ಕಲಬುರಗಿ | ಮೊಸಳೆ ಕಣ್ಣೀರು ಹಾಕಬೇಡಿ, ಮೊದಲು ಅನ್ನದಾತರಿಗೆ ಉತ್ತರಿಸಿ: ಶರಣಬಸಪ್ಪ ಮಮಶೆಟ್ಟಿ

Date:

Advertisements

ತೊಗರಿ ನಾಡಿನಲ್ಲಿ ತೊಗರಿ ಬೆಳೆಗಾರರಿಗೆ ಪರಿಹಾರ ಮತ್ತು ಬೆಳೆವಿಮೆ ಹಣ ಬಿಡುಗಡೆ ಮಾಡದೆ ಅನ್ಯಾಯ ಮಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊಸಳೆ ಕಣ್ಣೀರು ಹಾಕುವುದನ್ನು ಬಿಟ್ಟು ಮೊದಲು ಅನ್ನದಾತರಿಗೆ ಉತ್ತರಿಸಬೇಕು. ತೊಗರಿ ನಾಡಿಗೆ ಬರಲು ಅವರಿಗೆ ಯಾವ ಮುಖವಿದೆ ಎಂದು ಕಲಬುರಗಿ ರೈತ ಸಂಘದ ಮುಖಂಡ ಶರಣಬಸಪ್ಪ ಮಮಶೆಟ್ಟಿ ಕಿಡಿಕಾರಿದ್ದಾರೆ.

“ನೆಟೆ ರೋಗದಿಂದ ಒಣಗಿಹೋದ ತೊಗರಿ ಬೆಳೆಗಾರರಿಗೆ ಪರಿಹಾರ ಘೋಷಿಸಿ, ರೈತರಿಗೆ ಆಸೆ ಹುಟ್ಟಿಸಿ  ಹಣ ಬಿಡುಗಡೆ ಮಾಡಲಾರದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರಿಗೆ ದ್ರೋಹ ಬಗೆದಿವೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ ರೈತರ ಖಾತೆಗೆ ಹಣ ಯಾಕೆ ಜಮಾ ಮಾಡಲಿಲ್ಲವೆಂದು  ಮೊದಲು ರೈತರಿಗೆ ಉತ್ತರಿಸಲಿ” ಎಂದು ಆಗ್ರಹಿಸಿದ್ದಾರೆ.

“ರಾಜ್ಯ ಸರ್ಕಾರ ರೈತರಿಗೆ ಸುಳ್ಳು, ಮೋಸ, ವಂಚನೆ ಮಾಡಿ, ಕೇವಲ ಅಧಿಕಾರದ ಕುರ್ಚಿಯ ಆಸೆಗಾಗಿ ಚುನಾವಣೆ ಗಿಮಿಕ್ ಮಾಡೋದನ್ನು ಕೈಬಿಟ್ಟು ರೈತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

Advertisements

“ಬೆಳೆವಿಮೆ ಹಣ ಕಟ್ಟಿದ ಎಲ್ಲ ರೈತರಿಗೆ ವಿಮೆ ಹಣ ಬಿಡುಗಡೆ ಮಾಡಲಾಗದೆ ನೆನೆಗುದಿಗೆ ಹಾಕಿ ಯುನಿವರ್ಸೆಲ್‌ ಸೋಂಪೊ ಇನ್ಸೂರೆನ್ಸ್ ಕಂಪನಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ರೈತರ ನೆರವಿಗೆ ಬಾರದ ರಾಜ್ಯದ ಮುಖ್ಯಮಂತ್ರಿ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ರೈತರ ಎದುರು ಸುಳ್ಳು ಹೇಳಿಕೊಂಡು ಓಡಾಡುತ್ತಿರುವ ಮುಖ್ಯಮಂತ್ರಿ ರೈತ ವಿರೋಧಿ ಯುನಿವರ್ಸೆಲ್‌ ಸೋಂಪೊ ಇನ್ಸೂರೆನ್ಸ್ ಕಂಪನಿ ಬೆನ್ನಿಗೆ ನಿಂತು ಕಂಪನಿಯೊಂದಿಗೆ ಶಾಮೀಲಾದಂತೆ ಕಾಣುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?

“ಕಲಬುರಗಿ ಮತ್ತು ಯಾದಗಿರಿ ಡಿಸಿಸಿ ಬ್ಯಾಂಕ್‌ನಿಂದ ಸಾಲ ಮಂಜೂರಾಗಿರುವ ರೈತರಿಗೆ ಸಾಲದ ಹಣ ನೀಡಲಾರದೆ ಪಹಣಿಯಲ್ಲಿ ಭೋಜಾ ಏರಿಸಿ ರೈತರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಆದರೆ ಮುಖ್ಯಮಂತ್ರಿ ಮಾತ್ರ ಕಿಂಚಿತ್ತೂ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ.  ಅನ್ನದಾತರಿಗೆ ಬೇಜವಾಬ್ದಾರಿತನ ತೋರುತ್ತಿರುವ ಸರ್ಕಾರದ ನೀತಿ ಖಂಡನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X