ಧಾರವಾಡ | ಪಾರದರ್ಶಕ ಬೆಳೆವಿಮೆ ಪರಿಹಾರಕ್ಕೆ ಚಿಂತನೆ: ಸಚಿವ ಸಂತೋಷ್ ಲಾಡ್

Date:

Advertisements

ರೈತರು ಬೆಳೆದಿದ್ದ ಬೆಳೆಗೆ ಹಾನಿ ಉಂಟಾದಲ್ಲಿ ಸರಕಾರಿ ವಿಮಾ ಕಂಪನಿಗಳಿಂದಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಒಂದರೆಡು ದಿನಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.

ಪ್ರಸಕ್ತ 2024 ನೇ ಸಾಲಿನ ಬೆಳೆವಿಮೆ ಕುರಿತಂತೆ ಜಿಲ್ಲೆಯ ವಿವಿಧ ಭಾಗಗಳ ರೈತ ಮುಖಂಡರ ಜೊತೆ ಧಾರವಾಡ ಜಿಲ್ಲಾಧಿಕಾರಿ ಸಭಾಭವನದಲ್ಲಿ ಸಭೆ ನಡೆಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾತನಾಡಿ, ಬೆಳೆ ಕಟಾವು ಮಾದರಿಗಳನ್ನು 2-3 ಪಟ್ಟು ಹೆಚ್ಚಿಸುವಲ್ಲಿ ಕ್ರಮಕೈಗೊಳ್ಳಲು ಸರಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಲಾಭದ ದೃಷ್ಟಿಯಿಂದ ಅಸ್ತಿತ್ವದಲ್ಲಿರುವ ವಿಮಾ ಕಂಪನಿಗಳು ರೈತರ ಹಿತದೃಷ್ಟಿ ಕಾಯದೇ ಕೇವಲ ಲಾಭದತ್ತ ಕಾರ್ಯ ನಿರ್ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ರೈತರಿಗೆ ಅನ್ಯಾಯವಾಗದಂತೆ ವಿಮಾ ಕಂಪನಿಗಳಲ್ಲಿ ಬದಲಾವಣೆ ಬರಬೇಕಿದೆ. ರೈತರು ಸಹ ಇದಕ್ಕೆ ಪೂರಕವಾಗಿ ಒತ್ತಾಯ ಹಾಕಬೇಕು ಎಂದರು.

Advertisements

ಬೆಳೆಹಾನಿಯಾದಲ್ಲಿ ಸರಕಾರಿ ವಿಮಾ ಕಂಪನಿಗಳಿಂದಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಒಂದರೆಡು ದಿನಗಳಲ್ಲಿ ಅನುಭವಿ ಪರಿಣಿತ ಸಚಿವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಕೆಲ ಪ್ರದೇಶಗಳಲ್ಲಿ ಒಂದೇ ತೆರನಾದ ಬೆಳೆ ಬೆಳೆಯುವಂತೆ ಹಾಗೂ ವಿಮೆ ಮಾಡಿಸುವಂತೆ ಕೆಲ ವ್ಯಕ್ತಿಗಳು ವಿಮಾ ಕಂಪನಿಗಳ ಜೊತೆಗೂಡಿ ಏಜೆಂಟರಂತೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ರೈತರು ಸಚಿವರ ಗಮನಕ್ಕೆ ತಂದರು. ಇಂಥವರ ಬಗ್ಗೆ ತೀವ್ರ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಂತೋಷ್ ಲಾಡ್ ತಿಳಿಸಿದರು.

ಸಭೆಯಲ್ಲಿ ಎನ್.ಎಚ್.ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಂಟಿ ಕೃಷಿ ನಿರ್ದೇಶಕ ಮಂಜುನಾಥ ವೇದಿಕೆಯಲ್ಲಿ ಇದ್ದರು. ಸಭೆಯಲ್ಲಿ ಜಿಲ್ಲೆಯ ರೈತ ಮುಖಂಡರು ಬೆಳೆ ಕಟಾವು, ಬೆಳೆ ಹಾನಿ, ವಿಮಾ ಕಂಪನಿಗಳ ಅವೈಜ್ಞಾನಿಕ ಪದ್ಧತಿ, ಪರಿಹಾರ ವ್ಯತ್ಯಾಸ ಕುರಿತಂತೆ ಅಭಿಪ್ರಾಯ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X