ವಿಜಯಪುರ | ರೇಷನ್ ಕೊಡದ ಅನ್ನಭಾಗ್ಯ ವಿತರಕರ ಲೈಸೆನ್ಸ್ ರದ್ದುಗೊಳಿಸುವಂತೆ ರೈತ ಸಂಘ ಒತ್ತಾಯ

Date:

Advertisements

ಅಲಮೇಲ ತಾಲೂಕಿನ ಆಹೇರಿ ಗ್ರಾಮದ ಅನ್ನಭಾಗ್ಯ ದಿನಸಿ ವಿತರಕ ಗ್ರಾಹಕರಿಗೆ 2-3 ತಿಂಗಳಿಂದ ರೇಷನ್ ಕೊಡದೆ ಸತಾಯಿಸಿ, ಪ್ರಶ್ನಿಸಿದರೆ ಪಡಿತರ ಚೀಟಿ ರದ್ದುಗೊಳಿಸುವುದಾಗಿ ಹೆದರಿಸುತ್ತಾರೆ. ಅಂತಹ ಅನ್ನಭಾಗ್ಯ ವಿತರಕರ ಲೈಸೆನ್ಸ್ ರದ್ದುಗೊಳಿಸುವಂತೆ ರೈತ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.

ಜಿಲ್ಲೆಯ ಅಲಮೇಲ ತಾಲೂಕು ಆಹೇರಿ ಗ್ರಾಮದ ನ್ಯಾಯಬೆಲೆ ಅಂಗಡಿಯ ದಿನಸಿ ಹಂಚುವ ವಿತರಕ ತಿಂಗಳ ದಿನಸಿ ಕೊಡದೆ 2-3 ತಿಂಗಳು ಮುಂದೂಡುತ್ತಿದ್ದು, ಜನರು ಪ್ರಶ್ನಿಸಿದರೆ ಪಡಿತರ ಚೀಟಿ ರದ್ದುಗೊಳಿಸುವುದಾಗಿ ಎದುರಿಸಿದ ವಿತರಕರ ಲೈಸನ್ಸ್ ರದ್ದು ಮಾಡುವಂತೆ ರೈತ ಸಂಘಟಕರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ವಿನಯಕುಮಾರ ಪಾಟೀಲ‌ ಅವರಿಗೆ ಒತ್ತಾಯಿಸಿದರು.

ಯಾರೂ ಹಸಿವಿನಿಂದ ಸಾಯಬಾರದು ಎಂಬ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಆದರೆ ಆಹೇರಿ(ಜ) ಗ್ರಾಮದ ದಿನಸಿ ಹಂಚುವ ವಿತರಕರು ಫಲಾನುಭವಿಗಳಿಂದ ಹೆಬ್ಬೆಟ್ಟು ಒತ್ತಿಸಿಕೊಂಡು ಮುಂದಿನ ತಿಂಗಳು ಬನ್ನಿ ಎಂದು 2 ತಿಂಗಳಿಂದ ದಿನಸಿ ಕೊಡದೇ ಮುಂದೂಡುತ್ತಿದ್ದಾರೆ. ಹೆಚ್ಚಿಗೆ ಕೇಳಿದರೆ ನಿಮ್ಮ ರೇಷನ್ ಕಾರ್ಡ್‌ ರದ್ದು ಪಡಿಸುವುದಾಗಿ ಹೆದರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಗ್ರಾಮದ ರೈತ ಸಂಘದ ಅಧ್ಯಕ್ಷ ಆತ್ಮಾನಂದ ಭೈರೋಡಗಿ ಮಾತನಾಡಿ, ಈ ವಿತರಕರು ಪ್ರತಿ ತಿಂಗಳು 100 ಜನರಿಗೆ ರೇಷನ್ ಖಾಲಿ ಆಗಿದೆ, ಮೇಲಿನಿಂದಲೇ ಕಡಿಮೆ ಕಳುಹಿಸಿದ್ದಾರೆ, ಮುಂದಿನ ತಿಂಗಳು ಬನ್ನಿ ಎಂದು ಕಳುಹಿಸುತ್ತಿದ್ದಾರೆ. ಪ್ರಶ್ನಿಸಿದವರಿಗೆ ರೇಷನ್ ಕೊಡುವುದಿಲ್ಲ ಎಂದರು.

ಮನವಿ ಸ್ವೀಕರಿಸಿದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ವಿನಯಕುಮಾರ ಪಾಟೀಲ ಮಾತನಾಡಿ, ಹೆಬ್ಬೆಟ್ಟು ಒತ್ತಿಸಿಕೊಂಡು 2-3 ತಿಂಗಳ ನಂತರ ದಿನಸಿ ಕೊಡುವ ಯಾವುದೇ ಪದ್ದತಿ ಇಲ್ಲ, ಹೆಬ್ಬೆಟ್ಟು ಒತ್ತಿಸಿಕೊಂಡ ತಕ್ಷಣದಲ್ಲಿ ದಿನಸಿ ವಿತರಣೆ ಮಾಡಬೇಕು. ಸಾರ್ವಜನಿಕರು ಇಂತಹ ಕಡೆಗೆ ಅನ್ಯಾಯವಾದರೆ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು. ಈ ಕೂಡಲೇ ತನಿಖಾ ತಂಡ ರಚಿಸಿ‌ ತಪ್ಪು ಜರುಗಿದ್ದರೆ ಲೈಸನ್ಸ್ ರದ್ದು ಮಾಡಿ ಬೇರೆಯವರಿಗೆ ಕೊಡುತ್ತೇವೆ ಎಂದರು.

ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ವಿಜಯಪುರ ತಾಲೂಕಾ ಉಪಾಧ್ಯಕ್ಷ ಪ್ರಕಾಶ ತೇಲಿ, ತಾಲೂಕಾ ಸಮೂಹ ಮಾಧ್ಯಮ ಪ್ರತಿನಿಧಿ ಜಯಸಿಂಗ ರಜಪೂತ, ಅರವಿಂದ ರಜಪೂತ, ತಿಪ್ಪರಾಯ ಭೈರೊಡಗಿ, ಚನ್ನವೀರ ವಾಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X