ಬೀದರ್‌ | ಔರಾದ್‌ ತಾಲೂಕಿನಲ್ಲಿ ಜೆಜೆಎಂ ಕಾಮಗಾರಿ ಕಳಪೆ: ತನಿಖೆಗೆ ಆಗ್ರಹ

Date:

Advertisements

‌ಬೀದರ್‌ ಜಿಲ್ಲೆಯ ಔರಾದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿಯಿಂದ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿದರು.

ʼಔರಾದ ತಾಲೂಕಿನ ನಿಡೋದಾ, ಬೆಡಕುಂದಾ, ಬಳತ (ಬಿ) ಬಳತ (ಕೆ), ನಾಗೂರ (ಎಂ), ಹೆಡಗಾಪೂರ, ರಕ್ಷಾಳ, ಆಲೂರ (ಕೆ), ಬೋರಾಳ, ಅಲ್ಲಾಪೂರ, ಸಂತಪೂರ, ಬಲ್ಲೂರ, ಸುಂಧಾಳ, ಮಮದಾಪೂರ, ಕೌಡಗಾಂವ, ಕೌಠಾ, ಜವಲತಾಂಡಾ, ಕಾರಬಾರ ತಾಂಡ, ಮಾಹರಾಜವಾಡಿ ತಾಂಡಾ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೈಗೊಂಡಿರುವ ಜಲ ಜೀವನ್‌ ಮಿಷನ್ ಕಾಮಗಾರಿ ಕಳಪೆ ಮಟ್ಟದಿಂದ ನಡೆಸಿ, ನಕಲಿ ಬಿಲ್ ಸೃಷ್ಟಿಸಿ ಸರ್ಕಾರದ ಕೋಟ್ಯಾಂತರ ಹಣ ಲೂಟಿ ಮಾಡಿದ್ದಾರೆʼ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ʼಈ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಹಲವು ಬಾರಿ ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದರೂ ಇಲ್ಲಿಯವರೆಗೂ ಪರಿಶೀಲನೆ ನಡೆಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳ, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡಿಲ್ಲ. ಈಗಲಾದರೂ ಉನ್ನತ ಮಟ್ಟದ ತನಿಖೆ ತಂಡ ರಚಿಸಿ ತಪ್ಪಿಸ್ಥ ಅಧಿಕಾರಿಗಳ, ಗುತ್ತಿಗೆದಾರರ ವಿರುದ್ಧ ಕಾನೂನಿನ ಕ್ರಮ ಜರುಗಿಸಬೇಕು. ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಆಮರಣ ಉಪವಾಸ ಸತ್ಯಗ್ರಹ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

Advertisements

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು..

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬುಲ್ಡೋಜರ್‌, ತಲವಾರು ಹೇಳಿಕೆ; ಬಿಜೆಪಿ ಮುಖಂಡರಿಗೆ ಸೌಹಾರ್ದ ಕರ್ನಾಟಕ ಬೇಕಿಲ್ಲವೇ?!

ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಶಿಂಧೆ, ನಗರ ಘಟಕ ಅಧ್ಯಕ್ಷ ವಿನೋದ ಶಿಂಧೆ, ಉಪಾಧ್ಯಕ್ಷ ಮಹೇಂದ್ರಕುಮಾರ ಹೊಸಮನಿ ಸೇರಿದಂತೆ ಪ್ರಮುಖರಾದ ಶಿವ ಬೇಲೂರೆ, ಆಕಾಶ ತ್ರಿಮುಖೆ, ಧನರಾಜ ಮೇತ್ರೆ, ಗುರು ನೇಮತಾಬಾದ, ಸಂದೀಪ ಕಾಂಟೆ, ಸಂಗಮೇಶ ಭಾವಿದೊಡ್ಡಿ, ಜೈಭೀಮ ಖ್ಯಾದೆ, ಗೌತಮ ಪ್ರಸಾದ, ಅಖೀಲೇಶ ಸಾಗರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X