯಾಯವಾಗಿರುವುದಾಗಿ ಹೋರಾಟ ಮಾಡಲಾಗಿದೆ. ಈ ವರ್ಷ ಹಾಗಾಗಬಾರದು. ರೈತ ದೇಶದ ಸಂಪತ್ತು, ರೈತರಿಗೆ ಯಾವುದೇ ಕಾರಣಕ್ಕೂ ಮೋಸವಾಗಬಾರದು. ಸಾಧ್ಯವಿರುವ ಎಲ್ಲ ಮೂಲಗಳಿಂದ ರೈತರಿಗೆ ಬೆಂಬಲ ಹಾಗೂ ಪ್ರೋತ್ಸಾಹ ನೀಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಸೀತಾರಾಮ್ ಯೆಚೂರಿ ನಿಧನ; ಎಸ್‌ಎಫ್‌ಐನಿಂದ ಸಂತಾಪ

ಈ ಸಂದರ್ಭದಲ್ಲಿ ರಾಮನಗೌಡ ಪಾಟೀಲ, ಮಮದಾಪುರ, ತಾಲೂಕು ಅಧ್ಯಕ್ಷ ಮಹಾದೇವಪ್ಪ ತೇಲಿ, ನಗರ ಘಟಕದ ಅಧ್ಯಕ್ಷ ಸಂಗಪ್ಪ ಟಕ್ಕೆ, ಶಂಕರ ವಾಪ, ಲಾಯಪ್ಪ ನಾಫೆ, ಸಚಿನ ಬಿರಾದಾರ ಇದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X